• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸತ್ತ ಉಗ್ರನ ಹೆಣದ ಮುಂದೆ ಪ್ರಚೋದನಾಕಾರಿ ಭಾಷಣಕ್ಕೆ ತಡೆ ನೀಡಿದ ಕಾಶ್ಮೀರ ಪೊಲೀಸರು

TNN Correspondent Posted On June 24, 2018
0


0
Shares
  • Share On Facebook
  • Tweet It

ಶ್ರೀನಗರ: ಪಾಪಿಕೃತ್ಯಗಳಲ್ಲಿ ಭಾಗಿಯಾಗಿ  ಭಾರತೀಯ ಸೈನಿಕರಿಂದ ಹತರಾದ ಭಯೋತ್ಪಾದಕರ ಸತ್ತ ಹೆಣಗಳ ಮುಂದೆ ಭಾಷಣ ಮಾಡಿ ಭಯೋತ್ಪಾದನೆಗೆ ಪ್ರೇರಣೆ ನೀಡುವುದಕ್ಕೆ ಜಮ್ಮು ಕಾಶ್ಮೀರ ಪೊಲೀಸರು ತಡೆ ನೀಡಿದ್ದಾರೆ. ಭಯೋತ್ಪಾದಕ ಅಂತ್ಯ ಸಂಸ್ಕಾರದ ವೇಳೆ ಸೇರುವ ಸಾವಿರಾರು ಜನರ ಎದುರು ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಯುವಕರನ್ನು ಭಯೋತ್ಪಾದಕ ಸಂಘಟನೆಗಳತ್ತ ಸೆಳೆಯಲು ಯತ್ನಿಸಲಾಗುತ್ತಿದೆ. ಆದ್ದರಿಂದ ಈ ನಿಯಮ ಜಾರಿಗೆ ತರಲಾಗಿದೆ ಎಂದು ಡಿಜಿಪಿ ಎಸ್ ಪಿ ವೈದ್ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಶತಾಯಗತಾಯ ಶಾಂತಿ ಕಾಪಾಡಲೇ ಬೇಕು ಎಂಬ ಕಠಿಣ ನಿರ್ಧಾರಕ್ಕೆ ಬಂದಿರುವ ಕೇಂದ್ರ ಸರ್ಕಾರ. ಸೈನಿಕರಿಗೆ ಮತ್ತು ಪೊಲೀಸರಿಗೆ ಸ್ವಾತಂತ್ರ್ಯ ನೀಡಿದ್ದು, ಅದರ ಸದ್ಭಳಕೆಯನ್ನು ಮಾಡಿಕೊಳ್ಳಲಾಗುತ್ತಿದೆ. ಭಯೋತ್ಪಾದಕನ ಅಂತ್ಯ ಸಂಸ್ಕಾರದ ವೇಳೆ ಆತನ ದೇಹದ ಮೆರವಣಿಗೆ ಮಾಡುವುದು, ಭಾಷಣ ಮಾಡುವುದು, ಗನ್ ಸೆಲ್ಯೂಟ್ ನೀಡಲಾಗುತ್ತದೆ ಇದರಿಂದ ಯುವಕರು ಭಯೋತ್ಪಾದನೆಯತ್ತ ಆಕರ್ಷಿತರಾಗುತ್ತಾರೆ. ಆದ್ದರಿಂದ ಜಮ್ಮು ಕಾಶ್ಮೀರದಲ್ಲಿ ಹತ್ಯೆಯಾದ ಭಯೋತ್ಪಾದಕರ ದೇಹಗಳನ್ನು ಕುಟುಂಬಕ್ಕೆ ಹಸ್ತಾಂತರಿಸುವ ವೇಳೆ ಹೆಚ್ಚಿನ ಜನರು ಸೇರದಂತೆ, ಅಂತ್ಯಸಂಸ್ಕಾರದಲ್ಲೂ ಸಾವಿರಾರು ಜನರು ಕೂಡದಂತೆ ರಸ್ತೆಗಳನ್ನು ಬಂದ್ ಮಾಡುವ ಕ್ರಮಗಳನ್ನು ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.

ಸತ್ತ ಭಯೋತ್ಪಾದಕನನ್ನು ಹುತಾತ್ಮನಂತೆ ಬಿಂಬಿಸಿ, ಪ್ರತ್ಯೇಕತಾವಾದಿಗಳು ಮತ್ತು ಭಯೋತ್ಪಾದಕ ಸಂಘಟನೆಗಳು ಯುವಕರನ್ನು ಮತ್ತೇ ದುಷ್ಕೃತ್ಯಗಳತ್ತ ಆಕರ್ಷಿಸುತ್ತಿರುವ ಘಟನೆಗಳು ಹೆಚ್ಚುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಯೋಜನೆಯೊಂದನ್ನು ಸಿದ್ಧಪಡಿಸಲಾಗಿದೆ ಎಂದು ಜಮ್ಮು ಕಾಶ್ಮೀರ ಡಿಜಿಪಿ ವೈದ್ ಮಾಹಿತಿ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search