• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಂಗಳೂರಿನ ಅನ್ನಪೂರ್ಣ ಲಾಡ್ಜ್ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲ: 6 ಯುವತಿಯರ ರಕ್ಷಣೆ

Tulunadu News Posted On June 23, 2018


  • Share On Facebook
  • Tweet It

ಮಂಗಳೂರು : ಮಂಗಳೂರಿನಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಜಾಲವನ್ನು ಸಾಮಾಜಿಕ ಸೇವಾಸಂಸ್ಥೆ ಹಾಗು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ಈ ಜಾಲದಲ್ಲಿ ಸಿಲುಕಿದ್ದ ಬಾಂಗ್ಲಾದೇಶ ಮೂಲದ 6 ಮಂದಿ ಯುವತಿಯರನ್ನು ರಕ್ಷಿಸಲಾಗಿದೆ.

ಇಂದು ಮುಂಜಾನೆ ಮಂಗಳೂರಿನ ಪಂಪ್ ವಲ್ ಬಳಿ ಇರುವ ಅನ್ನಪೂರ್ಣ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ವಿದೇಶಿ ಯುವತಿಯರನ್ನು ಕೂಡಿಹಾಕಿ ಅವರಿಂದ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೈಸೂರಿನ ಒಡನಾಡಿ ಸೇವಾಸಂಸ್ಥೆಯ ಸ್ವಯಂ ಸೇವಕರಿಗೆ ದೊರೆತಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ್ದ ಒಡನಾಡಿ ಸೇವಾಸಂಸ್ಥೆಯ ಸ್ವಯಂ ಸೇವಕರು ಮಂಗಳೂರು ಪೊಲೀಸರ ನೆರವಿನೊಂದಿಗೆ ಲಾಡ್ಜ್ ಮೇಲೆ ದಾಳಿ ನಡೆಸಿದ್ದರು. ಲಾಡ್ಜ್ ನಲ್ಲಿ ವ್ಯಾಪಕ ಶೋಧಕಾರ್ಯ ನಡೆಸಿದ ಪೊಲೀಸರಿಗೆ ಆಚ್ಚರಿ ಕಾದಿತ್ತು. ಲಾಡ್ಜ್ ನ ಕೊಠಡಿಯೊಂದರ ಶೌಚಾಲಯದಲ್ಲಿ ಗುಪ್ತ ದಾರಿಯೊಂದನ್ನು ಪೊಲೀಸರು ಪತ್ತೆಮಾಡಿದ್ದರು. ಆ ಗುಪ್ತದಾರಿಯ ಮೂಲಕ ಪ್ರವೇಶಿಸಿದ ಪೊಲೀಸರು ರಹಸ್ಯ ಕೊಠಡಿಯಲ್ಲಿ ಕೂಡಿ ಹಾಕಲಾಗಿದ್ದ 6 ಮಂದಿ ಬಾಂಗ್ಲಾ ದೇಶ ಮೂಲದ ಯುವತಿಯರನ್ನು ರಕ್ಷಿಸಿದ್ದಾರೆ. ಈ ದಾಳಿಯ ಸಂದರ್ಭದಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲದ ಕಿಂಗ್ ಪಿನ್ ಶಿವರಾಮ ಪೂಜಾರಿ ಎಂಬಾತ ತಪ್ಪಿಸಿಕೊಂಡಿದ್ದು, ಲಾಡ್ಜ್ ನಲ್ಲಿದ್ದ 15 ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ದಾಳಿ ಸಂದರ್ಭದಲ್ಲಿ ಯುವತಿಯರ ಬಳಿಇದ್ದ ಬಾಂಗ್ಲಾ ಕರೆನ್ಸಿ, ಐಡಿ ಕಾರ್ಡ್ ನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ.

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search