• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕರಾವಳಿಯಲ್ಲಿ ಬಹಳ ದಿನಗಳವರೆಗೆ ಮೀನುಗಳು ಕೆಡದಂತೆ ಕೆಮಿಕಲ್ ಲೇಪಿಸಿ ಮಾರುಕಟ್ಟೆಗಳಲ್ಲಿ ಮಾರಾಟ ಆರೋಪ!

Tulunadu News Posted On June 25, 2018
0


0
Shares
  • Share On Facebook
  • Tweet It

ಮಂಗಳೂರು : ಹಣ್ಣುಗಳು ಕೆಡದಂತೆ, ತರಕಾರಿಗಳು ತಾಜಾ ಕಾಣುವಂತೆ ಮಾಡಲು ಕೆಮಿಕಲ್ ಲೇಪನ ಮಾಡಿ ಮಾರಾಟ ಮಾಡುವ ಘಟನೆಗಳು ಈಗಾಗಲೇ ಬಯಲಾಗಿವೆ. ಈಗ ಮೀನಿನ ಸರದಿ. ಹೌದು ಇಂತಹದೊಂದು ಆರೋಪ ಕೆಲವು ದಿನಗಳಿಂದ ಕೇಳಿಬರುತ್ತಿದೆ. ಬಹಳ ದಿನಗಳವರೆಗೆ ಮೀನುಗಳು ಕೆಡದಂತೆ ಕೆಮಿಕಲ್ ಲೇಪಿಸಿ ತಂದು ಮಾರುಕಟ್ಟೆಗಳಲ್ಲಿ ಮಾರಟ ಮಾಡಲಾಗುತ್ತಿದೆ ಎಂಬ ಆರೋಪ ಕರಾವಳಿಯಲ್ಲಿ ಕೇಳಿಬರುತ್ತಿದೆ. ಇದು ಮೀನು ಪ್ರಿಯರಲ್ಲಿ ಆತಂಕ ಮೂಡಿಸಿದೆ. ಈ ಕುರಿತ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಿಂಗಳುಗಟ್ಟಲೆ ಹಾಳಾಗದಂತೆ ಹಣ್ಣುಗಳಿಗೆ ಕೆಮಿಕಲ್ ಹಾಕಿ ಮಾರಾಟ ಮಾಡುವಂತೆ ಈಗ ಮೀನಿಗೂ ವಿಷಕಾರಿ ಅಮೋನಿಯಾ ಬೆರೆಸಿ ವಾರಗಟ್ಟಲೆ ಮಾರಾಟವಾಗುವಂತೆ ನೋಡಿಕೊಳ್ಳುವ ದಂಧೆ ಕರಾವಳಿಯ ಎಲ್ಲೆಡೆ ಆರಂಭವಾಗಿದೆ ಎಂದು ಆರೋಪಿಸಲಾಗಿದೆ. ವಾರಗಟ್ಟಲೆ ಐಸ್ ನಲ್ಲಿಟ್ಟ ಮೀನುಗಳನ್ನು ಗಿರಾಕಿಗಳಿಗೆ ಫ್ರೆಶ್ ಎಂದು ತೋರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ವಿಡಿಯೋದಲ್ಲಿ ತೋರಿಸಲಾಗಿದೆ. ಕೆಮಿಕಲ್ ಲೇಪನದ ಕುರಿತು ಗ್ರಾಹಕ ಹಾಗೂ ಮೀನು ಚಿಲ್ಲರೆ ಮಾರಾಟಗಾರನ ನಡುವೆ ನಡೆದ ವಾಗ್ವಾದ ಈ ವಿಡಿಯೋದಲ್ಲಿದೆ. ಅದರ ಪ್ರಕಾರ “ಈ ಕೆಮಿಕಲ್ ನಾವು ಹಾಕುವುದಿಲ್ಲ ಬೇರೆ ಯಾರೋ ಹಾಕುತ್ತಾರೆ ” ಎಂದು ಮೀನು ಮಾರಾಟಗಾರ ಸಮಜಾಯಿಸಿ ನೀಡುತ್ತಾನೆ. ಆದರೆ ಕೆಮಿಕಲ್ ಹಾಕುವವರು ಯಾರು ಎಂಬುದನ್ನು ಮೀನು ಮಾರಾಟಗಾರ ಹೇಳಲು ಹಿಂದೇಟು ಹಾಕುವ ಪ್ರಸಂಗ ಈ ವಿಡಿಯೋದಲ್ಲಿದೆ.

ಮೀನಿಗೆ ಅಮೋನಿಯ ಹಾಕುವುದರಿಂದ ಅದು ಬೇಗ ಹಾಳಾಗುವುದಿಲ್ಲ. ಮೀನು ಸ್ವಲ್ಪ ಹಳದಿ ಬಣ್ಣ ಅಥವಾ ಬಿಳಿಚಿದಂತೆ ಕಾಣುವುದು. ತಾಜಾ ಮೀನಿನಲ್ಲಿ ಕಣ್ಣು ಹಾಗೂ ಕಿವಿರಿನ ಬಳಿ ಸ್ವಲ್ಪ ರಕ್ತ ಇರುತ್ತದೆ. ಅಮೋನಿಯಾ ಹಾಕಿದ ಮೀನಿನಲ್ಲಿ ಇದು ಕಾಣುವುದಿಲ್ಲ ಹಾಗೂ ಈ ಭಾಗಗಳು ಬಿಳಿಯಾಗಿರುತ್ತವೆ. ಅದರಲ್ಲೂ ಮುಖ್ಯವಾಗಿ ಅಮೋನಿಯ ಹಾಕಿದ ಮೀನಿಗೆ ನೊಣ ಕುಳಿತುಕೊಳ್ಳುವುದಿಲ್ಲ. ಆದರೆ ಇಂತಹ ಅಮೋನಿಯಾ ಬೆರೆಸಿ ಮಾರುವ ಮೀನಿನ ಸೇವನೆಯಿಂದ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ. ಈ ಕುರಿತು ಆರೋಗ್ಯ ಇಲಾಖೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೂಡ ಕೇಳಿಬರುತ್ತಿದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search