• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಪ್ರಧಾನಿ ಮೋದಿ ಅವರ ಆಯುಷ್ಯ, ಶ್ರೇಯೋಭಿವೃದ್ಧಿಗಾಗಿ ಕರಾವಳಿಯ ದೇಗುಲಗಳಲ್ಲಿ ವಿಶೇಷ ಪೂಜೆ!

Tulunadu News Posted On June 23, 2018
0


0
Shares
  • Share On Facebook
  • Tweet It

ಮಂಗಳೂರು : ಕರಾವಳಿಯ ಈ ದೇಗುಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಶ್ರೇಯೋಭಿವೃದ್ಧಿಗಾಗಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿಸಲಾಗುತ್ತಿದೆ. ಮೋದಿ ಅವರ ಆಯುಷ್ಯ ವೃದ್ಧಿಗಾಗಿ ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಪ್ರಧಾನಿ ಆಗಬೇಕು ಎಂದು ಪ್ರಾರ್ಥನೆಗಳು ನಡೆಯುತ್ತಿವೆ. ನಗರದ ವಿ.ಟಿ.ರಸ್ತೆಯಲ್ಲಿರುವ ವಿಠೋಬಾ ರುಕುಮಾಯಿ ದೇವಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿಗಾಗಿ ಪೂಜಾ ಕಾರ್ಯಗಳು ನಡೆಯುತ್ತಿವೆ. ನರೇಂದ್ರ ಮೋದಿ ಜನ್ಮನಕ್ಷತ್ರ ಅನೂರಾಧ ನಕ್ಷತ್ರವಾಗಿದ್ದು, ಪ್ರತಿ ತಿಂಗಳು ಈ ನಕ್ಷತ್ರದ ದಿನದಂದು ದೇವಾಲಯದಲ್ಲಿ ಪ್ರಧಾನಿ ಮೋದಿಗಾಗಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಕಳೆದ ಮೇ 29ರಂದು ಈ ವಿಠೋಬಾ ರುಕುಮಾಯಿ ದೇವಾಲಯದಲ್ಲಿ ಮೋದಿ ಅವರಿಗಾಗಿ ವಿಶೇಷ ಪೂಜೆ, ಪ್ರಾರ್ಥನೆ ನೆರವೇರಿಸಲಾಗಿದ್ದು, ಪೂಜೆಯ ಬಳಿಕ ಫಲಾಹಾರ ಪ್ರಸಾದ ಕೂಡ ವಿತರಿಸಲಾಗಿದೆ.

ಜೂನ್ 25ರಂದು ರಾತ್ರಿ 8 ಗಂಟೆಗೆ ಮೋದಿ ಅವರ ಶ್ರೇಯೋಭಿವೃದ್ಧಿಗಾಗಿ ವಿಶೇಷ ಪೂಜೆ ನಡೆಯಲಿದೆ. ಇದೇ ರೀತಿ ಉಡುಪಿಯ ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿಯೂ ಪ್ರಧಾನಿ ಹೆಸರಿನಲ್ಲಿ ಅನ್ನ ಸಂತರ್ಪಣೆ ನಡೆಯಲಿದೆ. ಜೂನ್ 25ರಂದು ಶ್ರೀ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ದಾಮೋದರದಾಸ್ ಮೋದಿ ಅವರ ಹೆಸರಿನಲ್ಲಿ ಅನ್ನಸಂತರ್ಪಣೆ ಸೇವೆ ಬುಕ್ ಮಾಡಲಾಗಿದೆ. ಕಟಪಾಡಿಯ ಮೋದಿ ಆಭಿಮಾನಿಗಳು ಮತ್ತು ಸಂಘಪರಿವಾರದ ಕಾರ್ಯಕರ್ತರು ಈ ಸೇವೆ ಬುಕ್ ಮಾಡಿದ್ದಾರೆ. ಪ್ರಧಾನಿ ಮೋದಿ ಹಾಗೂ ಕೇಂದ್ರ ಸರಕಾರದ ವಿರುದ್ಧ ದೆಹಲಿ ಕ್ರೈಸ್ತ ಧರ್ಮ ಪ್ರಾಂತ್ಯದ ಚರ್ಚ್ ಗಳಲ್ಲಿ ಮುಂದಿನ 2019 ಚುನಾವಣೆವರೆಗೂ ವಿಶೇಷ ಪ್ರಾರ್ಥನೆ ಹಾಗೂ ವಾರದಲ್ಲಿ ಒಂದು ದಿನ ಉಪವಾಸ ವ್ರತ ನಡೆಸಲು ಫರ್ಮಾನು ಹೊರಡಿಸಲಾಗಿತ್ತು. ಆ ಬಳಿಕ ದೇವಾಲಯಗಳಲ್ಲಿ ಮೋದಿ ಅವರಿಗಾಗಿ ಈ ಪೂಜೆ ಆಭಿಯಾನ ಆರಂಭವಾಗಿದೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search