• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸತ್ತ ಉಗ್ರನ ಹೆಣದ ಮುಂದೆ ಪ್ರಚೋದನಾಕಾರಿ ಭಾಷಣಕ್ಕೆ ತಡೆ ನೀಡಿದ ಕಾಶ್ಮೀರ ಪೊಲೀಸರು

TNN Correspondent Posted On June 24, 2018
0


0
Shares
  • Share On Facebook
  • Tweet It

ಶ್ರೀನಗರ: ಪಾಪಿಕೃತ್ಯಗಳಲ್ಲಿ ಭಾಗಿಯಾಗಿ  ಭಾರತೀಯ ಸೈನಿಕರಿಂದ ಹತರಾದ ಭಯೋತ್ಪಾದಕರ ಸತ್ತ ಹೆಣಗಳ ಮುಂದೆ ಭಾಷಣ ಮಾಡಿ ಭಯೋತ್ಪಾದನೆಗೆ ಪ್ರೇರಣೆ ನೀಡುವುದಕ್ಕೆ ಜಮ್ಮು ಕಾಶ್ಮೀರ ಪೊಲೀಸರು ತಡೆ ನೀಡಿದ್ದಾರೆ. ಭಯೋತ್ಪಾದಕ ಅಂತ್ಯ ಸಂಸ್ಕಾರದ ವೇಳೆ ಸೇರುವ ಸಾವಿರಾರು ಜನರ ಎದುರು ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಯುವಕರನ್ನು ಭಯೋತ್ಪಾದಕ ಸಂಘಟನೆಗಳತ್ತ ಸೆಳೆಯಲು ಯತ್ನಿಸಲಾಗುತ್ತಿದೆ. ಆದ್ದರಿಂದ ಈ ನಿಯಮ ಜಾರಿಗೆ ತರಲಾಗಿದೆ ಎಂದು ಡಿಜಿಪಿ ಎಸ್ ಪಿ ವೈದ್ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಶತಾಯಗತಾಯ ಶಾಂತಿ ಕಾಪಾಡಲೇ ಬೇಕು ಎಂಬ ಕಠಿಣ ನಿರ್ಧಾರಕ್ಕೆ ಬಂದಿರುವ ಕೇಂದ್ರ ಸರ್ಕಾರ. ಸೈನಿಕರಿಗೆ ಮತ್ತು ಪೊಲೀಸರಿಗೆ ಸ್ವಾತಂತ್ರ್ಯ ನೀಡಿದ್ದು, ಅದರ ಸದ್ಭಳಕೆಯನ್ನು ಮಾಡಿಕೊಳ್ಳಲಾಗುತ್ತಿದೆ. ಭಯೋತ್ಪಾದಕನ ಅಂತ್ಯ ಸಂಸ್ಕಾರದ ವೇಳೆ ಆತನ ದೇಹದ ಮೆರವಣಿಗೆ ಮಾಡುವುದು, ಭಾಷಣ ಮಾಡುವುದು, ಗನ್ ಸೆಲ್ಯೂಟ್ ನೀಡಲಾಗುತ್ತದೆ ಇದರಿಂದ ಯುವಕರು ಭಯೋತ್ಪಾದನೆಯತ್ತ ಆಕರ್ಷಿತರಾಗುತ್ತಾರೆ. ಆದ್ದರಿಂದ ಜಮ್ಮು ಕಾಶ್ಮೀರದಲ್ಲಿ ಹತ್ಯೆಯಾದ ಭಯೋತ್ಪಾದಕರ ದೇಹಗಳನ್ನು ಕುಟುಂಬಕ್ಕೆ ಹಸ್ತಾಂತರಿಸುವ ವೇಳೆ ಹೆಚ್ಚಿನ ಜನರು ಸೇರದಂತೆ, ಅಂತ್ಯಸಂಸ್ಕಾರದಲ್ಲೂ ಸಾವಿರಾರು ಜನರು ಕೂಡದಂತೆ ರಸ್ತೆಗಳನ್ನು ಬಂದ್ ಮಾಡುವ ಕ್ರಮಗಳನ್ನು ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.

ಸತ್ತ ಭಯೋತ್ಪಾದಕನನ್ನು ಹುತಾತ್ಮನಂತೆ ಬಿಂಬಿಸಿ, ಪ್ರತ್ಯೇಕತಾವಾದಿಗಳು ಮತ್ತು ಭಯೋತ್ಪಾದಕ ಸಂಘಟನೆಗಳು ಯುವಕರನ್ನು ಮತ್ತೇ ದುಷ್ಕೃತ್ಯಗಳತ್ತ ಆಕರ್ಷಿಸುತ್ತಿರುವ ಘಟನೆಗಳು ಹೆಚ್ಚುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಯೋಜನೆಯೊಂದನ್ನು ಸಿದ್ಧಪಡಿಸಲಾಗಿದೆ ಎಂದು ಜಮ್ಮು ಕಾಶ್ಮೀರ ಡಿಜಿಪಿ ವೈದ್ ಮಾಹಿತಿ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಕೇರಳ ಇನ್ನು ಮುಂದೆ ಕೇರಳಂ!
Tulunadu News February 24, 2026
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
  • Popular Posts

    • 1
      ಕೇರಳ ಇನ್ನು ಮುಂದೆ ಕೇರಳಂ!
    • 2
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 3
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search