• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಆಪ್ತ ಶಾಸಕರ ಜೊತೆ ರಹಸ್ಯ ಸಭೆ ನಡೆಸಿದ ಸಿದ್ದರಾಮಯ್ಯ!

Tulunadu News Posted On June 24, 2018
0


0
Shares
  • Share On Facebook
  • Tweet It

ಮಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಶಾಸಕರ ಜೊತೆ ಸಭೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಅವರು ಧರ್ಮಸ್ಥಳದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿದ್ದರಾಮಯ್ಯ ಅವರು ಧರ್ಮಸ್ಥಳದ ಶಾಂತಿವನದಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಅಲ್ಲಿಯೇ ಆಪ್ತ ಶಾಸಕರ ಜೊತೆ ಅವರು ಸಭೆ ನಡೆಸಿದ್ದು, ರಾಜಕೀಯ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಜೆಟ್ ಮಂಡನೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದರ ನಡುವೆಯೇ ಸಿದ್ದರಾಮಯ್ಯ ಅವರು ಶಾಸಕರ ಸಭೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಶಾಸಕರಾದ ಬೈರತಿ ಬಸವರಾಜು, ಮುನಿರತ್ನ, ಎಸ್.ಟಿ.ಸೋಮಶೇಖರ್ ಸೇರಿದಂತೆ ಹಲವರು ಧರ್ಮಸ್ಥಳದಲ್ಲಿರುವ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿದ್ದರು. ಆಗ ಶಾಸಕರ ಜೊತೆ ಅವರು ಸಭೆ ನಡೆಸಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಬಂದಿದ್ದರು. ಕಾಂಗ್ರೆಸ್ ನಾಯಕರ ವಿರುದ್ಧ ದೂರು ನೀಡಿದ್ದಾರೆ ಎಂಬ ಸುದ್ದಿಯೂ ಇದೆ. ಆದ್ದರಿಂದ, ಸಿದ್ದರಾಯ್ಯ ಸಭೆಯಲ್ಲಿ ಏನು ಚರ್ಚೆ ನಡೆಸಿರಬಹುದು ಎಂಬುದು ಕುತೂಹಲಕ್ಕೆ ಕಾರಣವಾಗಿದೆ. 10 ದಿನಗಳ ಚಿಕಿತ್ಸೆಗಾಗಿ ಸಿದ್ದರಾಮಯ್ಯ ಅವರು ಶಾಂತಿವನಕ್ಕೆ ದಾಖಲಾಗಿದ್ದಾರೆ. ಕಳೆದ ವಾರ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಈಗ ಶಾಸಕರು ಭೇಟಿ ಮಾಡಿ, ಸಭೆ ನಡೆಸಿದ್ದಾರೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search