• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸತ್ತ ಉಗ್ರನ ಹೆಣದ ಮುಂದೆ ಪ್ರಚೋದನಾಕಾರಿ ಭಾಷಣಕ್ಕೆ ತಡೆ ನೀಡಿದ ಕಾಶ್ಮೀರ ಪೊಲೀಸರು

TNN Correspondent Posted On June 24, 2018
0


0
Shares
  • Share On Facebook
  • Tweet It

ಶ್ರೀನಗರ: ಪಾಪಿಕೃತ್ಯಗಳಲ್ಲಿ ಭಾಗಿಯಾಗಿ  ಭಾರತೀಯ ಸೈನಿಕರಿಂದ ಹತರಾದ ಭಯೋತ್ಪಾದಕರ ಸತ್ತ ಹೆಣಗಳ ಮುಂದೆ ಭಾಷಣ ಮಾಡಿ ಭಯೋತ್ಪಾದನೆಗೆ ಪ್ರೇರಣೆ ನೀಡುವುದಕ್ಕೆ ಜಮ್ಮು ಕಾಶ್ಮೀರ ಪೊಲೀಸರು ತಡೆ ನೀಡಿದ್ದಾರೆ. ಭಯೋತ್ಪಾದಕ ಅಂತ್ಯ ಸಂಸ್ಕಾರದ ವೇಳೆ ಸೇರುವ ಸಾವಿರಾರು ಜನರ ಎದುರು ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಯುವಕರನ್ನು ಭಯೋತ್ಪಾದಕ ಸಂಘಟನೆಗಳತ್ತ ಸೆಳೆಯಲು ಯತ್ನಿಸಲಾಗುತ್ತಿದೆ. ಆದ್ದರಿಂದ ಈ ನಿಯಮ ಜಾರಿಗೆ ತರಲಾಗಿದೆ ಎಂದು ಡಿಜಿಪಿ ಎಸ್ ಪಿ ವೈದ್ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಶತಾಯಗತಾಯ ಶಾಂತಿ ಕಾಪಾಡಲೇ ಬೇಕು ಎಂಬ ಕಠಿಣ ನಿರ್ಧಾರಕ್ಕೆ ಬಂದಿರುವ ಕೇಂದ್ರ ಸರ್ಕಾರ. ಸೈನಿಕರಿಗೆ ಮತ್ತು ಪೊಲೀಸರಿಗೆ ಸ್ವಾತಂತ್ರ್ಯ ನೀಡಿದ್ದು, ಅದರ ಸದ್ಭಳಕೆಯನ್ನು ಮಾಡಿಕೊಳ್ಳಲಾಗುತ್ತಿದೆ. ಭಯೋತ್ಪಾದಕನ ಅಂತ್ಯ ಸಂಸ್ಕಾರದ ವೇಳೆ ಆತನ ದೇಹದ ಮೆರವಣಿಗೆ ಮಾಡುವುದು, ಭಾಷಣ ಮಾಡುವುದು, ಗನ್ ಸೆಲ್ಯೂಟ್ ನೀಡಲಾಗುತ್ತದೆ ಇದರಿಂದ ಯುವಕರು ಭಯೋತ್ಪಾದನೆಯತ್ತ ಆಕರ್ಷಿತರಾಗುತ್ತಾರೆ. ಆದ್ದರಿಂದ ಜಮ್ಮು ಕಾಶ್ಮೀರದಲ್ಲಿ ಹತ್ಯೆಯಾದ ಭಯೋತ್ಪಾದಕರ ದೇಹಗಳನ್ನು ಕುಟುಂಬಕ್ಕೆ ಹಸ್ತಾಂತರಿಸುವ ವೇಳೆ ಹೆಚ್ಚಿನ ಜನರು ಸೇರದಂತೆ, ಅಂತ್ಯಸಂಸ್ಕಾರದಲ್ಲೂ ಸಾವಿರಾರು ಜನರು ಕೂಡದಂತೆ ರಸ್ತೆಗಳನ್ನು ಬಂದ್ ಮಾಡುವ ಕ್ರಮಗಳನ್ನು ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.

ಸತ್ತ ಭಯೋತ್ಪಾದಕನನ್ನು ಹುತಾತ್ಮನಂತೆ ಬಿಂಬಿಸಿ, ಪ್ರತ್ಯೇಕತಾವಾದಿಗಳು ಮತ್ತು ಭಯೋತ್ಪಾದಕ ಸಂಘಟನೆಗಳು ಯುವಕರನ್ನು ಮತ್ತೇ ದುಷ್ಕೃತ್ಯಗಳತ್ತ ಆಕರ್ಷಿಸುತ್ತಿರುವ ಘಟನೆಗಳು ಹೆಚ್ಚುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಯೋಜನೆಯೊಂದನ್ನು ಸಿದ್ಧಪಡಿಸಲಾಗಿದೆ ಎಂದು ಜಮ್ಮು ಕಾಶ್ಮೀರ ಡಿಜಿಪಿ ವೈದ್ ಮಾಹಿತಿ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search