• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಣಿವೆಯಲ್ಲಿ  ಮಾನವ ಹಕ್ಕುಗಳ ಬಗ್ಗೆ ಬೊಗಳೆ ಬಿಟ್ಟ ವಿಶ್ವಸಂಸ್ಥೆ, ಪಾಕಿಸ್ತಾನಕ್ಕೆ ಛೀಮಾರಿ

TNN Correspondent Posted On June 23, 2018
0


0
Shares
  • Share On Facebook
  • Tweet It

ವಿಶ್ವಸಂಸ್ಥೆ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ವರದಿ ನೀಡಿದ ವಿಶ್ವಸಂಸ್ಥೆ ಮಾನವ ಹಕ್ಕುಗಳ ಕಚೇರಿಯ ಮಾಹಿತಿಯನ್ನು, ಭಾರತ ಸೇರಿ ವಿಶ್ವಸಂಸ್ಥೆಯ ಆರು ರಾಷ್ಟ್ರಗಳು ವಿಶ್ವಸಂಸ್ಥೆಯ ಸಭೆಯಲ್ಲೇ ನಿರಾಕರಿಸುವ ಮೂಲಕ ವಿಶ್ವಸಂಸ್ಥೆ ಮತ್ತು ಪಾಕಿಸ್ತಾನಕ್ಕೆ ಭಾರಿ ಮುಖಭಂಗವಾಗಿದೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿಯ ವರದಿಯ ಬಗ್ಗೆ ಭಾರತ ಸೇರಿ ಅಫ್ಘಾನಿಸ್ತಾನ, ಮಾರಿಷಸ್, ಬೆಲಾರಸ್, ಕ್ಯೂಬಾ, ಭೂತಾನ್ ಮತ್ತು ವೆನೆಜುವೆಲಾ ರಾಷ್ಟ್ರಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಪಾಕಿಸ್ತಾನಕ್ಕೂ ಇದರಿಂದ ವಿಶ್ವಮಟ್ಟದಲ್ಲಿ ಭಾರಿ ಹಿನ್ನಡೆಯುಂಟಾಗಿದೆ. ವಿಶ್ವಸಂಸ್ಥೆ ಮಾನವ ಹಕ್ಕುಗಳ ಆಯುಕ್ತ ಜಿದ್ ರಾದ್ ಅಲ್ ಹುಸೇನ್ 49 ಪುಟಗಳ ವರದಿಯನ್ನು ಸಲ್ಲಿಸಿದ್ದರು. ವರದಿಯಲ್ಲಿ ಜಮ್ಮು ಕಾಶ್ಮೀರದಲ್ಲಿ ಅಮಾಯಕರ ಮೇಲೆ ದಾಳಿ ನಡೆಸಲಾಗುತ್ತಿದೆ. ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದರು. ಈ ಕುರಿತು ವರದಿ ಪ್ರಕಟಿಸಿದ ದಿನವೇ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದೀಗ ಭಾರತದ ನಿಲುವಿಗೆ ಆರು ರಾಷ್ಟ್ರಗಳು ಬೆಂಬಲಕ್ಕೆ ನಿಂತಿರುವುದು ಹೊಸ ಬಲ ನೀಡಿವೆ.

ವಿಶ್ವಸಂಸ್ಥೆ ವರದಿ ಪೂರ್ವಾಗ್ರಹ ಪೀಡಿತವಾಗಿದ್ದು, ವರದಿ ಆದರಿಸಿ ಯಾವುದೇ ಕ್ರಮಗಳನ್ನು ಕೈಗೊಳ್ಳಬಾರದು ಎಂದು ಭೂತಾನ್ ವಿಶ್ವಸಂಸ್ಥೆಗೆ ಆಗ್ರಹಿಸಿದೆ. ಇನ್ನು ವಿಶ್ವಸಂಸ್ಥೆಯಲ್ಲಿ ನಡೆದ ಸಭೆಯಲ್ಲಿ ಪಾಕಿಸ್ತಾನದ ಕಾಯಂ ಸದಸ್ಯ ಫಾರುಕ್ ಆಮಿಲ್ ‘ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಗೆ ಪ್ರತ್ಯೇಕ ತನಿಖಾ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದ್ದರು. ಇದಕ್ಕೆ ಯಾವುದೇ ರಾಷ್ಟ್ರಗಳು ಬೆಂಬಲ ನೀಡದಿರುವುದರಿಂದ ಪಾಕಿಸ್ತಾನ ಏಕಾಂಗಿಯಾಗಿ, ತೀವ್ರ ಮುಖಭಂಗ ಎದುರಿಸಿತು.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search