• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಪ್ರಧಾನಿ ಮೋದಿ ಅವರ ಆಯುಷ್ಯ, ಶ್ರೇಯೋಭಿವೃದ್ಧಿಗಾಗಿ ಕರಾವಳಿಯ ದೇಗುಲಗಳಲ್ಲಿ ವಿಶೇಷ ಪೂಜೆ!

Tulunadu News Posted On June 23, 2018
0


0
Shares
  • Share On Facebook
  • Tweet It

ಮಂಗಳೂರು : ಕರಾವಳಿಯ ಈ ದೇಗುಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಶ್ರೇಯೋಭಿವೃದ್ಧಿಗಾಗಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿಸಲಾಗುತ್ತಿದೆ. ಮೋದಿ ಅವರ ಆಯುಷ್ಯ ವೃದ್ಧಿಗಾಗಿ ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಪ್ರಧಾನಿ ಆಗಬೇಕು ಎಂದು ಪ್ರಾರ್ಥನೆಗಳು ನಡೆಯುತ್ತಿವೆ. ನಗರದ ವಿ.ಟಿ.ರಸ್ತೆಯಲ್ಲಿರುವ ವಿಠೋಬಾ ರುಕುಮಾಯಿ ದೇವಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿಗಾಗಿ ಪೂಜಾ ಕಾರ್ಯಗಳು ನಡೆಯುತ್ತಿವೆ. ನರೇಂದ್ರ ಮೋದಿ ಜನ್ಮನಕ್ಷತ್ರ ಅನೂರಾಧ ನಕ್ಷತ್ರವಾಗಿದ್ದು, ಪ್ರತಿ ತಿಂಗಳು ಈ ನಕ್ಷತ್ರದ ದಿನದಂದು ದೇವಾಲಯದಲ್ಲಿ ಪ್ರಧಾನಿ ಮೋದಿಗಾಗಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಕಳೆದ ಮೇ 29ರಂದು ಈ ವಿಠೋಬಾ ರುಕುಮಾಯಿ ದೇವಾಲಯದಲ್ಲಿ ಮೋದಿ ಅವರಿಗಾಗಿ ವಿಶೇಷ ಪೂಜೆ, ಪ್ರಾರ್ಥನೆ ನೆರವೇರಿಸಲಾಗಿದ್ದು, ಪೂಜೆಯ ಬಳಿಕ ಫಲಾಹಾರ ಪ್ರಸಾದ ಕೂಡ ವಿತರಿಸಲಾಗಿದೆ.

ಜೂನ್ 25ರಂದು ರಾತ್ರಿ 8 ಗಂಟೆಗೆ ಮೋದಿ ಅವರ ಶ್ರೇಯೋಭಿವೃದ್ಧಿಗಾಗಿ ವಿಶೇಷ ಪೂಜೆ ನಡೆಯಲಿದೆ. ಇದೇ ರೀತಿ ಉಡುಪಿಯ ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿಯೂ ಪ್ರಧಾನಿ ಹೆಸರಿನಲ್ಲಿ ಅನ್ನ ಸಂತರ್ಪಣೆ ನಡೆಯಲಿದೆ. ಜೂನ್ 25ರಂದು ಶ್ರೀ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ದಾಮೋದರದಾಸ್ ಮೋದಿ ಅವರ ಹೆಸರಿನಲ್ಲಿ ಅನ್ನಸಂತರ್ಪಣೆ ಸೇವೆ ಬುಕ್ ಮಾಡಲಾಗಿದೆ. ಕಟಪಾಡಿಯ ಮೋದಿ ಆಭಿಮಾನಿಗಳು ಮತ್ತು ಸಂಘಪರಿವಾರದ ಕಾರ್ಯಕರ್ತರು ಈ ಸೇವೆ ಬುಕ್ ಮಾಡಿದ್ದಾರೆ. ಪ್ರಧಾನಿ ಮೋದಿ ಹಾಗೂ ಕೇಂದ್ರ ಸರಕಾರದ ವಿರುದ್ಧ ದೆಹಲಿ ಕ್ರೈಸ್ತ ಧರ್ಮ ಪ್ರಾಂತ್ಯದ ಚರ್ಚ್ ಗಳಲ್ಲಿ ಮುಂದಿನ 2019 ಚುನಾವಣೆವರೆಗೂ ವಿಶೇಷ ಪ್ರಾರ್ಥನೆ ಹಾಗೂ ವಾರದಲ್ಲಿ ಒಂದು ದಿನ ಉಪವಾಸ ವ್ರತ ನಡೆಸಲು ಫರ್ಮಾನು ಹೊರಡಿಸಲಾಗಿತ್ತು. ಆ ಬಳಿಕ ದೇವಾಲಯಗಳಲ್ಲಿ ಮೋದಿ ಅವರಿಗಾಗಿ ಈ ಪೂಜೆ ಆಭಿಯಾನ ಆರಂಭವಾಗಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search