• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇದು ಎಂಥಾ ಲೋಕವಯ್ಯಾ ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ

AvatarTNN Correspondent Posted On June 23, 2018


  • Share On Facebook
  • Tweet It

ಮಂಗಳೂರಿನಲ್ಲಿ ಸಂಪೂರ್ಣವಾಗಿ ಚಿತ್ರಿತವಾಗಿರುವ ಮತ್ತು ಇಲ್ಲಿನ ಕಲಾವಿದರೇ ಅಭಿನಯಿಸಿರುವ ಆದರೆ ವಿಭಿನ್ನ ನಿರೂಪಣೆಯೊಂದಿಗೆ ತಯಾರಾಗಿರುವ “ಇದು ಎಂಥಾ ಲೋಕವಯ್ಯಾ” ಸಿನೆಮಾ ಪೋಸ್ಟ್ ಪ್ರೊಡಕ್ಷನ್ ನ ಅಂತಿಮ ಘಟ್ಟ ತಲುಪಿದೆ. ಮಂಗಳೂರಿನ ಉದ್ಯಮಿ ಮಂಗಲ್ಪಾಡಿ ನರೇಶ್ ನಾಮದೇವ್ ಶೆಣೈಯವರ ಕಡ್ಲೆಕಾಯಿ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಮೂಡಿಬಂದಿರುವ ಈ ಸಿನೆಮಾವನ್ನು ಸಿತೇಶ್ ಗೋವಿಂದ್ ನಿರ್ಧೇಶಿಸಿದ್ದಾರೆ. 
ಸಿನೆಮಾದಲ್ಲಿ ನಾಯಕ, ನಾಯಕಿ ಇರಲೇಬೇಕು ಎನ್ನುವ ಸಂಪ್ರದಾಯವನ್ನು ಬಿಟ್ಟು ಕಲಾವಿದರು ತಮ್ಮ ಪಾತ್ರಗಳ ಮೂಲಕ ಅದನ್ನು ಕಟ್ಟಿಕೊಡುವ ಕೆಲಸ ಮಾಡಿದ್ದಾರೆ. ಇದು ಎಂಥಾ ಲೋಕವಯ್ಯಾ ಸಿನೆಮಾದಲ್ಲಿ ನಮ್ಮ ನಿಮ್ಮ ನಡುವಿರುವ ಜೀವಿಯೊಂದು ಒಂದು ಮನೆಯೊಳಗೆ ಮತ್ತು ಆಸುಪಾಸಿನಲ್ಲಿ ನಡೆಯುವ ಘಟನೆಗಳಿಗೆ ಹೇಗೆ ಸಾಕ್ಷಿಯಾಗುತ್ತದೆ ಎನ್ನುವುದನ್ನು ತೋರಿಸಲಾಗಿದೆ. ಮಾರ್ಜಾಲದ ಕಣ್ಣುಗಳ ಮೂಲಕ ಚಿತ್ರವನ್ನು ಕಟ್ಟಿಕೊಟ್ಟಿರುವ ನಿರ್ಧೇಶಕರು ಹಾಸ್ಯದ ಹಿನ್ನಲೆಯಲ್ಲಿ ಸಿನೆಮಾವನ್ನು ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದ್ದಾರೆ. ಚಿತ್ರದಲ್ಲಿ ವಾಸ್ತವವನ್ನು ಮೂಡನಂಬಿಕೆಯ ಆಯಾಮದಲ್ಲಿ ಮೂಡಿಸಿ ಪಾತ್ರಗಳು ತಮ್ಮ ಗಂಭೀರ ನಟನೆಯಲ್ಲಿ ಹೇಗೆ ಹ್ಯೂಮರ್ ಹೊರಡಿಸಬಹುದು ಎಂದು ತೋರಿಸಿಕೊಡಲಾಗಿದೆ. ಕರಾವಳಿ ಕರ್ನಾಟಕದಲ್ಲಿರುವ ಮರಳು ಮಾಫಿಯಾದಂತಹ ವಿಷಯಗಳ ನಡುವೆ ಅಗೋಚರತೆ ಮಿಶ್ರಣವಾದರೆ ಹೇಗೆ ಚಿತ್ರ ರಸವತ್ತಾಗಿ ಮೂಡಿಬರುತ್ತದೆ ಎನ್ನುವುದನ್ನು ಇದರಲ್ಲಿ ನೋಡಬಹುದು. ಈ ಚಿತ್ರದಲ್ಲಿ ಪ್ರಾಣಿ, ಮರಗಳು ಕೂಡ ಪಾತ್ರವಾಗಿವೆ.
ಒಂದು ಮೊಟ್ಟೆಯ ಕಥೆಗೆ ಸಹನಿರ್ಧೇಶಕರಾಗಿ ಕೆಲಸ ಮಾಡಿದ ಅನುಭವ ಸಿತೇಶ್ ಗೋವಿಂದ್ ಅವರಿಗಿದೆ. ಚಿತ್ರಕ್ಕೆ ಹೊಸ ಲುಕ್ ಬರಲು ಕಾರಣ ಕನ್ನಡದ ಪ್ರಕಾಶ್ ರೈ ಎಂದೇ ಖ್ಯಾತರಾಗಿರುವ ಗೋಪಿನಾಥ್ ಅವರ ಸಹಜ ಅಭಿನಯ. ಮೈಮ್ ರಾಮದಾಸ್, ದೀಪಕ್ ರೈ ಪಾಣಾಜೆ, ಅರ್ಜುನ್ ಕಜೆ, ವಿಶ್ವನಾಥ ಅಸೈಗೋಳಿ, ಚಂದ್ರಹಾಸ್ ಉಳ್ಳಾಲ್, ಪ್ರಕಾಶ್ ತುಮಿನಾಡು, ಅನುರಾಜ್, ಸುಕನ್ಯಾ, ಪ್ರೀತಿ ಮುತ್ತಪ್ಪ, ಮೈತ್ರಿ ಎಂ ಜೆ ಸಹಿತ ಅನೇಕ ಖ್ಯಾತನಾಮರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. 
  • Share On Facebook
  • Tweet It


