• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚಹಾ ಮಾರುವವರು ಪ್ರಧಾನಿಯಾದರು, ಈಗ ಚಹಾ ಮಾರುವವರ ಪುತ್ರಿ ಯೋಧೆಯಾದ ಹೆಮ್ಮೆಯ ಕತೆ ಕೇಳಿ…

TNN Correspondent Posted On June 25, 2018
0


0
Shares
  • Share On Facebook
  • Tweet It

ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಯಾವ ಉನ್ನತ ಸಾಧನೆಯಾದರೂ ಮಾಡಬಹುದು. ಟೀ ಮಾರುವವರೊಬ್ಬರು ಪ್ರಧಾನಿಯಾಗಬಹುದು. ಯೋಗಿಯೊಬ್ಬರು ಮುಖ್ಯಮಂತ್ರಿಯಾಗಬಹುದು. ಸಮುದ್ರದ ದಂಡೆಯಲ್ಲಿ ನಿಂತು ಪಾನಿಪೂರಿ ಮಾರುವವರು ದೇಶದ ನಂಬರ್ ಒನ್ ಉದ್ಯಮಿಯಾಗಬಹುದು. ಇಂತಹ ಹಲವು ಉದಾಹರಣೆಗಳಿಗೆ ಭಾರತ ಸಾಕ್ಷಿಯಾಗಿದೆ.

ಈಗ ಇಂತಹುದೇ ಸಾಕ್ಷಿಯೊಂದು ಲಭಿಸಿದ್ದು, ಮಧ್ಯಪ್ರದೇಶದಲ್ಲಿ ಟೀ ಮಾರುವ ವ್ಯಕ್ತಿಯೊಬ್ಬರ ಮಗಳು ವಾಯುಸೇನೆಗೆ ಆಯ್ಕೆಯಾಗುವ ಮೂಲಕ ದೇಶದ ಕೀರ್ತಿ ಹೆಚ್ಚಿಸಿದ್ದಾಳೆ. ಹೌದು, 24 ವರ್ಷದ ಅಂಚಾಲ್ ಗಂಗ್ವಾಲ್ ಅಂತಹ ಸಾಧನೆ ಮೆರೆದಿದ್ದಾರೆ.

ಇತ್ತೀಚೆಗೆ ವಾಯುಸೇನೆ ಹಾರಾಟ ವಿಭಾಗಕ್ಕೆ ನಡೆಸಿದ ಪ್ರವೇಶ ಪರೀಕ್ಷೆಯಲ್ಲಿ ಅಂಚಾಲ್ ಗಂಗ್ವಾಲ್ ಆಯ್ಕೆಯಾಗಿದ್ದಾರೆ. ಆ ಮೂಲಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮಧ್ಯಪ್ರದೇಶದ ಏಕೈಕ ಮಹಿಳೆ ಎನಿಸಿದ್ದಾರೆ.

ತಂದೆ ಸುರೇಶ್ ಗಂಗ್ವಾಲ್ ಹಾಗೂ ಕುಟುಂಬ ಮಧ್ಯಪ್ರದೇಶದ ಮಿಮುಜ್ ಜಿಲ್ಲೆಯಲ್ಲಿ ವಾಸಿಸುತ್ತಿದ್ದು, ಸುರೇಶ್ ಗಂಗ್ವಾಲ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಚಹಾದ ಅಂಗಡಿ ನಡೆಸುತ್ತಿದ್ದಾರೆ. ಅಲ್ಲದೆ ಮಗಳು ಮಾಡಿರುವ ಸಾಧನೆ ಕಂಡು ಈಗ ಚಹಾದ ಅಂಗಡಿ ಬರುವ ಗ್ರಾಹಕರೆಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಸುರೇಶ್ ತಿಳಿಸಿದ್ದಾರೆ.

ಈ ಕುರಿತು ಅಂಚಾಲ್ ಗಂಗ್ವಾಲ್ ಸಹ ಮಾತನಾಡಿದ್ದು, 2013ರಲ್ಲಿ ಉತ್ತರಾಖಂಡದಲ್ಲಿ ಉಂಟಾದ ಪ್ರಕೃತಿ ವಿಕೋಪದ ವೇಳೆ ಭಾರತೀಯ ರಕ್ಷಣಾ ಪಡೆ ನಡೆಸಿದ ರಕ್ಷಣಾ ಕಾರ್ಯಾಚರಣೆಯಿಂದ ಸ್ಫೂರ್ತಿ ಪಡೆದೆ. ನಾನಾಗ ಪಿಯುಸಿಯಲ್ಲಿದ್ದು, ಹಲವು ಬಾರಿ ವಾಯುಸೇನೆ ಪರೀಕ್ಷೆ ಬರೆದು ಈಗ ಉತ್ತೀರ್ಣಳಾಗಿದ್ದೇನೆ ಎಂದು ನಗೆ ಬೀರುತ್ತಾರೆ.

ಹಾಗಂತ ಪರೀಕ್ಷೆಯೇನೂ ಸರಳವಾಗಿರಲಿಲ್ಲ. ದೇಶಾದ್ಯಂತ ಸುಮಾರು 6 ಲಕ್ಷ ಅಭರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ ಆಯ್ಕೆಯಾಗಿದ್ದು ಕೇವಲ 22 ಮಂದಿ. ಅದರಲ್ಲಿ ಅಂಚಾಲ್ ಸಹ ಒಬ್ಬರಾಗಿದ್ದಾರೆ ಎಂಬುದು ವಿಶೇಷ. ಆಲ್ ದಿ ಬೆಸ್ಟ್ ಅಂಚಾಲ್.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search