• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ನಿಟ್ಟಡೆ ಗ್ರಾಮದಲ್ಲಿ ಜೀವದ ಹಂಗು ತೊರೆದು ಗೆಳೆಯನನ್ನು ರಕ್ಷಿಸಿದ ಬಾಲಕ

Tulunadu News Posted On June 23, 2018
0


0
Shares
  • Share On Facebook
  • Tweet It

ಬೆಳ್ತಂಗಡಿ : ನೀರು ಪಾಲಾಗುವ ವೇಳೆ ತನ್ನ ಗೆಳೆಯನನ್ನು ಪುಟ್ಟ ಬಾಲಕನೊಬ್ಬ ಜೀವದ ಹಂಗು ತೊರೆದು ರಕ್ಷಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ನಿಟ್ಟಡೆ ಗ್ರಾಮದ ಫಂಡಿಜೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಆದಿತ್ಯ ಹಾಗೂ ಆತನ ಗೆಳೆಯ ಅದೇ ಶಾಲೆಯ 5ನೇ ತರಗತಿಯ ಸುಜಯ ನಿನ್ನೆ ಸಂಜೆ ಶಾಲೆಯಿಂದ ಮನೆಗೆ ಮರಳುತ್ತಿದ್ದರು. ದಂಬೆ ಎಂಬಲ್ಲಿ ತೊರೆಯೊಂದು ಹರಿಯುತ್ತಿದ್ದು, ಇದನ್ನು ದಾಟಿ ಹೋಗಲು ನಿರ್ಮಿಸಿರುವ ಅಡಿಕೆ ಮರದ ಕಾಲು ಸೇತುವೆ ಬಳಿ ಸುಜಯ್ ನ ಹಿಂದೆ ಬರುತ್ತಿದ್ದ ಆದಿತ್ಯನ ಕಾಲು ಆಕಸ್ಮಾತ್ ಜಾರಿದೆ. ತಕ್ಷಣ ಇದನ್ನು ಗಮನಿಸಿದ ಸುಜಯ ಆತನನ್ನು ರಕ್ಷಿಸಲು ಯತ್ನಿಸಿದ್ದಾನೆ.

ಆದಿತ್ಯನ ಒಂದು ಕಾಲನ್ನು ಸುಜಯ ಹಿಡಿದುಕೊಂಡು ಮೇಲೆತ್ತಲು ಯತ್ನಿಸಿದ್ದಾನೆ . ಈ ಹಂತದಲ್ಲಿ ಆದಿತ್ಯನ ಇಡೀ ಶರೀರ ಸಂಕದ ಕೆಳಗೆ ನೇತಾಡತೊಡಗಿತ್ತು. ಶಾಲೆಯ ಬ್ಯಾಗ್ , ಕೊಡೆಯೊಂದಿಗೆ ಆದಿತ್ಯನನ್ನು ಮೇಲೆತ್ತೆಲು ಸುಜಯಗೆ ಆಗಲಿಲ್ಲ. ಆದರೆ ಆ ಕ್ಷಣ ಗೆಳೆಯನನ್ನು ಬದುಕಿಸಲು ರಕ್ಷಣೆಗಾಗಿ ಬೊಬ್ಬೆ ಹೊಡೆದಿದ್ದಾನೆ. ಬಾಲಕರ ಬೊಬ್ಬೆ ಕೇಳಿ ಕೂಡಲೇ ಅಣತಿ ದೂರದ ಮನೆಯ ಜಯಾನಂದ ಸಾಠೆ ಹಾಗೂ ಆದಿತ್ಯನ ತಂದೆ ರತ್ನಾಕರ ಹೆಬ್ಬಾರ್ ಹಾಗೂ ಇತರರು ತಕ್ಷಣ ಸ್ಥಳಕ್ಕೆ ಬಂದು ಆದಿತ್ಯನನ್ನು ಮೇಲೆತ್ತಿದ್ದಾರೆ. ಸುಮಾರು ನಾಲ್ಕೈದು ನಿಮಿಷಗಳ ಕಾಲ ಸುಜಯ ಆದಿತ್ಯನನ್ನು ಹಿಡಿದುಕೊಂಡಿದ್ದು ಮಿತ್ರನ ರಕ್ಷಣೆ ಮಾಡಿದ್ದಾನೆ. ಸುಜಯನ ಸಮಯ ಪ್ರಜ್ಞೆಯಿಂದಾಗಿ ಆದಿತ್ಯನ ಪ್ರಾಣ ಉಳಿಯುವಂತಾಗಿದೆ. ಬಾಲಕನ ಸಾಹಸಕ್ಕೆ ಎಲ್ಲೆಡೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search