• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಮ್ಮು ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ: ಬಂದ್ ಮಾಡುತ್ತೇನೆ ಎಂದ ಪ್ರತ್ಯೇಕತವಾದಿಗಳು ಅಂದರ್

TNN Correspondent Posted On June 21, 2018
0


0
Shares
  • Share On Facebook
  • Tweet It

ದೆಹಲಿ: ದೇಶ ರಕ್ಷಣೆಯ ಹಿತಕ್ಕಾಗಿ ಜಮ್ಮು ಕಾಶ್ಮೀರದಲ್ಲಿ ಪಿಡಿಪಿಯೊಂದಿಗಿನ ಮೈತ್ರಿಯನ್ನೇ ಕಡಿದುಕೊಂಡಿರುವ ಭಾರತೀಯ ಜನತಾ ಪಕ್ಷ ದಿಟ್ಟ ನಿರ್ಧಾರವನ್ನು ಕೈಗೊಂಡು, ಇಡೀ ದೇಶವಾಸಿಗಳಿಗೆ ಸಿಹಿ ಸುದ್ದಿ ಕೊಟ್ಟಿತ್ತು. ಇದೀಗ ಜಮ್ಮು ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಶುರುವಾದ ಬೆನ್ನಲೇ ಪ್ರತ್ಯೇಕತವಾದಿಗಳಿಗೆ ಸೇನೆ ಭರ್ಜರಿ ಶಾಕ್ ನೀಡಿದ್ದು, ಗುರುವಾರವೇ ಸೇನೆ ಪ್ರತ್ಯೇಕತವಾದಿಗಳನ್ನು ಹತ್ತಿಕ್ಕುವ ಕಾರ್ಯ ಆರಂಭಿಸಿದೆ.

ಪಾಕಿಸ್ತಾನದ ಗಡಿಯಲ್ಲಿ ಸೇನೆ ಗುಂಡಿನ ದಾಳಿ ಆರಂಭಿಸಿದ್ದು, ಇತ್ತ ದೇಶದಲ್ಲಿದ್ದುಕೊಂಡು ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿರುವ ಪ್ರತ್ಯೇಕತವಾದಿಗಳಿಗೆ ತಕ್ಕ ಪಾಠವನ್ನು ಕಲಿಸಲು ಮುಂದಾಗಿದ್ದು, ಜಮ್ಮು ಕಾಶ್ಮೀರ ಬಂದ್ ಘೋಷಿಸಿರುವ ಪ್ರತ್ಯೇಕತವಾದಿ ಮುಖಂಡರನ್ನು ಬಂಧಿಸಲು ಆರಂಭಿಸಿದೆ. ಗುರುವಾರ ಮೂರು ಗಂಟೆಯಲ್ಲೇ ಪ್ರಮುಖ ಮೂರು ನಾಯಕರನ್ನು ಬಂಧಿಸಿದ್ದಾರೆ. ಬೆಳಗ್ಗೆ ಪ್ರತ್ಯೇಕವಾದಿ ನಾಯಕ ಯಾಸೀನ್ ಮಲ್ಲಿಕ್ ನನ್ನು ಶ್ರೀನಗರದಲ್ಲಿ ಪೊಲೀಸರು ಬಂಧಿಸಿ, ಜೈಲಿಗಟ್ಟಿದ್ದಾರೆ.

ಅದರ ಮರುಕ್ಷಣವೇ ಮತ್ತೋರ್ವ ಪ್ರತ್ಯೇಕವಾದಿ ಉಗ್ರಹಸ್ತಕ ಹಿಲಲ್ ವಾರ್‍ನನ್ನು ಬಂಧಿಸಲಾಗಿದೆ. ವಾರ್ ನ ಬಂಧನ ಸುದ್ದಿ ಕೇಳಿ ಮತ್ತೋರ್ವ ಪ್ರತ್ಯೇಕತವಾದಿ ಮಿರ್ವೈಸ್ ಉಮರ್ ಫಾರೂಕ್ ಬಂಧ ಘೋಷಿಸಿದ್ದರಿಂದ ಆತನನ್ನು ಬಂಧಿಸಿ, ಪೊಲೀಸರು ಗೃಹ ಬಂಧನಕ್ಕೆ ದೂಡಿದ್ದಾರೆ. ಕೇವಲ ಮೂರು ಗಂಟೆಯ ಅವಧಿಯಲ್ಲಿ ಮೂವರು ಪ್ರತ್ಯೇಕವಾದಿ ನಾಯಕರನ್ನು ಜಮ್ಮು ಕಾಶ್ಮೀರ ಪೊಲೀಸರು ಬಂಧಿಸಿದ್ದು ಉಗ್ರ ನಿಗ್ರಹ ಕಾರ್ಯಾಚರಣೆ ಮಿಂಚಿನ ವೇಗ ದೊರೆತಿದೆ.

ಮೊದಲು ಬಂಧನಕ್ಕೊಳಗಾದ ಪ್ರತ್ಯೇಕವಾದಿ ನಾಯಕ ಯಾಸೀನ್ ಮಲ್ಲಿಕ್‍ನನ್ನು ಪೊಲೀಸರು ಜೈಲಿಗಟ್ಟಿದ್ದರೆ ಮತ್ತಿಬ್ಬರನ್ನು ಗೃಹಬಂಧನದಲ್ಲಿಟ್ಟಿದ್ದಾರೆ. ಶ್ರೀನಗರದಲ್ಲಿ ಬಂಧನಕ್ಕೊಳಗಾದ ಯಾಸೀನ್ ಮಲ್ಲಿಕ್‍ನನ್ನು ಪೊಲೀಸರು ಬಂಧಿಸಿ ಒಯ್ದಿದ್ದಾರೆ. ಆದರೆ ಹಿಲಲ್ ವಾರ್‍ನನ್ನು ಮತ್ತು ಮಿರ್ವೈಸ್ ಉಮರ್ ಫಾರೂಕ್‍ನನ್ನು ಬಂಧಿಸಿದ್ದ ಪೊಲೀಸರು ಅವರ ಮನೆಯಲ್ಲೇ ಬಂಧನದಲ್ಲಿಟ್ಟು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಮೂಲಕ ಇಬ್ಬರು ಉಗ್ರ ಹಸ್ತಕರಿಗೆ ಗೃಹ ಬಂಧನದ ರುಚಿಯನ್ನು ಕಾಶ್ಮೀರ ಪೊಲೀಸರು ತೋರಿಸಿದ್ದಾರೆ. ಇದುವರೆಗೆ ಪಿಡಿಪಿ ಸರ್ಕಾರದ ಸಹಾಯದಲ್ಲಿ ಆಶ್ರಯ ಪಡೆದಿದ್ದ ಪ್ರತ್ಯೇಕತವಾದಿಗಳಿಗೆ ಸರ್ಕಾರ ಉರುಳಿದ ಕೇವಲ ಎರಡೇ ದಿನದಲ್ಲಿ ಕೇಂದ್ರ ಸರ್ಕಾರ ಭರ್ಜರಿ ಬಿಸಿ ಮುಟ್ಟಿಸಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search