• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಣಿವೆಯಲ್ಲಿ  ಮಾನವ ಹಕ್ಕುಗಳ ಬಗ್ಗೆ ಬೊಗಳೆ ಬಿಟ್ಟ ವಿಶ್ವಸಂಸ್ಥೆ, ಪಾಕಿಸ್ತಾನಕ್ಕೆ ಛೀಮಾರಿ

TNN Correspondent Posted On June 23, 2018
0


0
Shares
  • Share On Facebook
  • Tweet It

ವಿಶ್ವಸಂಸ್ಥೆ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ವರದಿ ನೀಡಿದ ವಿಶ್ವಸಂಸ್ಥೆ ಮಾನವ ಹಕ್ಕುಗಳ ಕಚೇರಿಯ ಮಾಹಿತಿಯನ್ನು, ಭಾರತ ಸೇರಿ ವಿಶ್ವಸಂಸ್ಥೆಯ ಆರು ರಾಷ್ಟ್ರಗಳು ವಿಶ್ವಸಂಸ್ಥೆಯ ಸಭೆಯಲ್ಲೇ ನಿರಾಕರಿಸುವ ಮೂಲಕ ವಿಶ್ವಸಂಸ್ಥೆ ಮತ್ತು ಪಾಕಿಸ್ತಾನಕ್ಕೆ ಭಾರಿ ಮುಖಭಂಗವಾಗಿದೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿಯ ವರದಿಯ ಬಗ್ಗೆ ಭಾರತ ಸೇರಿ ಅಫ್ಘಾನಿಸ್ತಾನ, ಮಾರಿಷಸ್, ಬೆಲಾರಸ್, ಕ್ಯೂಬಾ, ಭೂತಾನ್ ಮತ್ತು ವೆನೆಜುವೆಲಾ ರಾಷ್ಟ್ರಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಪಾಕಿಸ್ತಾನಕ್ಕೂ ಇದರಿಂದ ವಿಶ್ವಮಟ್ಟದಲ್ಲಿ ಭಾರಿ ಹಿನ್ನಡೆಯುಂಟಾಗಿದೆ. ವಿಶ್ವಸಂಸ್ಥೆ ಮಾನವ ಹಕ್ಕುಗಳ ಆಯುಕ್ತ ಜಿದ್ ರಾದ್ ಅಲ್ ಹುಸೇನ್ 49 ಪುಟಗಳ ವರದಿಯನ್ನು ಸಲ್ಲಿಸಿದ್ದರು. ವರದಿಯಲ್ಲಿ ಜಮ್ಮು ಕಾಶ್ಮೀರದಲ್ಲಿ ಅಮಾಯಕರ ಮೇಲೆ ದಾಳಿ ನಡೆಸಲಾಗುತ್ತಿದೆ. ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದರು. ಈ ಕುರಿತು ವರದಿ ಪ್ರಕಟಿಸಿದ ದಿನವೇ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದೀಗ ಭಾರತದ ನಿಲುವಿಗೆ ಆರು ರಾಷ್ಟ್ರಗಳು ಬೆಂಬಲಕ್ಕೆ ನಿಂತಿರುವುದು ಹೊಸ ಬಲ ನೀಡಿವೆ.

ವಿಶ್ವಸಂಸ್ಥೆ ವರದಿ ಪೂರ್ವಾಗ್ರಹ ಪೀಡಿತವಾಗಿದ್ದು, ವರದಿ ಆದರಿಸಿ ಯಾವುದೇ ಕ್ರಮಗಳನ್ನು ಕೈಗೊಳ್ಳಬಾರದು ಎಂದು ಭೂತಾನ್ ವಿಶ್ವಸಂಸ್ಥೆಗೆ ಆಗ್ರಹಿಸಿದೆ. ಇನ್ನು ವಿಶ್ವಸಂಸ್ಥೆಯಲ್ಲಿ ನಡೆದ ಸಭೆಯಲ್ಲಿ ಪಾಕಿಸ್ತಾನದ ಕಾಯಂ ಸದಸ್ಯ ಫಾರುಕ್ ಆಮಿಲ್ ‘ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಗೆ ಪ್ರತ್ಯೇಕ ತನಿಖಾ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದ್ದರು. ಇದಕ್ಕೆ ಯಾವುದೇ ರಾಷ್ಟ್ರಗಳು ಬೆಂಬಲ ನೀಡದಿರುವುದರಿಂದ ಪಾಕಿಸ್ತಾನ ಏಕಾಂಗಿಯಾಗಿ, ತೀವ್ರ ಮುಖಭಂಗ ಎದುರಿಸಿತು.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search