• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಕೋಡ ಮಾರಿಕೊಂಡು ಜೀವನ ಸಾಗಿಸಬಹುದು ಎಂಬ ಮೋದಿ ಸಲಹೆ ಕೈ ಕಾರ್ಯಕರ್ತನ ಜೀವನವೇ ಬದಲಿಸಿದೆ ನೋಡಿ!

TNN Correspondent Posted On June 19, 2018
0


0
Shares
  • Share On Facebook
  • Tweet It

ನಿರುದ್ಯೋಗಿಯಾಗಿರುವುದಕ್ಕಿಂತ ಪಕೋಡ ಮಾರಿಕೊಂಡು, ನಿತ್ಯ ನೂರಾರು ರೂಪಾಯಿ ಸಂಪಾದಿಸುವುದು ಲೇಸು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಹೇಳಿದಾಗ ವಿವಾದಕ್ಕೆ ಕಾರಣವಾಯಿತು. ಅದರಲ್ಲೂ ರಾಹುಲ್ ಗಾಂಧಿಯವರಂತೂ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದರು. ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ವ್ಯಕ್ತವಾದವು. ಜನರಿಗೆ ಪಕೋಡ ಮಾರಲು ಹಚ್ಚುವ ಪ್ರಧಾನಿ ಎಂದು ಜರಿದರು.

ನರೇಂದ್ರ ಮೋದಿ ಅವರು ವಾಸ್ತವದಲ್ಲಿ ಸುಮ್ಮನಿರುವುದಕ್ಕಿಂತ ಯಾವುದಾದರೂ ಉದ್ಯೋಗ ಕೈಗೊಳ್ಳುವುದು, ಕೆಲಸ ಮಾಡುವ ಮೂಲಕ ದುಡಿದು ತಿನ್ನುವ ದಾರಿ ತೋರಿಸಿದ್ದರು. ಇದಕ್ಕೆ ಕಾಂಗ್ರೆಸ್ ಸೇರಿ ಹಲವು ಪ್ರತಿಪಕ್ಷಗಳು ಸುಖಾಸುಮ್ಮನೆ ವಿವಾದ ಎಬ್ಬಿಸಿದ್ದವು.

ಆದರೆ ನರೇಂದ್ರ ಮೋದಿ ಅವರ ಈ ಸಲಹೆ ಈಗ ಕಾಂಗ್ರೆಸ್ ಕಾರ್ಯಕರ್ತನ ಜೀವನವನ್ನೇ ಬದಲಿಸಿದ್ದು, ಪಕೋಡ ಮಾರಿ ಹೆಮ್ಮೆಯ ಜೀವನ ನಡೆಸುತ್ತಿದ್ದಾನೆ. ನಿತ್ಯ ನೂರಾರು ರೂಪಾಯಿ ಸಂಪಾದಿಸುವ ಮೂಲಕ ತನ್ನ ಕಾಲ ಮೇಲೆ ತಾನು ನಿಂತುಕೊಂಡಿದ್ದಾನೆ. ಸ್ವಾವಲಂಬಿ ಜೀವನ ನಡೆಸುತ್ತಿದ್ದಾನೆ.

ಹೌದು, ವಡೋಧರಾದಲ್ಲಿ ಹಿಂದಿ ಸ್ನಾತಕೋತ್ತರ ಪದವಿ ಪಡೆದಿದ್ದ ನಾರಾಯಣ ಭಾಯಿ ರಜಪೂತ್, ಎಲ್ಲೂ ಕೆಲಸ ಸಿಗದೆ ನಿರುದ್ಯೋಗಿಯಾಗಿದ್ದರು. ಕಾಂಗ್ರೆಸ್ ಕಾರ್ಯಕರ್ತನಾಗಿ ಓಡಾಡಿಕೊಂಡಿದ್ದರು. ಕಲಿತ ವಿದ್ಯೆಗೆ ತಕ್ಕ ಉದ್ಯೋಗ ಸಿಗದೆ ಪರದಾಡುತ್ತಿದ್ದರು. ಆದರೆ ಯಾವಾಗ ನರೇಂದ್ರ ಮೋದಿ ಅವರು ಪಕೋಡ ಮಾಡಿಯೂ ಜೀವನ ಸಾಗಿಸಬಹುದು ಎಂದು ಸಲಹೆ ನೀಡಿದರೋ, ಅಲ್ಲಿಂದ ರಜಪೂತ್ ದಿಸೆಯೇ ಬದಲಾಗಿದೆ.

ಮೋದಿ ಮಾತಿನಿಂದ ಪ್ರೇರಣೆಗೊಂಡು ವಡೋದರಾದಲ್ಲಿ ಶ್ರೀರಾಮ ದಲ್ವಾಡ ಎಂಬ ಹೆಸರಿನಲ್ಲಿ ಪಕೋಡ ಅಂಗಡಿ ತೆರೆದಿರುವ ರಜಪೂತ್ ನಿತ್ಯ 500-600 ಕೆಜಿ ಪಕೋಡ ಮಾರುವ ಮೂಲಕ ಸಾವಿರಾರು ರೂಪಾಯಿ ಗಳಿಸುತ್ತಿದ್ದಾರೆ. ಆ ಮೂಲಕ ದುಡಿದು ತಿನ್ನುತ್ತಿದ್ದಾರೆ. ಈಗ ಹೇಳಿ ನರೇಂದ್ರ ಮೋದಿ ಅವರು ಹೇಳಿದ್ದರಲ್ಲಿ ಯಾವ ತಪ್ಪಿದೆ?

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search