• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸತ್ತ ಉಗ್ರನ ಹೆಣದ ಮುಂದೆ ಪ್ರಚೋದನಾಕಾರಿ ಭಾಷಣಕ್ಕೆ ತಡೆ ನೀಡಿದ ಕಾಶ್ಮೀರ ಪೊಲೀಸರು

TNN Correspondent Posted On June 24, 2018


  • Share On Facebook
  • Tweet It

ಶ್ರೀನಗರ: ಪಾಪಿಕೃತ್ಯಗಳಲ್ಲಿ ಭಾಗಿಯಾಗಿ  ಭಾರತೀಯ ಸೈನಿಕರಿಂದ ಹತರಾದ ಭಯೋತ್ಪಾದಕರ ಸತ್ತ ಹೆಣಗಳ ಮುಂದೆ ಭಾಷಣ ಮಾಡಿ ಭಯೋತ್ಪಾದನೆಗೆ ಪ್ರೇರಣೆ ನೀಡುವುದಕ್ಕೆ ಜಮ್ಮು ಕಾಶ್ಮೀರ ಪೊಲೀಸರು ತಡೆ ನೀಡಿದ್ದಾರೆ. ಭಯೋತ್ಪಾದಕ ಅಂತ್ಯ ಸಂಸ್ಕಾರದ ವೇಳೆ ಸೇರುವ ಸಾವಿರಾರು ಜನರ ಎದುರು ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಯುವಕರನ್ನು ಭಯೋತ್ಪಾದಕ ಸಂಘಟನೆಗಳತ್ತ ಸೆಳೆಯಲು ಯತ್ನಿಸಲಾಗುತ್ತಿದೆ. ಆದ್ದರಿಂದ ಈ ನಿಯಮ ಜಾರಿಗೆ ತರಲಾಗಿದೆ ಎಂದು ಡಿಜಿಪಿ ಎಸ್ ಪಿ ವೈದ್ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಶತಾಯಗತಾಯ ಶಾಂತಿ ಕಾಪಾಡಲೇ ಬೇಕು ಎಂಬ ಕಠಿಣ ನಿರ್ಧಾರಕ್ಕೆ ಬಂದಿರುವ ಕೇಂದ್ರ ಸರ್ಕಾರ. ಸೈನಿಕರಿಗೆ ಮತ್ತು ಪೊಲೀಸರಿಗೆ ಸ್ವಾತಂತ್ರ್ಯ ನೀಡಿದ್ದು, ಅದರ ಸದ್ಭಳಕೆಯನ್ನು ಮಾಡಿಕೊಳ್ಳಲಾಗುತ್ತಿದೆ. ಭಯೋತ್ಪಾದಕನ ಅಂತ್ಯ ಸಂಸ್ಕಾರದ ವೇಳೆ ಆತನ ದೇಹದ ಮೆರವಣಿಗೆ ಮಾಡುವುದು, ಭಾಷಣ ಮಾಡುವುದು, ಗನ್ ಸೆಲ್ಯೂಟ್ ನೀಡಲಾಗುತ್ತದೆ ಇದರಿಂದ ಯುವಕರು ಭಯೋತ್ಪಾದನೆಯತ್ತ ಆಕರ್ಷಿತರಾಗುತ್ತಾರೆ. ಆದ್ದರಿಂದ ಜಮ್ಮು ಕಾಶ್ಮೀರದಲ್ಲಿ ಹತ್ಯೆಯಾದ ಭಯೋತ್ಪಾದಕರ ದೇಹಗಳನ್ನು ಕುಟುಂಬಕ್ಕೆ ಹಸ್ತಾಂತರಿಸುವ ವೇಳೆ ಹೆಚ್ಚಿನ ಜನರು ಸೇರದಂತೆ, ಅಂತ್ಯಸಂಸ್ಕಾರದಲ್ಲೂ ಸಾವಿರಾರು ಜನರು ಕೂಡದಂತೆ ರಸ್ತೆಗಳನ್ನು ಬಂದ್ ಮಾಡುವ ಕ್ರಮಗಳನ್ನು ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.

ಸತ್ತ ಭಯೋತ್ಪಾದಕನನ್ನು ಹುತಾತ್ಮನಂತೆ ಬಿಂಬಿಸಿ, ಪ್ರತ್ಯೇಕತಾವಾದಿಗಳು ಮತ್ತು ಭಯೋತ್ಪಾದಕ ಸಂಘಟನೆಗಳು ಯುವಕರನ್ನು ಮತ್ತೇ ದುಷ್ಕೃತ್ಯಗಳತ್ತ ಆಕರ್ಷಿಸುತ್ತಿರುವ ಘಟನೆಗಳು ಹೆಚ್ಚುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಯೋಜನೆಯೊಂದನ್ನು ಸಿದ್ಧಪಡಿಸಲಾಗಿದೆ ಎಂದು ಜಮ್ಮು ಕಾಶ್ಮೀರ ಡಿಜಿಪಿ ವೈದ್ ಮಾಹಿತಿ ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search