• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಾಖಲೆ ಬರೆಯಿತು ಯೋಗ ದಿನಾಚರಣೆ, 1.05 ಲಕ್ಷ ಜನರ ಸೇರಿಸಿ ಗಿನ್ನೆಸ್ ದಾಖಲೆ ಬರೆದ ಬಾಬಾ ರಾಮದೇವ್!

TNN Correspondent Posted On June 21, 2018
0


0
Shares
  • Share On Facebook
  • Tweet It

2015ರಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುತ್ತ ಬರುತ್ತಿದ್ದು, ಯೋಗದ ಜನಕನಾದ ಭಾರತದಲ್ಲಿ ಯೋಗದ ಕುರಿತು ಹಲವು ದಾಖಲೆ ನಿರ್ಮಾಣವಾಗುತ್ತಿರುವುದು ಹಾಗೂ ಲಕ್ಷಾಂತರ ಯುವಕರು ಸ್ಫೂರ್ತಿಯಿಂದ ಪಾಲ್ಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಕಳೆದ ವರ್ಷ ನಮ್ಮ ಮೈಸೂರಿನಲ್ಲಿ ಒಂದು ಲಕ್ಷ ಜನ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ಮೂಲಕ ವಿಶ್ವದಾಖಲೆ ಬರೆದಿದ್ದು ನಮಗೆಲ್ಲ ಹೆಮ್ಮೆಯ ಸಂಗತಿಯಾಗಿತ್ತು.

ಅದೇ ರೀತಿ ಈ ಬಾರಿಯೂ ಪ್ರತಿ ಭಾರತೀಯನೂ ಹೆಮ್ಮೆ ಪಡುವ ಸಂಗತಿ ಜರುಗಿದ್ದು, ರಾಜಸ್ಥಾನದ ಕೋಟಾದಲ್ಲಿ ಯೋಗ ಗುರು ಬಾಬಾ ರಾಮದೇವ್ ನೇತೃತ್ವದಲ್ಲಿ ಆಯೋಜಿಸಿದ್ದ ಯೋಗ ದಿನಾಚರಣೆಯಲ್ಲಿ ಸುಮಾರು 1.05 ಲಕ್ಷ ಜನ ಪಾಲ್ಗೊಂಡು ಯೋಗ ಮಾಡಿದ್ದಾರೆ. ಇದು ಒಂದೇ ಕಾರ್ಯಕ್ರಮದಲ್ಲಿ ಹೆಚ್ಚು ಜನ ಪಾಲ್ಗೊಂಡಿದ್ದಾರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಗಿನ್ನೆಸ್ ದಾಖಲೆಯಾಗಿದೆ.

ಹೌದು, ಪತಂಜಲಿ ಸಂಸ್ಥೆಯಿಂದ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ವಸುಂಧರಾ ರಾಜೆ ಶಿಂಧ್ಯಾ ಸೇರಿ ಹಲವು ಗಣ್ಯರು ಭಾಗವಹಿಸಿದ್ದಾರೆ. ಇದುವರೆಗೆ ಒಂದು ಲಕ್ಷ ಜನ ಯೋಗ ಮಾಡಿದ್ದು ದಾಖಲೆಯಾಗಿತ್ತು. ಆದರೆ ಈ  ಬಾರಿ 1.05 ಲಕ್ಷ ಜನ ಸೇರುವ ಮೂಲಕ ಗಿನ್ನೆಸ್ ದಾಖಲೆ ಬರೆಯಲಾಗಿದೆ.

ಅಲ್ಲದೆ ಈ ಹಿಂದೆ ಪತಂಜಲಿ ಸಂಸ್ಥೆಯಿಂದ ಸುಮಾರು 51 ತಾಸುಗಳ ಸತತ ಯೋಗ ಮ್ಯಾರಾಥಾನ್ ಆಯೋಜಿಸಿದ್ಸು ಸಹ ವಿಶ್ವ ದಾಖಲೆಯಾಗಿತ್ತು. ಈ ಯೋಗ ಮ್ಯಾರಾಥಾನ್ ನಲ್ಲಿ ಪತಂಜಲಿ ಯೋಗ ಪೀಠದ ಜೈಪಾಲ್ ಗೋಪಾಲ್ ಡಂಗಿ ಹಾಗೂ ಮೋಹನ್ ಶಂಕರ್ ರಾವ್ ಠಾಕ್ರೆ ಸೇರಿ ಹಲವು ಜನ ಭಾಗವಹಿಸಿದ್ದರು.

ಇಂದು ಬೆಳಗ್ಗೆ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ಆಯೋಜಿಸಿದ್ದ ಯೋಗ ದಿನದ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಯೋಗ ಮಾಡಲಾಗಿದ್ದು, ಸುಮಾರು 50 ಸಾವಿರಕ್ಕೂ ಅಧಿಕ ಜನ ಪಾಲ್ಗೊಂಡಿದ್ದರು ಎಂದು ತಿಳಿದುಬಂದಿದೆ.

 

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search