• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಕೋಡ ಮಾರಿಕೊಂಡು ಜೀವನ ಸಾಗಿಸಬಹುದು ಎಂಬ ಮೋದಿ ಸಲಹೆ ಕೈ ಕಾರ್ಯಕರ್ತನ ಜೀವನವೇ ಬದಲಿಸಿದೆ ನೋಡಿ!

TNN Correspondent Posted On June 19, 2018
0


0
Shares
  • Share On Facebook
  • Tweet It

ನಿರುದ್ಯೋಗಿಯಾಗಿರುವುದಕ್ಕಿಂತ ಪಕೋಡ ಮಾರಿಕೊಂಡು, ನಿತ್ಯ ನೂರಾರು ರೂಪಾಯಿ ಸಂಪಾದಿಸುವುದು ಲೇಸು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಹೇಳಿದಾಗ ವಿವಾದಕ್ಕೆ ಕಾರಣವಾಯಿತು. ಅದರಲ್ಲೂ ರಾಹುಲ್ ಗಾಂಧಿಯವರಂತೂ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದರು. ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ವ್ಯಕ್ತವಾದವು. ಜನರಿಗೆ ಪಕೋಡ ಮಾರಲು ಹಚ್ಚುವ ಪ್ರಧಾನಿ ಎಂದು ಜರಿದರು.

ನರೇಂದ್ರ ಮೋದಿ ಅವರು ವಾಸ್ತವದಲ್ಲಿ ಸುಮ್ಮನಿರುವುದಕ್ಕಿಂತ ಯಾವುದಾದರೂ ಉದ್ಯೋಗ ಕೈಗೊಳ್ಳುವುದು, ಕೆಲಸ ಮಾಡುವ ಮೂಲಕ ದುಡಿದು ತಿನ್ನುವ ದಾರಿ ತೋರಿಸಿದ್ದರು. ಇದಕ್ಕೆ ಕಾಂಗ್ರೆಸ್ ಸೇರಿ ಹಲವು ಪ್ರತಿಪಕ್ಷಗಳು ಸುಖಾಸುಮ್ಮನೆ ವಿವಾದ ಎಬ್ಬಿಸಿದ್ದವು.

ಆದರೆ ನರೇಂದ್ರ ಮೋದಿ ಅವರ ಈ ಸಲಹೆ ಈಗ ಕಾಂಗ್ರೆಸ್ ಕಾರ್ಯಕರ್ತನ ಜೀವನವನ್ನೇ ಬದಲಿಸಿದ್ದು, ಪಕೋಡ ಮಾರಿ ಹೆಮ್ಮೆಯ ಜೀವನ ನಡೆಸುತ್ತಿದ್ದಾನೆ. ನಿತ್ಯ ನೂರಾರು ರೂಪಾಯಿ ಸಂಪಾದಿಸುವ ಮೂಲಕ ತನ್ನ ಕಾಲ ಮೇಲೆ ತಾನು ನಿಂತುಕೊಂಡಿದ್ದಾನೆ. ಸ್ವಾವಲಂಬಿ ಜೀವನ ನಡೆಸುತ್ತಿದ್ದಾನೆ.

ಹೌದು, ವಡೋಧರಾದಲ್ಲಿ ಹಿಂದಿ ಸ್ನಾತಕೋತ್ತರ ಪದವಿ ಪಡೆದಿದ್ದ ನಾರಾಯಣ ಭಾಯಿ ರಜಪೂತ್, ಎಲ್ಲೂ ಕೆಲಸ ಸಿಗದೆ ನಿರುದ್ಯೋಗಿಯಾಗಿದ್ದರು. ಕಾಂಗ್ರೆಸ್ ಕಾರ್ಯಕರ್ತನಾಗಿ ಓಡಾಡಿಕೊಂಡಿದ್ದರು. ಕಲಿತ ವಿದ್ಯೆಗೆ ತಕ್ಕ ಉದ್ಯೋಗ ಸಿಗದೆ ಪರದಾಡುತ್ತಿದ್ದರು. ಆದರೆ ಯಾವಾಗ ನರೇಂದ್ರ ಮೋದಿ ಅವರು ಪಕೋಡ ಮಾಡಿಯೂ ಜೀವನ ಸಾಗಿಸಬಹುದು ಎಂದು ಸಲಹೆ ನೀಡಿದರೋ, ಅಲ್ಲಿಂದ ರಜಪೂತ್ ದಿಸೆಯೇ ಬದಲಾಗಿದೆ.

ಮೋದಿ ಮಾತಿನಿಂದ ಪ್ರೇರಣೆಗೊಂಡು ವಡೋದರಾದಲ್ಲಿ ಶ್ರೀರಾಮ ದಲ್ವಾಡ ಎಂಬ ಹೆಸರಿನಲ್ಲಿ ಪಕೋಡ ಅಂಗಡಿ ತೆರೆದಿರುವ ರಜಪೂತ್ ನಿತ್ಯ 500-600 ಕೆಜಿ ಪಕೋಡ ಮಾರುವ ಮೂಲಕ ಸಾವಿರಾರು ರೂಪಾಯಿ ಗಳಿಸುತ್ತಿದ್ದಾರೆ. ಆ ಮೂಲಕ ದುಡಿದು ತಿನ್ನುತ್ತಿದ್ದಾರೆ. ಈಗ ಹೇಳಿ ನರೇಂದ್ರ ಮೋದಿ ಅವರು ಹೇಳಿದ್ದರಲ್ಲಿ ಯಾವ ತಪ್ಪಿದೆ?

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search