• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಯೋಗದ ಯೋಗವನ್ನೇ ಬದಲಾಯಿಸಿದ ಮೋದಿ, ಅವರಿಂದಲೇ ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ!

ವಿಶಾಲ್ ಗೌಡ ಕುಶಾಲನಗರ Posted On June 21, 2018
0


0
Shares
  • Share On Facebook
  • Tweet It

ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ದೇಶದ ಅಭಿವೃದ್ಧಿಯಷ್ಟೇ ಅಲ್ಲ, ಭಾರತದ ಘನತೆಯೂ ಗಾಳಿಪಟದಂತೆ ಬಾನೆತ್ತರಕ್ಕೆ ಹಾರುತ್ತಿದೆ. ಪ್ರಸ್ತುತ ಭಾರತದ ಪ್ರಧಾನಿಯೊಬ್ಬರು ವಿಶ್ವದ ಯಾವುದೇ ದೇಶಕ್ಕೆ ಹೋಗಲಿ, ಆ ದೇಶದ ನಾಯಕರು ಮೋದಿ ಅವರನ್ನು ಸ್ವಾಗತಿಸಲು ತುದಿಗಾಲಿನಲ್ಲಿ ನಿಂತಿರುತ್ತಾರೆ. ಮೋದಿ ಮಾತಿಗೆ ವಿಶ್ವವೇ ಕಿವಿಯಾಗುತ್ತದೆ. ಇವರ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತದೆ.

ಇಂತಿಪ್ಪ ನರೇಂದ್ರ ಮೋದಿ ಅವರು 2014 ಡಿಸೆಂಬರ್ ನಲ್ಲಿ ಒಂದು ಮನವಿ ಮಾಡಿದ್ದರು. ವಿಶ್ವಸಂಸ್ಥೆ ಯೋಗದ ಜಾಗೃತಿಗಾಗಿ, ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯನ್ನಾಗಲಿ ಮಾಡಬೇಕು ಎಂದು ಕೋರಿದ್ದರು. ಇದಕ್ಕೆ ಸ್ಪಂದಿಸಿದ್ದ ವಿಶ್ವಸಂಸ್ಥೆ, ಮೋದಿ ಅವರ ಮಾತಿಗೆ ಮನ್ನಣೆ ಕೊಟ್ಟು, ಜೂನ್ 21ನ್ನು ವಿಶ್ವ ಯೋಗ ದಿನ ಎಂದು ಘೋಷಿಸಿತು. ಆ ಮೂಲಕ ಭಾರತದಲ್ಲಿ ಜನಿಸಿದ್ದ ಯೋಗ ವಿಶ್ವದ ಯೋಗವಾಗಯಿತು.

2015ರ ಜೂನ್ 21ರಂದು ಮೋದಿ ಅವರ ಆಶಯದಂತೆ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಅಮೆರಿಕ ಸೇರಿ ವಿಶ್ವದ ಹಲವು ರಾಷ್ಟ್ರಗಳು ಯೋಗ ದಿನಾಚರಣೆ ಆಚರಿಸುತ್ತಿವೆ. ಇಂದು ಇಡೀ ವಿಶ್ವವೇ ಯೋಗ ದಿನ ಆಚರಿಸುತ್ತಿದೆ. ಭಾರತದಲ್ಲಿ ಮೋದಿ ನಾಯಕತ್ವದಲ್ಲಿ ಯೋಗ ದಿನ ಆಚರಿಸಲಾಗುತ್ತಿದೆ.

ಅಂದು ನರೇಂದ್ರ ಮೋದಿ ಅವರು ಮಾಡಿದ ಮನಸ್ಸಿನಿಂದ ಪ್ರಸ್ತುತ ಯೋಗಕ್ಕೆ ಅಂತಾರಾಷ್ಟ್ರೀಯ ಸ್ಥಾನಮಾನ ದೊರೆತಿದೆ. ಈ ಬಾರಿಯ ನಾಲ್ಕನೇ ಯೋಗ ದಿನಾಚರಣೆಯನ್ನು ಸುಮಾರು 100ಕ್ಕೂ ಅಧಿಕ ರಾಷ್ಟ್ರಗಳು ಆಚರಿಸುತ್ತಿವೆ ಎಂದು ಆಯುಷ್ ಸಚಿವ ಪಿಯೂಷ್ ಗೋಯೆಲ್ ಮಾಹಿತಿ ನೀಡಿದ್ದಾರೆ.

ಅಲ್ಲದೆ ಇಂದು ನರೇಂದ್ರ ಮೋದಿ ನೇತೃತ್ವದಲ್ಲಿ ಉತ್ತರಾಖಂಡ ರಾಜಧಾನಿ ಡೆಹ್ರಾಡೂನ್ ನಲ್ಲಿ ಯೋಗ ದಿನ ಆಚರಿಸಿದ್ದು, ಸಾವಿರಾರು ಜನ ಭಾಗವಹಿಸಿದ್ದಾರೆ. ನಮ್ಮ ಮೈಸೂರು ಸೇರಿ ದೇಶಾದ್ಯಂತ ಯೋಗ ದಿನ ಆಚರಿಸಲಾಗುತ್ತಿದೆ. ಆದಾಗ್ಯೂ ಈ ಬಾರಿಯ ಯೋಗ ದಿನಕ್ಕೆ ಮೋದಿ ಅವರು ಯೋಗ ಒಂದುಗೂಡಿಸುತ್ತದೆ ಎಂಬ ಘೋಷವಾಕ್ಯ ನೀಡಿದ್ದು, ಅದರಂತೆಯೇ ಎಲ್ಲರೂ ಒಗ್ಗೂಡಿ ಯೋಗ ದಿನ ಆಚರಿಸುತ್ತಿರುವುದು ಸಂತಸದ ಸಂಗತಿಯಾಗಿದೆ.

ಒಟ್ಟಿನಲ್ಲಿ ಭಾರತಕ್ಕೆ ಒಬ್ಬ ದಕ್ಷ ಪ್ರಧಾನಿ ಸಿಕ್ಕರೆ, ದೇಶದ ಗೌರವ ಹೆಚ್ಚಾಗುತ್ತದೆ, ಅಭಿವೃದ್ಧಿಗೆ ಹೊಸ ಭಾಷ್ಯ ಸಿಗುತ್ತದೆ, ಇಡೀ ವಿಶ್ವವೇ ಭಾರತದ ಸಂಸ್ಕೃತಿಯನ್ನು ಪ್ರೀತಿಯಿಂದ ಅಪ್ಪಿಕೊಳ್ಳುತ್ತದೆ ಎಂಬುದಕ್ಕೆ ಯೋಗ ದಿನಾಚರಣೆಯೇ ಸಾಕ್ಷಿ. ಅದೆಲ್ಲದಕ್ಕೂ ಮೋದಿಯವರೇ ಕಾರಣ ಎಂಬುದು ಮತ್ತೊಂದು ಹೆಗ್ಗಳಿಕೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
ವಿಶಾಲ್ ಗೌಡ ಕುಶಾಲನಗರ January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
ವಿಶಾಲ್ ಗೌಡ ಕುಶಾಲನಗರ January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search