• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಂ ರಾಷ್ಟ್ರಗಳಲ್ಲೇ ಯೋಗ ಇದ್ದರೂ ಹೀನಾ ಖಾನ್ ಗೇಕೆ ವಿರೋಧ ಮುಸ್ಲಿಂ ಮೂಲಭೂತವಾದಿಗಳೇ?

TNN Correspondent Posted On June 23, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ 2015ರ ಜೂನ್ 21ರಂದು ಮೊದಲ ಬಾರಿಗೆ ವಿಶ್ವ ಯೋಗ ದಿನ ಆಚರಿಸಲಾಯಿತು. ಸುಮಾರು 47 ರಾಷ್ಟ್ರಗಳು ಯೋಗದಿನಕ್ಕೆ ಬೆಂಬಲ ಸೂಚಿಸಿದವು. ಈ ಬಾರಿಯೂ ಪಾಕಿಸ್ತಾನ, ಬಾಂಗ್ಲಾದೇಶ, ಸೌದಿ ಅರೇಬಿಯಾ ಸೇರಿ ಹಲವು ಮುಸ್ಲಿಂ ರಾಷ್ಟ್ರಗಳಲ್ಲಿ ಯೋಗ ದಿನ ಆಚರಿಸಲಾಯಿತು. ಲಕ್ಷಾಂತರ ಜನ ಯೋಗ ಮಾಡುವ ಮೂಲಕ ಬೆಂಬಲ ಸೂಚಿಸಿದರು.

ಆದರೆ ಭಾರತದಲ್ಲಿರುವ ಮುಸ್ಲಿಂ ಮೂಲಭೂತವಾದಿಗಳು ಮಾತ್ರ ಯೋಗ ಮಾಡಲು ವಿರೋಧಿಸುತ್ತಿದ್ದಾರೆ. ಮುಸ್ಲಿಮರು ಯೋಗ ಮಾಡುವುದು ಇಸ್ಲಾಮೇತರ ಎಂಬ ಅಸಹಿಷ್ಣುತೆ ಪ್ರದರ್ಶಿಸುತ್ತಿದ್ದಾರೆ. ಆ ಮೂಲಕ ಮುಸ್ಲಿಮರು ಆರೋಗ್ಯವಂತ ಜೀವನ ಸಾಗಿಸಲು ಅಡ್ಡಗಾಲು ಹಾಕುತ್ತಿದ್ದಾರೆ. ಮೌಢ್ಯ ಮೆರೆಯುತ್ತಿದ್ದಾರೆ.

ಕಳೆದ ಗುರುವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ನಟಿ ಹೀನಾ ಖಾನ್ ಯೋಗ ಮಾಡುತ್ತಿರುವ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದರು. ಅಲ್ಲದೆ ಹೀಗೆ ಯೋಗ ಮಾಡುವುದರಿಂದ ಮನಸ್ಸಿನಲ್ಲಿ ಆವರಿಸುವ ಶಾಂತಿಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂಬ ಒಕ್ಕಣೆ ಸಹ ಬರೆದಿದ್ದರು.

ಆದರೆ ಇದಕ್ಕೆ ಸಾಮಾಜಿಕ ಜಾಲತಾಣದಲ್ಲೇ ಹಲವು ಮುಸ್ಲಿಂ ಮೂಲಭೂತವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಹೀನಾ ಖಾನ್ ಮುಸ್ಲಿಮಳೇ ಅಲ್ಲ, ಅವರು ಮುಸ್ಲಿಮರಾಗಿದ್ದರೆ ಹೀಗೆ ಮಾಡುತ್ತಿರಲಿಲ್ಲ, ಹೀಗೆ ಯೋಗ ಮಾಡುವ ಬದಲು ಐದು ಬಾರಿ ನಮಾಜು ಮಾಡಬೇಕಿತ್ತು, ನಮಾಜೇ ಮುಸ್ಲಿಮರಿಗೆ ಯೋಗ ಎಂಬಂತಹ ಹಲವು ಟೀಕೆ ಮಾಡಿದ್ದಾರೆ.

ಇಡೀ ವಿಶ್ವವೇ ಯೋಗ ದಿನ ಆಚರಿಸುತ್ತಿದೆ. ಜಗತ್ತಿನಾದ್ಯಂತ ಕೋಟ್ಯಂತರ ಜನ ಯೋಗ ಮಾಡುತ್ತಿದ್ದಾರೆ. ಮುಸ್ಲಿಂ ರಾಷ್ಟ್ರಗಳೂ ಆರೋಗ್ಯದ ಹಿತದೃಷ್ಟಿಯಿಂದ ಯೋಗಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ. ಆದರೆ ಭಾರತದಲ್ಲಿ ಮಾತ್ರ ಮುಸ್ಲಿಂ ಮೂಲಭೂತವಾದಿಗಳಿಂದಾಗಿ ಮುಸ್ಲಿಮರು ಯೋಗ ಮಾಡಿದರೆ ಟೀಕೆಗಳು ವ್ಯಕ್ತವಾಗುತ್ತಿವೆ. ಇವರೆಲ್ಲ ಎಚ್ಚೆತ್ತುಕೊಳ್ಳುವುದು ಯಾವಾಗ?

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search