• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಸ್ಲಿಂ ರಾಷ್ಟ್ರಗಳಲ್ಲೇ ಯೋಗ ಇದ್ದರೂ ಹೀನಾ ಖಾನ್ ಗೇಕೆ ವಿರೋಧ ಮುಸ್ಲಿಂ ಮೂಲಭೂತವಾದಿಗಳೇ?

TNN Correspondent Posted On June 23, 2018


  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ 2015ರ ಜೂನ್ 21ರಂದು ಮೊದಲ ಬಾರಿಗೆ ವಿಶ್ವ ಯೋಗ ದಿನ ಆಚರಿಸಲಾಯಿತು. ಸುಮಾರು 47 ರಾಷ್ಟ್ರಗಳು ಯೋಗದಿನಕ್ಕೆ ಬೆಂಬಲ ಸೂಚಿಸಿದವು. ಈ ಬಾರಿಯೂ ಪಾಕಿಸ್ತಾನ, ಬಾಂಗ್ಲಾದೇಶ, ಸೌದಿ ಅರೇಬಿಯಾ ಸೇರಿ ಹಲವು ಮುಸ್ಲಿಂ ರಾಷ್ಟ್ರಗಳಲ್ಲಿ ಯೋಗ ದಿನ ಆಚರಿಸಲಾಯಿತು. ಲಕ್ಷಾಂತರ ಜನ ಯೋಗ ಮಾಡುವ ಮೂಲಕ ಬೆಂಬಲ ಸೂಚಿಸಿದರು.

ಆದರೆ ಭಾರತದಲ್ಲಿರುವ ಮುಸ್ಲಿಂ ಮೂಲಭೂತವಾದಿಗಳು ಮಾತ್ರ ಯೋಗ ಮಾಡಲು ವಿರೋಧಿಸುತ್ತಿದ್ದಾರೆ. ಮುಸ್ಲಿಮರು ಯೋಗ ಮಾಡುವುದು ಇಸ್ಲಾಮೇತರ ಎಂಬ ಅಸಹಿಷ್ಣುತೆ ಪ್ರದರ್ಶಿಸುತ್ತಿದ್ದಾರೆ. ಆ ಮೂಲಕ ಮುಸ್ಲಿಮರು ಆರೋಗ್ಯವಂತ ಜೀವನ ಸಾಗಿಸಲು ಅಡ್ಡಗಾಲು ಹಾಕುತ್ತಿದ್ದಾರೆ. ಮೌಢ್ಯ ಮೆರೆಯುತ್ತಿದ್ದಾರೆ.

ಕಳೆದ ಗುರುವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ನಟಿ ಹೀನಾ ಖಾನ್ ಯೋಗ ಮಾಡುತ್ತಿರುವ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದರು. ಅಲ್ಲದೆ ಹೀಗೆ ಯೋಗ ಮಾಡುವುದರಿಂದ ಮನಸ್ಸಿನಲ್ಲಿ ಆವರಿಸುವ ಶಾಂತಿಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂಬ ಒಕ್ಕಣೆ ಸಹ ಬರೆದಿದ್ದರು.

ಆದರೆ ಇದಕ್ಕೆ ಸಾಮಾಜಿಕ ಜಾಲತಾಣದಲ್ಲೇ ಹಲವು ಮುಸ್ಲಿಂ ಮೂಲಭೂತವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಹೀನಾ ಖಾನ್ ಮುಸ್ಲಿಮಳೇ ಅಲ್ಲ, ಅವರು ಮುಸ್ಲಿಮರಾಗಿದ್ದರೆ ಹೀಗೆ ಮಾಡುತ್ತಿರಲಿಲ್ಲ, ಹೀಗೆ ಯೋಗ ಮಾಡುವ ಬದಲು ಐದು ಬಾರಿ ನಮಾಜು ಮಾಡಬೇಕಿತ್ತು, ನಮಾಜೇ ಮುಸ್ಲಿಮರಿಗೆ ಯೋಗ ಎಂಬಂತಹ ಹಲವು ಟೀಕೆ ಮಾಡಿದ್ದಾರೆ.

ಇಡೀ ವಿಶ್ವವೇ ಯೋಗ ದಿನ ಆಚರಿಸುತ್ತಿದೆ. ಜಗತ್ತಿನಾದ್ಯಂತ ಕೋಟ್ಯಂತರ ಜನ ಯೋಗ ಮಾಡುತ್ತಿದ್ದಾರೆ. ಮುಸ್ಲಿಂ ರಾಷ್ಟ್ರಗಳೂ ಆರೋಗ್ಯದ ಹಿತದೃಷ್ಟಿಯಿಂದ ಯೋಗಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ. ಆದರೆ ಭಾರತದಲ್ಲಿ ಮಾತ್ರ ಮುಸ್ಲಿಂ ಮೂಲಭೂತವಾದಿಗಳಿಂದಾಗಿ ಮುಸ್ಲಿಮರು ಯೋಗ ಮಾಡಿದರೆ ಟೀಕೆಗಳು ವ್ಯಕ್ತವಾಗುತ್ತಿವೆ. ಇವರೆಲ್ಲ ಎಚ್ಚೆತ್ತುಕೊಳ್ಳುವುದು ಯಾವಾಗ?

  • Share On Facebook
  • Tweet It


- Advertisement -


Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
Tulunadu News March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
Leave A Reply

  • Recent Posts

    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
  • Popular Posts

    • 1
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 2
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 3
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 4
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 5
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search