• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರಕ್ಕೆ ಉದ್ಯೋಗಕ್ಕೆಂದು ಹೋದವರು ಹೇಗೆ ಕಲ್ಲು ತೂರಾಟಗಾರರಾಗಿ ಬದಲಾಗುತ್ತಿದ್ದಾರೆ ನೋಡಿ!

TNN Correspondent Posted On June 22, 2018


  • Share On Facebook
  • Tweet It

ಒಂದೆಡೆ ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿಯಾಗಿದೆ. ಮತ್ತೊಂದೆಡೆ ಭಾರತೀಯ ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ಕಾರ್ಯಾಚರಣೆ ಮಾಡುತ್ತಿದ್ದಾರೆ. ವಿವಿಧ ಪಕ್ಷಗಳು ಮುಂದೆ ಚುನಾವಣೆ ನಿರೀಕ್ಷೆಯಲ್ಲಿದ್ದಾರೆ. ಇದೆಲ್ಲದರ ನಡುವೆ ಮೆಲ್ಲಗೆ ಕಾಶ್ಮೀರದಲ್ಲಿ ಕಲ್ಲು ತೂರಾಟಗಾರರ ಹುನ್ನಾರವೊಂದು ಬಯಲಾಗಿದೆ.

ಹೌದು, ಉತ್ತರ ಪ್ರದೇಶದಿಂದ ಉದ್ಯೋಗಕ್ಕೆಂದು ಜಮ್ಮು-ಕಾಶ್ಮಿರಕ್ಕೆ ಹೋದವರು ಅಲ್ಲಿ ಪ್ರತ್ಯೇಕತವಾದಿಗಳ ಉಪಟಳದಿಂದ ಕಲ್ಲು ತೂರಾಟಗಾರರಾಗಿ ಬಯಲಾಗಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.

ಈ ಕುರಿತು ಪೊಲೀಸ್ ನಿರ್ದೇಶಕ ಒ.ಪಿ.ಸಿಂಗ್ ಮಾಹಿತಿ ನೀಡಿದ್ದು, ಉತ್ತರ ಪ್ರದೇಶದ ಭಾಗ್ಪತ್ ಹಾಗೂ ಸಹರಾನ್ಪುರ ಜಿಲ್ಲೆಯಿಂದ ಕಾಶ್ಮೀರಕ್ಕೆ ಉದ್ಯೋಗಕ್ಕೆಂದು ಅರಸಿ ಬಂದಿದ್ದ ಆರು ಯುವಕರು ಈಗ ಕಲ್ಲು ತೂರಾಟಗಾರರಾಗಿ ಮಾರ್ಪಾಡಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಸುಮಾರು 20 ಸಾವಿರ ಸಂಬಳ ಸಿಗುತ್ತದೆ ಎಂದು ತಿಳಿದ ಯುವಕರು ಪುಲ್ವಾಮಾದಲ್ಲಿ ಕೆಲಸಕ್ಕೆ ಸೇರಿದ್ದಾರೆ. ಆದರೆ ಅಲ್ಲಿ ಇವರಿಗೆ ವಾಹನ ತೊಳೆಯಲು ಸೇರಿ ಹಲವು ಕೌಶಲವೇ ಬೇಕಾದ ಕೆಲಸ ಹಚ್ಚಿದ್ದಾರೆ. ಅಲ್ಲದೆ ಕಲ್ಲು ತೂರಾಟ ಮಾಡುವ ಕುರಿತು ತರಬೇತಿ ನೀಡಲಾಗಿದೆ ಎಂದು ಡಿಜಿಪಿ ತಿಳಿಸಿದ್ದಾರೆ.

ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಂಡಾಗ ಈ ಯುವಕರನ್ನು ಛೂ ಬಿಟ್ಟು ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ತೂರಾಟ ಮಾಡಲು ಬಿಟ್ಟಿದ್ದಾರೆ. ಆಗ ಭದ್ರತಾ ಸಿಬ್ಬಂದಿ ಮರುದಾಳಿ ಮಾಡಿದ್ದಾಗ ಇವರು ಯಾರದ್ದೋ ಮನೆಯಲ್ಲಿ ಅಡಗಿದ್ದು, ಆಗ ಭದ್ರತಾ ಸಿಬ್ಬಂದಿ ಕೈಗೆ ಸಿಕ್ಕಿದ್ದಾರೆ. ಈ ಕುರಿತು ವಿಚಾರಣೆ ನಡೆಸಿದಾಗ ಇವರು ಉತ್ತರ ಪ್ರದೇಶದವರೆಂದೂ, ಉದ್ಯೋಗಕ್ಕೆ ಇಲ್ಲಿ ಬಂದಿದ್ದು, ಈಗ ಕಲ್ಲು ತೂರಾಟಗಾರರಾಗಿ ಮಾರ್ಪಾಡಾಗಿದ್ದಾರೆ ಎಂದೂ ತಿಳಿದುಬಂದಿದೆ.

ಈ ಕುರಿತು ಕೂಲಂಕಷವಾಗಿ ತನಿಖೆ ಮಾಡಲಾಗುವುದು ಎಂದು ಡಿಜಿಪಿ ತಿಳಿಸಿದ್ದಾರೆ. ಆದರೆ ಪ್ರತ್ಯೇಕತವಾದಿಗಳ ಈ ಉಪಟಳದಿಂದ ಇನ್ನೂ ಎಷ್ಟು ಯುವಕರು ಹೀಗೆ ಬಲಿಯಾಗಬೇಕೋ, ಎಷ್ಟು ಜನ ಇವರ ದಾಳಕ್ಕೆ ಸಿಲುಕಿ ನರಳಾಡಬೇಕೋ?

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search