• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಯೋಗದ ಯೋಗವನ್ನೇ ಬದಲಾಯಿಸಿದ ಮೋದಿ, ಅವರಿಂದಲೇ ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ!

ವಿಶಾಲ್ ಗೌಡ ಕುಶಾಲನಗರ Posted On June 21, 2018
0


0
Shares
  • Share On Facebook
  • Tweet It

ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ದೇಶದ ಅಭಿವೃದ್ಧಿಯಷ್ಟೇ ಅಲ್ಲ, ಭಾರತದ ಘನತೆಯೂ ಗಾಳಿಪಟದಂತೆ ಬಾನೆತ್ತರಕ್ಕೆ ಹಾರುತ್ತಿದೆ. ಪ್ರಸ್ತುತ ಭಾರತದ ಪ್ರಧಾನಿಯೊಬ್ಬರು ವಿಶ್ವದ ಯಾವುದೇ ದೇಶಕ್ಕೆ ಹೋಗಲಿ, ಆ ದೇಶದ ನಾಯಕರು ಮೋದಿ ಅವರನ್ನು ಸ್ವಾಗತಿಸಲು ತುದಿಗಾಲಿನಲ್ಲಿ ನಿಂತಿರುತ್ತಾರೆ. ಮೋದಿ ಮಾತಿಗೆ ವಿಶ್ವವೇ ಕಿವಿಯಾಗುತ್ತದೆ. ಇವರ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತದೆ.

ಇಂತಿಪ್ಪ ನರೇಂದ್ರ ಮೋದಿ ಅವರು 2014 ಡಿಸೆಂಬರ್ ನಲ್ಲಿ ಒಂದು ಮನವಿ ಮಾಡಿದ್ದರು. ವಿಶ್ವಸಂಸ್ಥೆ ಯೋಗದ ಜಾಗೃತಿಗಾಗಿ, ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯನ್ನಾಗಲಿ ಮಾಡಬೇಕು ಎಂದು ಕೋರಿದ್ದರು. ಇದಕ್ಕೆ ಸ್ಪಂದಿಸಿದ್ದ ವಿಶ್ವಸಂಸ್ಥೆ, ಮೋದಿ ಅವರ ಮಾತಿಗೆ ಮನ್ನಣೆ ಕೊಟ್ಟು, ಜೂನ್ 21ನ್ನು ವಿಶ್ವ ಯೋಗ ದಿನ ಎಂದು ಘೋಷಿಸಿತು. ಆ ಮೂಲಕ ಭಾರತದಲ್ಲಿ ಜನಿಸಿದ್ದ ಯೋಗ ವಿಶ್ವದ ಯೋಗವಾಗಯಿತು.

2015ರ ಜೂನ್ 21ರಂದು ಮೋದಿ ಅವರ ಆಶಯದಂತೆ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಅಮೆರಿಕ ಸೇರಿ ವಿಶ್ವದ ಹಲವು ರಾಷ್ಟ್ರಗಳು ಯೋಗ ದಿನಾಚರಣೆ ಆಚರಿಸುತ್ತಿವೆ. ಇಂದು ಇಡೀ ವಿಶ್ವವೇ ಯೋಗ ದಿನ ಆಚರಿಸುತ್ತಿದೆ. ಭಾರತದಲ್ಲಿ ಮೋದಿ ನಾಯಕತ್ವದಲ್ಲಿ ಯೋಗ ದಿನ ಆಚರಿಸಲಾಗುತ್ತಿದೆ.

ಅಂದು ನರೇಂದ್ರ ಮೋದಿ ಅವರು ಮಾಡಿದ ಮನಸ್ಸಿನಿಂದ ಪ್ರಸ್ತುತ ಯೋಗಕ್ಕೆ ಅಂತಾರಾಷ್ಟ್ರೀಯ ಸ್ಥಾನಮಾನ ದೊರೆತಿದೆ. ಈ ಬಾರಿಯ ನಾಲ್ಕನೇ ಯೋಗ ದಿನಾಚರಣೆಯನ್ನು ಸುಮಾರು 100ಕ್ಕೂ ಅಧಿಕ ರಾಷ್ಟ್ರಗಳು ಆಚರಿಸುತ್ತಿವೆ ಎಂದು ಆಯುಷ್ ಸಚಿವ ಪಿಯೂಷ್ ಗೋಯೆಲ್ ಮಾಹಿತಿ ನೀಡಿದ್ದಾರೆ.

ಅಲ್ಲದೆ ಇಂದು ನರೇಂದ್ರ ಮೋದಿ ನೇತೃತ್ವದಲ್ಲಿ ಉತ್ತರಾಖಂಡ ರಾಜಧಾನಿ ಡೆಹ್ರಾಡೂನ್ ನಲ್ಲಿ ಯೋಗ ದಿನ ಆಚರಿಸಿದ್ದು, ಸಾವಿರಾರು ಜನ ಭಾಗವಹಿಸಿದ್ದಾರೆ. ನಮ್ಮ ಮೈಸೂರು ಸೇರಿ ದೇಶಾದ್ಯಂತ ಯೋಗ ದಿನ ಆಚರಿಸಲಾಗುತ್ತಿದೆ. ಆದಾಗ್ಯೂ ಈ ಬಾರಿಯ ಯೋಗ ದಿನಕ್ಕೆ ಮೋದಿ ಅವರು ಯೋಗ ಒಂದುಗೂಡಿಸುತ್ತದೆ ಎಂಬ ಘೋಷವಾಕ್ಯ ನೀಡಿದ್ದು, ಅದರಂತೆಯೇ ಎಲ್ಲರೂ ಒಗ್ಗೂಡಿ ಯೋಗ ದಿನ ಆಚರಿಸುತ್ತಿರುವುದು ಸಂತಸದ ಸಂಗತಿಯಾಗಿದೆ.

ಒಟ್ಟಿನಲ್ಲಿ ಭಾರತಕ್ಕೆ ಒಬ್ಬ ದಕ್ಷ ಪ್ರಧಾನಿ ಸಿಕ್ಕರೆ, ದೇಶದ ಗೌರವ ಹೆಚ್ಚಾಗುತ್ತದೆ, ಅಭಿವೃದ್ಧಿಗೆ ಹೊಸ ಭಾಷ್ಯ ಸಿಗುತ್ತದೆ, ಇಡೀ ವಿಶ್ವವೇ ಭಾರತದ ಸಂಸ್ಕೃತಿಯನ್ನು ಪ್ರೀತಿಯಿಂದ ಅಪ್ಪಿಕೊಳ್ಳುತ್ತದೆ ಎಂಬುದಕ್ಕೆ ಯೋಗ ದಿನಾಚರಣೆಯೇ ಸಾಕ್ಷಿ. ಅದೆಲ್ಲದಕ್ಕೂ ಮೋದಿಯವರೇ ಕಾರಣ ಎಂಬುದು ಮತ್ತೊಂದು ಹೆಗ್ಗಳಿಕೆ.

0
Shares
  • Share On Facebook
  • Tweet It




Trending Now
ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
ವಿಶಾಲ್ ಗೌಡ ಕುಶಾಲನಗರ July 19, 2025
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
ವಿಶಾಲ್ ಗೌಡ ಕುಶಾಲನಗರ July 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
  • Popular Posts

    • 1
      ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • 2
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 3
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 4
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 5
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ

  • Privacy Policy
  • Contact
© Tulunadu Infomedia.

Press enter/return to begin your search