• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ಇದು ಎಂಥಾ ಲೋಕವಯ್ಯಾ ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ

TNN Correspondent Posted On June 23, 2018
0


0
Shares
  • Share On Facebook
  • Tweet It

ಮಂಗಳೂರಿನಲ್ಲಿ ಸಂಪೂರ್ಣವಾಗಿ ಚಿತ್ರಿತವಾಗಿರುವ ಮತ್ತು ಇಲ್ಲಿನ ಕಲಾವಿದರೇ ಅಭಿನಯಿಸಿರುವ ಆದರೆ ವಿಭಿನ್ನ ನಿರೂಪಣೆಯೊಂದಿಗೆ ತಯಾರಾಗಿರುವ “ಇದು ಎಂಥಾ ಲೋಕವಯ್ಯಾ” ಸಿನೆಮಾ ಪೋಸ್ಟ್ ಪ್ರೊಡಕ್ಷನ್ ನ ಅಂತಿಮ ಘಟ್ಟ ತಲುಪಿದೆ. ಮಂಗಳೂರಿನ ಉದ್ಯಮಿ ಮಂಗಲ್ಪಾಡಿ ನರೇಶ್ ನಾಮದೇವ್ ಶೆಣೈಯವರ ಕಡ್ಲೆಕಾಯಿ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಮೂಡಿಬಂದಿರುವ ಈ ಸಿನೆಮಾವನ್ನು ಸಿತೇಶ್ ಗೋವಿಂದ್ ನಿರ್ಧೇಶಿಸಿದ್ದಾರೆ. 
ಸಿನೆಮಾದಲ್ಲಿ ನಾಯಕ, ನಾಯಕಿ ಇರಲೇಬೇಕು ಎನ್ನುವ ಸಂಪ್ರದಾಯವನ್ನು ಬಿಟ್ಟು ಕಲಾವಿದರು ತಮ್ಮ ಪಾತ್ರಗಳ ಮೂಲಕ ಅದನ್ನು ಕಟ್ಟಿಕೊಡುವ ಕೆಲಸ ಮಾಡಿದ್ದಾರೆ. ಇದು ಎಂಥಾ ಲೋಕವಯ್ಯಾ ಸಿನೆಮಾದಲ್ಲಿ ನಮ್ಮ ನಿಮ್ಮ ನಡುವಿರುವ ಜೀವಿಯೊಂದು ಒಂದು ಮನೆಯೊಳಗೆ ಮತ್ತು ಆಸುಪಾಸಿನಲ್ಲಿ ನಡೆಯುವ ಘಟನೆಗಳಿಗೆ ಹೇಗೆ ಸಾಕ್ಷಿಯಾಗುತ್ತದೆ ಎನ್ನುವುದನ್ನು ತೋರಿಸಲಾಗಿದೆ. ಮಾರ್ಜಾಲದ ಕಣ್ಣುಗಳ ಮೂಲಕ ಚಿತ್ರವನ್ನು ಕಟ್ಟಿಕೊಟ್ಟಿರುವ ನಿರ್ಧೇಶಕರು ಹಾಸ್ಯದ ಹಿನ್ನಲೆಯಲ್ಲಿ ಸಿನೆಮಾವನ್ನು ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದ್ದಾರೆ. ಚಿತ್ರದಲ್ಲಿ ವಾಸ್ತವವನ್ನು ಮೂಡನಂಬಿಕೆಯ ಆಯಾಮದಲ್ಲಿ ಮೂಡಿಸಿ ಪಾತ್ರಗಳು ತಮ್ಮ ಗಂಭೀರ ನಟನೆಯಲ್ಲಿ ಹೇಗೆ ಹ್ಯೂಮರ್ ಹೊರಡಿಸಬಹುದು ಎಂದು ತೋರಿಸಿಕೊಡಲಾಗಿದೆ. ಕರಾವಳಿ ಕರ್ನಾಟಕದಲ್ಲಿರುವ ಮರಳು ಮಾಫಿಯಾದಂತಹ ವಿಷಯಗಳ ನಡುವೆ ಅಗೋಚರತೆ ಮಿಶ್ರಣವಾದರೆ ಹೇಗೆ ಚಿತ್ರ ರಸವತ್ತಾಗಿ ಮೂಡಿಬರುತ್ತದೆ ಎನ್ನುವುದನ್ನು ಇದರಲ್ಲಿ ನೋಡಬಹುದು. ಈ ಚಿತ್ರದಲ್ಲಿ ಪ್ರಾಣಿ, ಮರಗಳು ಕೂಡ ಪಾತ್ರವಾಗಿವೆ.
ಒಂದು ಮೊಟ್ಟೆಯ ಕಥೆಗೆ ಸಹನಿರ್ಧೇಶಕರಾಗಿ ಕೆಲಸ ಮಾಡಿದ ಅನುಭವ ಸಿತೇಶ್ ಗೋವಿಂದ್ ಅವರಿಗಿದೆ. ಚಿತ್ರಕ್ಕೆ ಹೊಸ ಲುಕ್ ಬರಲು ಕಾರಣ ಕನ್ನಡದ ಪ್ರಕಾಶ್ ರೈ ಎಂದೇ ಖ್ಯಾತರಾಗಿರುವ ಗೋಪಿನಾಥ್ ಅವರ ಸಹಜ ಅಭಿನಯ. ಮೈಮ್ ರಾಮದಾಸ್, ದೀಪಕ್ ರೈ ಪಾಣಾಜೆ, ಅರ್ಜುನ್ ಕಜೆ, ವಿಶ್ವನಾಥ ಅಸೈಗೋಳಿ, ಚಂದ್ರಹಾಸ್ ಉಳ್ಳಾಲ್, ಪ್ರಕಾಶ್ ತುಮಿನಾಡು, ಅನುರಾಜ್, ಸುಕನ್ಯಾ, ಪ್ರೀತಿ ಮುತ್ತಪ್ಪ, ಮೈತ್ರಿ ಎಂ ಜೆ ಸಹಿತ ಅನೇಕ ಖ್ಯಾತನಾಮರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. 
0
Shares
  • Share On Facebook
  • Tweet It


Naresh Shenoy Edu Entha Lokavyaya


Trending Now
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
  • Popular Posts

    • 1
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 2
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 3
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search