• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಆಪ್ತ ಶಾಸಕರ ಜೊತೆ ರಹಸ್ಯ ಸಭೆ ನಡೆಸಿದ ಸಿದ್ದರಾಮಯ್ಯ!

Tulunadu News Posted On June 24, 2018
0


0
Shares
  • Share On Facebook
  • Tweet It

ಮಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಶಾಸಕರ ಜೊತೆ ಸಭೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಅವರು ಧರ್ಮಸ್ಥಳದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿದ್ದರಾಮಯ್ಯ ಅವರು ಧರ್ಮಸ್ಥಳದ ಶಾಂತಿವನದಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಅಲ್ಲಿಯೇ ಆಪ್ತ ಶಾಸಕರ ಜೊತೆ ಅವರು ಸಭೆ ನಡೆಸಿದ್ದು, ರಾಜಕೀಯ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಜೆಟ್ ಮಂಡನೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದರ ನಡುವೆಯೇ ಸಿದ್ದರಾಮಯ್ಯ ಅವರು ಶಾಸಕರ ಸಭೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಶಾಸಕರಾದ ಬೈರತಿ ಬಸವರಾಜು, ಮುನಿರತ್ನ, ಎಸ್.ಟಿ.ಸೋಮಶೇಖರ್ ಸೇರಿದಂತೆ ಹಲವರು ಧರ್ಮಸ್ಥಳದಲ್ಲಿರುವ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿದ್ದರು. ಆಗ ಶಾಸಕರ ಜೊತೆ ಅವರು ಸಭೆ ನಡೆಸಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಬಂದಿದ್ದರು. ಕಾಂಗ್ರೆಸ್ ನಾಯಕರ ವಿರುದ್ಧ ದೂರು ನೀಡಿದ್ದಾರೆ ಎಂಬ ಸುದ್ದಿಯೂ ಇದೆ. ಆದ್ದರಿಂದ, ಸಿದ್ದರಾಯ್ಯ ಸಭೆಯಲ್ಲಿ ಏನು ಚರ್ಚೆ ನಡೆಸಿರಬಹುದು ಎಂಬುದು ಕುತೂಹಲಕ್ಕೆ ಕಾರಣವಾಗಿದೆ. 10 ದಿನಗಳ ಚಿಕಿತ್ಸೆಗಾಗಿ ಸಿದ್ದರಾಮಯ್ಯ ಅವರು ಶಾಂತಿವನಕ್ಕೆ ದಾಖಲಾಗಿದ್ದಾರೆ. ಕಳೆದ ವಾರ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಈಗ ಶಾಸಕರು ಭೇಟಿ ಮಾಡಿ, ಸಭೆ ನಡೆಸಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search