• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರಕ್ಕೆ ಉದ್ಯೋಗಕ್ಕೆಂದು ಹೋದವರು ಹೇಗೆ ಕಲ್ಲು ತೂರಾಟಗಾರರಾಗಿ ಬದಲಾಗುತ್ತಿದ್ದಾರೆ ನೋಡಿ!

TNN Correspondent Posted On June 22, 2018
0


0
Shares
  • Share On Facebook
  • Tweet It

ಒಂದೆಡೆ ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿಯಾಗಿದೆ. ಮತ್ತೊಂದೆಡೆ ಭಾರತೀಯ ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ಕಾರ್ಯಾಚರಣೆ ಮಾಡುತ್ತಿದ್ದಾರೆ. ವಿವಿಧ ಪಕ್ಷಗಳು ಮುಂದೆ ಚುನಾವಣೆ ನಿರೀಕ್ಷೆಯಲ್ಲಿದ್ದಾರೆ. ಇದೆಲ್ಲದರ ನಡುವೆ ಮೆಲ್ಲಗೆ ಕಾಶ್ಮೀರದಲ್ಲಿ ಕಲ್ಲು ತೂರಾಟಗಾರರ ಹುನ್ನಾರವೊಂದು ಬಯಲಾಗಿದೆ.

ಹೌದು, ಉತ್ತರ ಪ್ರದೇಶದಿಂದ ಉದ್ಯೋಗಕ್ಕೆಂದು ಜಮ್ಮು-ಕಾಶ್ಮಿರಕ್ಕೆ ಹೋದವರು ಅಲ್ಲಿ ಪ್ರತ್ಯೇಕತವಾದಿಗಳ ಉಪಟಳದಿಂದ ಕಲ್ಲು ತೂರಾಟಗಾರರಾಗಿ ಬಯಲಾಗಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.

ಈ ಕುರಿತು ಪೊಲೀಸ್ ನಿರ್ದೇಶಕ ಒ.ಪಿ.ಸಿಂಗ್ ಮಾಹಿತಿ ನೀಡಿದ್ದು, ಉತ್ತರ ಪ್ರದೇಶದ ಭಾಗ್ಪತ್ ಹಾಗೂ ಸಹರಾನ್ಪುರ ಜಿಲ್ಲೆಯಿಂದ ಕಾಶ್ಮೀರಕ್ಕೆ ಉದ್ಯೋಗಕ್ಕೆಂದು ಅರಸಿ ಬಂದಿದ್ದ ಆರು ಯುವಕರು ಈಗ ಕಲ್ಲು ತೂರಾಟಗಾರರಾಗಿ ಮಾರ್ಪಾಡಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಸುಮಾರು 20 ಸಾವಿರ ಸಂಬಳ ಸಿಗುತ್ತದೆ ಎಂದು ತಿಳಿದ ಯುವಕರು ಪುಲ್ವಾಮಾದಲ್ಲಿ ಕೆಲಸಕ್ಕೆ ಸೇರಿದ್ದಾರೆ. ಆದರೆ ಅಲ್ಲಿ ಇವರಿಗೆ ವಾಹನ ತೊಳೆಯಲು ಸೇರಿ ಹಲವು ಕೌಶಲವೇ ಬೇಕಾದ ಕೆಲಸ ಹಚ್ಚಿದ್ದಾರೆ. ಅಲ್ಲದೆ ಕಲ್ಲು ತೂರಾಟ ಮಾಡುವ ಕುರಿತು ತರಬೇತಿ ನೀಡಲಾಗಿದೆ ಎಂದು ಡಿಜಿಪಿ ತಿಳಿಸಿದ್ದಾರೆ.

ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಂಡಾಗ ಈ ಯುವಕರನ್ನು ಛೂ ಬಿಟ್ಟು ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ತೂರಾಟ ಮಾಡಲು ಬಿಟ್ಟಿದ್ದಾರೆ. ಆಗ ಭದ್ರತಾ ಸಿಬ್ಬಂದಿ ಮರುದಾಳಿ ಮಾಡಿದ್ದಾಗ ಇವರು ಯಾರದ್ದೋ ಮನೆಯಲ್ಲಿ ಅಡಗಿದ್ದು, ಆಗ ಭದ್ರತಾ ಸಿಬ್ಬಂದಿ ಕೈಗೆ ಸಿಕ್ಕಿದ್ದಾರೆ. ಈ ಕುರಿತು ವಿಚಾರಣೆ ನಡೆಸಿದಾಗ ಇವರು ಉತ್ತರ ಪ್ರದೇಶದವರೆಂದೂ, ಉದ್ಯೋಗಕ್ಕೆ ಇಲ್ಲಿ ಬಂದಿದ್ದು, ಈಗ ಕಲ್ಲು ತೂರಾಟಗಾರರಾಗಿ ಮಾರ್ಪಾಡಾಗಿದ್ದಾರೆ ಎಂದೂ ತಿಳಿದುಬಂದಿದೆ.

ಈ ಕುರಿತು ಕೂಲಂಕಷವಾಗಿ ತನಿಖೆ ಮಾಡಲಾಗುವುದು ಎಂದು ಡಿಜಿಪಿ ತಿಳಿಸಿದ್ದಾರೆ. ಆದರೆ ಪ್ರತ್ಯೇಕತವಾದಿಗಳ ಈ ಉಪಟಳದಿಂದ ಇನ್ನೂ ಎಷ್ಟು ಯುವಕರು ಹೀಗೆ ಬಲಿಯಾಗಬೇಕೋ, ಎಷ್ಟು ಜನ ಇವರ ದಾಳಕ್ಕೆ ಸಿಲುಕಿ ನರಳಾಡಬೇಕೋ?

 

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search