• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಮ್ಮು ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ: ಬಂದ್ ಮಾಡುತ್ತೇನೆ ಎಂದ ಪ್ರತ್ಯೇಕತವಾದಿಗಳು ಅಂದರ್

TNN Correspondent Posted On June 21, 2018
0


0
Shares
  • Share On Facebook
  • Tweet It

ದೆಹಲಿ: ದೇಶ ರಕ್ಷಣೆಯ ಹಿತಕ್ಕಾಗಿ ಜಮ್ಮು ಕಾಶ್ಮೀರದಲ್ಲಿ ಪಿಡಿಪಿಯೊಂದಿಗಿನ ಮೈತ್ರಿಯನ್ನೇ ಕಡಿದುಕೊಂಡಿರುವ ಭಾರತೀಯ ಜನತಾ ಪಕ್ಷ ದಿಟ್ಟ ನಿರ್ಧಾರವನ್ನು ಕೈಗೊಂಡು, ಇಡೀ ದೇಶವಾಸಿಗಳಿಗೆ ಸಿಹಿ ಸುದ್ದಿ ಕೊಟ್ಟಿತ್ತು. ಇದೀಗ ಜಮ್ಮು ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಶುರುವಾದ ಬೆನ್ನಲೇ ಪ್ರತ್ಯೇಕತವಾದಿಗಳಿಗೆ ಸೇನೆ ಭರ್ಜರಿ ಶಾಕ್ ನೀಡಿದ್ದು, ಗುರುವಾರವೇ ಸೇನೆ ಪ್ರತ್ಯೇಕತವಾದಿಗಳನ್ನು ಹತ್ತಿಕ್ಕುವ ಕಾರ್ಯ ಆರಂಭಿಸಿದೆ.

ಪಾಕಿಸ್ತಾನದ ಗಡಿಯಲ್ಲಿ ಸೇನೆ ಗುಂಡಿನ ದಾಳಿ ಆರಂಭಿಸಿದ್ದು, ಇತ್ತ ದೇಶದಲ್ಲಿದ್ದುಕೊಂಡು ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿರುವ ಪ್ರತ್ಯೇಕತವಾದಿಗಳಿಗೆ ತಕ್ಕ ಪಾಠವನ್ನು ಕಲಿಸಲು ಮುಂದಾಗಿದ್ದು, ಜಮ್ಮು ಕಾಶ್ಮೀರ ಬಂದ್ ಘೋಷಿಸಿರುವ ಪ್ರತ್ಯೇಕತವಾದಿ ಮುಖಂಡರನ್ನು ಬಂಧಿಸಲು ಆರಂಭಿಸಿದೆ. ಗುರುವಾರ ಮೂರು ಗಂಟೆಯಲ್ಲೇ ಪ್ರಮುಖ ಮೂರು ನಾಯಕರನ್ನು ಬಂಧಿಸಿದ್ದಾರೆ. ಬೆಳಗ್ಗೆ ಪ್ರತ್ಯೇಕವಾದಿ ನಾಯಕ ಯಾಸೀನ್ ಮಲ್ಲಿಕ್ ನನ್ನು ಶ್ರೀನಗರದಲ್ಲಿ ಪೊಲೀಸರು ಬಂಧಿಸಿ, ಜೈಲಿಗಟ್ಟಿದ್ದಾರೆ.

ಅದರ ಮರುಕ್ಷಣವೇ ಮತ್ತೋರ್ವ ಪ್ರತ್ಯೇಕವಾದಿ ಉಗ್ರಹಸ್ತಕ ಹಿಲಲ್ ವಾರ್‍ನನ್ನು ಬಂಧಿಸಲಾಗಿದೆ. ವಾರ್ ನ ಬಂಧನ ಸುದ್ದಿ ಕೇಳಿ ಮತ್ತೋರ್ವ ಪ್ರತ್ಯೇಕತವಾದಿ ಮಿರ್ವೈಸ್ ಉಮರ್ ಫಾರೂಕ್ ಬಂಧ ಘೋಷಿಸಿದ್ದರಿಂದ ಆತನನ್ನು ಬಂಧಿಸಿ, ಪೊಲೀಸರು ಗೃಹ ಬಂಧನಕ್ಕೆ ದೂಡಿದ್ದಾರೆ. ಕೇವಲ ಮೂರು ಗಂಟೆಯ ಅವಧಿಯಲ್ಲಿ ಮೂವರು ಪ್ರತ್ಯೇಕವಾದಿ ನಾಯಕರನ್ನು ಜಮ್ಮು ಕಾಶ್ಮೀರ ಪೊಲೀಸರು ಬಂಧಿಸಿದ್ದು ಉಗ್ರ ನಿಗ್ರಹ ಕಾರ್ಯಾಚರಣೆ ಮಿಂಚಿನ ವೇಗ ದೊರೆತಿದೆ.

ಮೊದಲು ಬಂಧನಕ್ಕೊಳಗಾದ ಪ್ರತ್ಯೇಕವಾದಿ ನಾಯಕ ಯಾಸೀನ್ ಮಲ್ಲಿಕ್‍ನನ್ನು ಪೊಲೀಸರು ಜೈಲಿಗಟ್ಟಿದ್ದರೆ ಮತ್ತಿಬ್ಬರನ್ನು ಗೃಹಬಂಧನದಲ್ಲಿಟ್ಟಿದ್ದಾರೆ. ಶ್ರೀನಗರದಲ್ಲಿ ಬಂಧನಕ್ಕೊಳಗಾದ ಯಾಸೀನ್ ಮಲ್ಲಿಕ್‍ನನ್ನು ಪೊಲೀಸರು ಬಂಧಿಸಿ ಒಯ್ದಿದ್ದಾರೆ. ಆದರೆ ಹಿಲಲ್ ವಾರ್‍ನನ್ನು ಮತ್ತು ಮಿರ್ವೈಸ್ ಉಮರ್ ಫಾರೂಕ್‍ನನ್ನು ಬಂಧಿಸಿದ್ದ ಪೊಲೀಸರು ಅವರ ಮನೆಯಲ್ಲೇ ಬಂಧನದಲ್ಲಿಟ್ಟು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಮೂಲಕ ಇಬ್ಬರು ಉಗ್ರ ಹಸ್ತಕರಿಗೆ ಗೃಹ ಬಂಧನದ ರುಚಿಯನ್ನು ಕಾಶ್ಮೀರ ಪೊಲೀಸರು ತೋರಿಸಿದ್ದಾರೆ. ಇದುವರೆಗೆ ಪಿಡಿಪಿ ಸರ್ಕಾರದ ಸಹಾಯದಲ್ಲಿ ಆಶ್ರಯ ಪಡೆದಿದ್ದ ಪ್ರತ್ಯೇಕತವಾದಿಗಳಿಗೆ ಸರ್ಕಾರ ಉರುಳಿದ ಕೇವಲ ಎರಡೇ ದಿನದಲ್ಲಿ ಕೇಂದ್ರ ಸರ್ಕಾರ ಭರ್ಜರಿ ಬಿಸಿ ಮುಟ್ಟಿಸಿದೆ.

0
Shares
  • Share On Facebook
  • Tweet It




Trending Now
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
  • Popular Posts

    • 1
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 2
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 3
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 4
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 5
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

  • Privacy Policy
  • Contact
© Tulunadu Infomedia.

Press enter/return to begin your search