• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರಕ್ಕೆ ಉದ್ಯೋಗಕ್ಕೆಂದು ಹೋದವರು ಹೇಗೆ ಕಲ್ಲು ತೂರಾಟಗಾರರಾಗಿ ಬದಲಾಗುತ್ತಿದ್ದಾರೆ ನೋಡಿ!

TNN Correspondent Posted On June 22, 2018


  • Share On Facebook
  • Tweet It

ಒಂದೆಡೆ ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿಯಾಗಿದೆ. ಮತ್ತೊಂದೆಡೆ ಭಾರತೀಯ ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ಕಾರ್ಯಾಚರಣೆ ಮಾಡುತ್ತಿದ್ದಾರೆ. ವಿವಿಧ ಪಕ್ಷಗಳು ಮುಂದೆ ಚುನಾವಣೆ ನಿರೀಕ್ಷೆಯಲ್ಲಿದ್ದಾರೆ. ಇದೆಲ್ಲದರ ನಡುವೆ ಮೆಲ್ಲಗೆ ಕಾಶ್ಮೀರದಲ್ಲಿ ಕಲ್ಲು ತೂರಾಟಗಾರರ ಹುನ್ನಾರವೊಂದು ಬಯಲಾಗಿದೆ.

ಹೌದು, ಉತ್ತರ ಪ್ರದೇಶದಿಂದ ಉದ್ಯೋಗಕ್ಕೆಂದು ಜಮ್ಮು-ಕಾಶ್ಮಿರಕ್ಕೆ ಹೋದವರು ಅಲ್ಲಿ ಪ್ರತ್ಯೇಕತವಾದಿಗಳ ಉಪಟಳದಿಂದ ಕಲ್ಲು ತೂರಾಟಗಾರರಾಗಿ ಬಯಲಾಗಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.

ಈ ಕುರಿತು ಪೊಲೀಸ್ ನಿರ್ದೇಶಕ ಒ.ಪಿ.ಸಿಂಗ್ ಮಾಹಿತಿ ನೀಡಿದ್ದು, ಉತ್ತರ ಪ್ರದೇಶದ ಭಾಗ್ಪತ್ ಹಾಗೂ ಸಹರಾನ್ಪುರ ಜಿಲ್ಲೆಯಿಂದ ಕಾಶ್ಮೀರಕ್ಕೆ ಉದ್ಯೋಗಕ್ಕೆಂದು ಅರಸಿ ಬಂದಿದ್ದ ಆರು ಯುವಕರು ಈಗ ಕಲ್ಲು ತೂರಾಟಗಾರರಾಗಿ ಮಾರ್ಪಾಡಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಸುಮಾರು 20 ಸಾವಿರ ಸಂಬಳ ಸಿಗುತ್ತದೆ ಎಂದು ತಿಳಿದ ಯುವಕರು ಪುಲ್ವಾಮಾದಲ್ಲಿ ಕೆಲಸಕ್ಕೆ ಸೇರಿದ್ದಾರೆ. ಆದರೆ ಅಲ್ಲಿ ಇವರಿಗೆ ವಾಹನ ತೊಳೆಯಲು ಸೇರಿ ಹಲವು ಕೌಶಲವೇ ಬೇಕಾದ ಕೆಲಸ ಹಚ್ಚಿದ್ದಾರೆ. ಅಲ್ಲದೆ ಕಲ್ಲು ತೂರಾಟ ಮಾಡುವ ಕುರಿತು ತರಬೇತಿ ನೀಡಲಾಗಿದೆ ಎಂದು ಡಿಜಿಪಿ ತಿಳಿಸಿದ್ದಾರೆ.

ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಂಡಾಗ ಈ ಯುವಕರನ್ನು ಛೂ ಬಿಟ್ಟು ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ತೂರಾಟ ಮಾಡಲು ಬಿಟ್ಟಿದ್ದಾರೆ. ಆಗ ಭದ್ರತಾ ಸಿಬ್ಬಂದಿ ಮರುದಾಳಿ ಮಾಡಿದ್ದಾಗ ಇವರು ಯಾರದ್ದೋ ಮನೆಯಲ್ಲಿ ಅಡಗಿದ್ದು, ಆಗ ಭದ್ರತಾ ಸಿಬ್ಬಂದಿ ಕೈಗೆ ಸಿಕ್ಕಿದ್ದಾರೆ. ಈ ಕುರಿತು ವಿಚಾರಣೆ ನಡೆಸಿದಾಗ ಇವರು ಉತ್ತರ ಪ್ರದೇಶದವರೆಂದೂ, ಉದ್ಯೋಗಕ್ಕೆ ಇಲ್ಲಿ ಬಂದಿದ್ದು, ಈಗ ಕಲ್ಲು ತೂರಾಟಗಾರರಾಗಿ ಮಾರ್ಪಾಡಾಗಿದ್ದಾರೆ ಎಂದೂ ತಿಳಿದುಬಂದಿದೆ.

ಈ ಕುರಿತು ಕೂಲಂಕಷವಾಗಿ ತನಿಖೆ ಮಾಡಲಾಗುವುದು ಎಂದು ಡಿಜಿಪಿ ತಿಳಿಸಿದ್ದಾರೆ. ಆದರೆ ಪ್ರತ್ಯೇಕತವಾದಿಗಳ ಈ ಉಪಟಳದಿಂದ ಇನ್ನೂ ಎಷ್ಟು ಯುವಕರು ಹೀಗೆ ಬಲಿಯಾಗಬೇಕೋ, ಎಷ್ಟು ಜನ ಇವರ ದಾಳಕ್ಕೆ ಸಿಲುಕಿ ನರಳಾಡಬೇಕೋ?

 

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search