• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಿಎಸ್ಟಿ ಯಶಸ್ಸು ನಿಷ್ಠೆಗೆ ಸಂದ ಜಯ, ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮೋದಿ ಹೇಳಿಕೆ

TNN Correspondent Posted On June 24, 2018
0


0
Shares
  • Share On Facebook
  • Tweet It

ಹೊಸದಿಲ್ಲಿ: ಸಾಮಾನ್ಯವಾಗಿ ಯಾವುದೇ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಯೋಜನೆಯು ಜಾರಿಯಾದ 5-7 ವರ್ಷದಲ್ಲಿ ಪ್ರತಿಫಲ ನೀಡುತ್ತದೆ. ಆದರೆ ಭಾರತದಲ್ಲಿ ಒಂದೇ ವರ್ಷದಲ್ಲಿ ಜಿಎಸ್ಟಿ ಯಶಸ್ವಿಯಾಗಿದ್ದು, ಇದು ಸರ್ಕಾರದ ನಿಷ್ಠೆಗೆ ಸಂದ ಜಯ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಂದು ದೇಶ, ಒಂದು ತೆರಿಗೆ ಎಂಬುದು ಪ್ರತಿ ಭಾರತೀಯನ ಕನಸಾಗಿತ್ತು. ಅದರಲ್ಲೂ ನಾವು ಜಿಎಸ್ಟಿ ಜಾರಿಗೆ ತರಲು ಹೊರಟಾಗಿ ಪ್ರತಿ ರಾಜ್ಯಗಳು ಸಹಕಾರ ನೀಡಿವೆ. ಜಿಎಸ್ಟಿ ಯಶಸ್ಸಿನ ಹೆಗ್ಗಳಿಕೆ ಈ ರಾಜ್ಯಕ್ಕೂ ಸಲ್ಲಬೇಕು. ಇದು ಪ್ರಜಾಪ್ರಭುತ್ವದ ಸೌಂದರ್ಯವಾಗಿದೆ, ನಿಷ್ಠೆಗೆ ಸಂದ ಜಯವಾಗಿದೆ ಎಂದು ವರ್ಣಿಸಿದ್ದಾರೆ.

ಶಾಮ್ ಪ್ರಸಾದ್ ಮುಖರ್ಜಿಯವರು ಶಿಕ್ಷಣ ಪ್ರೇಮಿಯಾಗಿದ್ದರು. ಅವರು ಕೋಲ್ಕತ್ತಾ ವಿಶ್ವವಿದ್ಯಾಲಯದ ಅತಿ ಕಿರಿಯ ವಯಸ್ಸಿನ ಉಪಕುಲಪತಿಯಾಗಿದ್ದರು. ಮುಖರ್ಜಿಯವರ ಆಹ್ವಾನದ ಮೇರೆಗೆ ರವೀಂದ್ರ ನಾಥ ಟ್ಯಾಗೋರ್ ಅವರು ವಿವಿಯಲ್ಲಿ ಆಯೋಜಿಸಿದ್ದ ಘಟಿಕೋತ್ಸವದಲ್ಲಿ ಮಾತನಾಡಿದ್ದರು ಎಂದು ಮೋದಿ ಸ್ಮರಿಸಿದ್ದಾರೆ.

ನಮ್ಮ ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸಕ್ಕೆ ಹಲವು ವರ್ಷಗಳ ಶ್ರಮವಿದೆ. ಜಲಿಯನ್ ವಾಲಾಭಾಗ್ ಹತ್ಯಾಕಾಂಡ ನಡೆದು ಮುಂದಿನ ವರ್ಷಕ್ಕೆ ನೂರು ವರ್ಷ ತುಂಬುತ್ತದೆ. ಆದರೆ ದೇಶವನ್ನು ಯಾವಾಗಲೂ ಮುನ್ನಡೆಸುವುದು, ಅಭಿವೃದ್ಧಿಯತ್ತ ಸಾಗಿಸುವುದು ಶಾಂತಿಯೇ ಎಂದು ಮೋದಿ ಅಭಿಪ್ರಾಯಪಟ್ಟರು.

ಪ್ರಸಕ್ತ ಸಾಲಿನಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಯಶಸ್ವಿಯಾಗಿದ್ದು, ಯೋಗ ಎಲ್ಲರನ್ನೂ ಒಗ್ಗೂಡಿಸುತ್ತಿದೆ. ಅದರಲ್ಲೂ ಈ ಬಾರಿ ಸೌದಿ ಅರೇಬಿಯಾದಲ್ಲಿ ಮಹಿಳೆಯರ ನೇತೃತ್ವದಲ್ಲಿ ಯೋಗ ಕಾರ್ಯಕ್ರಮಗಳು ನಡೆದಿವೆ. ನಮ್ಮ ಯೋಧರೂ ಸಹ ಸಿಯಾಚಿನ್, ಸಮುದ್ರದಲ್ಲಿ ಯೋಗ ಮಾಡುವ ಮೂಲಕ ಸ್ಫೂರ್ತಿ ತುಂಬಿದ್ದಾರೆ ಎಂದು ಮೋದಿ ತಿಳಿಸಿದರು.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search