- Advertisement -
Naresh Shenoy Edu Entha Lokavyaya


Trending Now
ಸ್ಮಾರ್ಟ್ ಸಿಟಿ ಡೆಬ್ರೀಸ್ ಮರುಬಳಕೆಗೆ 25 ಕೋಟಿ ವೆಚ್ಚದ ಯಂತ್ರ ಬರಲಿದೆಯಾ??
Tulunadu News January 22, 2021
ಗುಜರಿಯವರು ಬಾಕಿ ಇರಿಸಿರುವ ಲಕ್ಷಗಟ್ಟಲೆ ಹಣ ಕೇಳಲು ಪಾಲಿಕೆಗೆ ಧಮ್ ಇರಬೇಕಿತ್ತು.
Tulunadu News January 21, 2021
Leave A Reply

  • Recent Posts

    • ಸ್ಮಾರ್ಟ್ ಸಿಟಿ ಡೆಬ್ರೀಸ್ ಮರುಬಳಕೆಗೆ 25 ಕೋಟಿ ವೆಚ್ಚದ ಯಂತ್ರ ಬರಲಿದೆಯಾ??
    • ಗುಜರಿಯವರು ಬಾಕಿ ಇರಿಸಿರುವ ಲಕ್ಷಗಟ್ಟಲೆ ಹಣ ಕೇಳಲು ಪಾಲಿಕೆಗೆ ಧಮ್ ಇರಬೇಕಿತ್ತು.
    • ಬಸ್ ನಲ್ಲಿ ಯುವತಿಗೆ ದೈಹಿಕ ಕಿರುಕುಳ ನೀಡುತ್ತಿದ್ದ ಆರೋಪಿ ಹುಸೈನ್ ಬಂಧನ!
    • ಹಿಂದೂಗಳನ್ನು ಕೆಣಕುವ ಷಡ್ಯಂತ್ರ ವ್ಯವಸ್ಥಿತವಾಗಿ ನಡೆಯುತ್ತಿದೆ!!
    • 30 ವರ್ಷಗಳಿಂದ ನಗರ ಯೋಜನಾ ವಿಭಾಗದಲ್ಲಿ ಹೊರಳಾಡುತ್ತಿರುವವರಿಗೆ ಓಡಿಸಿ!!
    • ಪಾಲಿಕೆ ಮತ್ತು ಗುಜರಿಯವರ ನಡುವಿನ "ಪ್ರೇಮ" ಸಂಬಂಧದಿಂದ ಪಾಲಿಕೆಯಲ್ಲಿ ಧ್ವನಿ ಎತ್ತುವವರಿಲ್ಲ...
    • ಟ್ರಾಫಿಕ್ ಸಮಸ್ಯೆ ಪರಿಹಾರವಾದರೆ ಲಾಭ ನನಗೆ ಅಲ್ಲ, ನಿಮಗೆ ಮತ ನೀಡಿದ ಜನರಿಗೆ...
    • ಮಂಗಳೂರು ಗೋಲಿಬಾರ್ ರಿವೇಂಜ್, ಪೊಲೀಸ್ ಗಣೇಶ್ ಕಾಮತ್ ಕೊಲೆ ಯತ್ನ ಆರು ಆರೋಪಿಗಳು ಅರೆಸ್ಟ್!
    • ಸಹಾಯ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಎದುರು ಬೆತ್ತಲೆ ನಿಂತ ಉಳ್ಳಾಲ ಎಸ್ಡಿಪಿಐ ಮುಖಂಡ ಅರೆಸ್ಟ್!
    • ಮೋದಿಜಿ, ಏಳಿ, ಎದ್ದೇಳಿ, ಒಟಿಟಿ ಮುಗಿಸದೇ ನಿಲ್ಲದಿರಿ!!
  • Popular Posts

    • 1
      ಸ್ಮಾರ್ಟ್ ಸಿಟಿ ಡೆಬ್ರೀಸ್ ಮರುಬಳಕೆಗೆ 25 ಕೋಟಿ ವೆಚ್ಚದ ಯಂತ್ರ ಬರಲಿದೆಯಾ??
    • 2
      ಗುಜರಿಯವರು ಬಾಕಿ ಇರಿಸಿರುವ ಲಕ್ಷಗಟ್ಟಲೆ ಹಣ ಕೇಳಲು ಪಾಲಿಕೆಗೆ ಧಮ್ ಇರಬೇಕಿತ್ತು.
    • 3
      ಬಸ್ ನಲ್ಲಿ ಯುವತಿಗೆ ದೈಹಿಕ ಕಿರುಕುಳ ನೀಡುತ್ತಿದ್ದ ಆರೋಪಿ ಹುಸೈನ್ ಬಂಧನ!
    • 4
      ಹಿಂದೂಗಳನ್ನು ಕೆಣಕುವ ಷಡ್ಯಂತ್ರ ವ್ಯವಸ್ಥಿತವಾಗಿ ನಡೆಯುತ್ತಿದೆ!!
    • 5
      30 ವರ್ಷಗಳಿಂದ ನಗರ ಯೋಜನಾ ವಿಭಾಗದಲ್ಲಿ ಹೊರಳಾಡುತ್ತಿರುವವರಿಗೆ ಓಡಿಸಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia, Mangalore - 1

Press enter/return to begin your search