• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದಾಖಲೆ ಬರೆಯಿತು ಯೋಗ ದಿನಾಚರಣೆ, 1.05 ಲಕ್ಷ ಜನರ ಸೇರಿಸಿ ಗಿನ್ನೆಸ್ ದಾಖಲೆ ಬರೆದ ಬಾಬಾ ರಾಮದೇವ್!

TNN Correspondent Posted On June 21, 2018


  • Share On Facebook
  • Tweet It

2015ರಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುತ್ತ ಬರುತ್ತಿದ್ದು, ಯೋಗದ ಜನಕನಾದ ಭಾರತದಲ್ಲಿ ಯೋಗದ ಕುರಿತು ಹಲವು ದಾಖಲೆ ನಿರ್ಮಾಣವಾಗುತ್ತಿರುವುದು ಹಾಗೂ ಲಕ್ಷಾಂತರ ಯುವಕರು ಸ್ಫೂರ್ತಿಯಿಂದ ಪಾಲ್ಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಕಳೆದ ವರ್ಷ ನಮ್ಮ ಮೈಸೂರಿನಲ್ಲಿ ಒಂದು ಲಕ್ಷ ಜನ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ಮೂಲಕ ವಿಶ್ವದಾಖಲೆ ಬರೆದಿದ್ದು ನಮಗೆಲ್ಲ ಹೆಮ್ಮೆಯ ಸಂಗತಿಯಾಗಿತ್ತು.

ಅದೇ ರೀತಿ ಈ ಬಾರಿಯೂ ಪ್ರತಿ ಭಾರತೀಯನೂ ಹೆಮ್ಮೆ ಪಡುವ ಸಂಗತಿ ಜರುಗಿದ್ದು, ರಾಜಸ್ಥಾನದ ಕೋಟಾದಲ್ಲಿ ಯೋಗ ಗುರು ಬಾಬಾ ರಾಮದೇವ್ ನೇತೃತ್ವದಲ್ಲಿ ಆಯೋಜಿಸಿದ್ದ ಯೋಗ ದಿನಾಚರಣೆಯಲ್ಲಿ ಸುಮಾರು 1.05 ಲಕ್ಷ ಜನ ಪಾಲ್ಗೊಂಡು ಯೋಗ ಮಾಡಿದ್ದಾರೆ. ಇದು ಒಂದೇ ಕಾರ್ಯಕ್ರಮದಲ್ಲಿ ಹೆಚ್ಚು ಜನ ಪಾಲ್ಗೊಂಡಿದ್ದಾರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಗಿನ್ನೆಸ್ ದಾಖಲೆಯಾಗಿದೆ.

ಹೌದು, ಪತಂಜಲಿ ಸಂಸ್ಥೆಯಿಂದ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ವಸುಂಧರಾ ರಾಜೆ ಶಿಂಧ್ಯಾ ಸೇರಿ ಹಲವು ಗಣ್ಯರು ಭಾಗವಹಿಸಿದ್ದಾರೆ. ಇದುವರೆಗೆ ಒಂದು ಲಕ್ಷ ಜನ ಯೋಗ ಮಾಡಿದ್ದು ದಾಖಲೆಯಾಗಿತ್ತು. ಆದರೆ ಈ  ಬಾರಿ 1.05 ಲಕ್ಷ ಜನ ಸೇರುವ ಮೂಲಕ ಗಿನ್ನೆಸ್ ದಾಖಲೆ ಬರೆಯಲಾಗಿದೆ.

ಅಲ್ಲದೆ ಈ ಹಿಂದೆ ಪತಂಜಲಿ ಸಂಸ್ಥೆಯಿಂದ ಸುಮಾರು 51 ತಾಸುಗಳ ಸತತ ಯೋಗ ಮ್ಯಾರಾಥಾನ್ ಆಯೋಜಿಸಿದ್ಸು ಸಹ ವಿಶ್ವ ದಾಖಲೆಯಾಗಿತ್ತು. ಈ ಯೋಗ ಮ್ಯಾರಾಥಾನ್ ನಲ್ಲಿ ಪತಂಜಲಿ ಯೋಗ ಪೀಠದ ಜೈಪಾಲ್ ಗೋಪಾಲ್ ಡಂಗಿ ಹಾಗೂ ಮೋಹನ್ ಶಂಕರ್ ರಾವ್ ಠಾಕ್ರೆ ಸೇರಿ ಹಲವು ಜನ ಭಾಗವಹಿಸಿದ್ದರು.

ಇಂದು ಬೆಳಗ್ಗೆ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ಆಯೋಜಿಸಿದ್ದ ಯೋಗ ದಿನದ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಯೋಗ ಮಾಡಲಾಗಿದ್ದು, ಸುಮಾರು 50 ಸಾವಿರಕ್ಕೂ ಅಧಿಕ ಜನ ಪಾಲ್ಗೊಂಡಿದ್ದರು ಎಂದು ತಿಳಿದುಬಂದಿದೆ.

 

  • Share On Facebook
  • Tweet It


- Advertisement -


Trending Now
ಹೆಣ್ಣು ಕಾಮದ ಸರಕಲ್ಲ!
Tulunadu News June 7, 2023
ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
Tulunadu News June 6, 2023
Leave A Reply

  • Recent Posts

    • ಹೆಣ್ಣು ಕಾಮದ ಸರಕಲ್ಲ!
    • ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
  • Popular Posts

    • 1
      ಹೆಣ್ಣು ಕಾಮದ ಸರಕಲ್ಲ!
    • 2
      ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • 3
      ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • 4
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search