• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ನಿಟ್ಟಡೆ ಗ್ರಾಮದಲ್ಲಿ ಜೀವದ ಹಂಗು ತೊರೆದು ಗೆಳೆಯನನ್ನು ರಕ್ಷಿಸಿದ ಬಾಲಕ

Tulunadu News Posted On June 23, 2018
0


0
Shares
  • Share On Facebook
  • Tweet It

ಬೆಳ್ತಂಗಡಿ : ನೀರು ಪಾಲಾಗುವ ವೇಳೆ ತನ್ನ ಗೆಳೆಯನನ್ನು ಪುಟ್ಟ ಬಾಲಕನೊಬ್ಬ ಜೀವದ ಹಂಗು ತೊರೆದು ರಕ್ಷಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ನಿಟ್ಟಡೆ ಗ್ರಾಮದ ಫಂಡಿಜೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಆದಿತ್ಯ ಹಾಗೂ ಆತನ ಗೆಳೆಯ ಅದೇ ಶಾಲೆಯ 5ನೇ ತರಗತಿಯ ಸುಜಯ ನಿನ್ನೆ ಸಂಜೆ ಶಾಲೆಯಿಂದ ಮನೆಗೆ ಮರಳುತ್ತಿದ್ದರು. ದಂಬೆ ಎಂಬಲ್ಲಿ ತೊರೆಯೊಂದು ಹರಿಯುತ್ತಿದ್ದು, ಇದನ್ನು ದಾಟಿ ಹೋಗಲು ನಿರ್ಮಿಸಿರುವ ಅಡಿಕೆ ಮರದ ಕಾಲು ಸೇತುವೆ ಬಳಿ ಸುಜಯ್ ನ ಹಿಂದೆ ಬರುತ್ತಿದ್ದ ಆದಿತ್ಯನ ಕಾಲು ಆಕಸ್ಮಾತ್ ಜಾರಿದೆ. ತಕ್ಷಣ ಇದನ್ನು ಗಮನಿಸಿದ ಸುಜಯ ಆತನನ್ನು ರಕ್ಷಿಸಲು ಯತ್ನಿಸಿದ್ದಾನೆ.

ಆದಿತ್ಯನ ಒಂದು ಕಾಲನ್ನು ಸುಜಯ ಹಿಡಿದುಕೊಂಡು ಮೇಲೆತ್ತಲು ಯತ್ನಿಸಿದ್ದಾನೆ . ಈ ಹಂತದಲ್ಲಿ ಆದಿತ್ಯನ ಇಡೀ ಶರೀರ ಸಂಕದ ಕೆಳಗೆ ನೇತಾಡತೊಡಗಿತ್ತು. ಶಾಲೆಯ ಬ್ಯಾಗ್ , ಕೊಡೆಯೊಂದಿಗೆ ಆದಿತ್ಯನನ್ನು ಮೇಲೆತ್ತೆಲು ಸುಜಯಗೆ ಆಗಲಿಲ್ಲ. ಆದರೆ ಆ ಕ್ಷಣ ಗೆಳೆಯನನ್ನು ಬದುಕಿಸಲು ರಕ್ಷಣೆಗಾಗಿ ಬೊಬ್ಬೆ ಹೊಡೆದಿದ್ದಾನೆ. ಬಾಲಕರ ಬೊಬ್ಬೆ ಕೇಳಿ ಕೂಡಲೇ ಅಣತಿ ದೂರದ ಮನೆಯ ಜಯಾನಂದ ಸಾಠೆ ಹಾಗೂ ಆದಿತ್ಯನ ತಂದೆ ರತ್ನಾಕರ ಹೆಬ್ಬಾರ್ ಹಾಗೂ ಇತರರು ತಕ್ಷಣ ಸ್ಥಳಕ್ಕೆ ಬಂದು ಆದಿತ್ಯನನ್ನು ಮೇಲೆತ್ತಿದ್ದಾರೆ. ಸುಮಾರು ನಾಲ್ಕೈದು ನಿಮಿಷಗಳ ಕಾಲ ಸುಜಯ ಆದಿತ್ಯನನ್ನು ಹಿಡಿದುಕೊಂಡಿದ್ದು ಮಿತ್ರನ ರಕ್ಷಣೆ ಮಾಡಿದ್ದಾನೆ. ಸುಜಯನ ಸಮಯ ಪ್ರಜ್ಞೆಯಿಂದಾಗಿ ಆದಿತ್ಯನ ಪ್ರಾಣ ಉಳಿಯುವಂತಾಗಿದೆ. ಬಾಲಕನ ಸಾಹಸಕ್ಕೆ ಎಲ್ಲೆಡೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search