• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕರಾವಳಿಯಲ್ಲಿ ಬಹಳ ದಿನಗಳವರೆಗೆ ಮೀನುಗಳು ಕೆಡದಂತೆ ಕೆಮಿಕಲ್ ಲೇಪಿಸಿ ಮಾರುಕಟ್ಟೆಗಳಲ್ಲಿ ಮಾರಾಟ ಆರೋಪ!

Tulunadu News Posted On June 25, 2018
0


0
Shares
  • Share On Facebook
  • Tweet It

ಮಂಗಳೂರು : ಹಣ್ಣುಗಳು ಕೆಡದಂತೆ, ತರಕಾರಿಗಳು ತಾಜಾ ಕಾಣುವಂತೆ ಮಾಡಲು ಕೆಮಿಕಲ್ ಲೇಪನ ಮಾಡಿ ಮಾರಾಟ ಮಾಡುವ ಘಟನೆಗಳು ಈಗಾಗಲೇ ಬಯಲಾಗಿವೆ. ಈಗ ಮೀನಿನ ಸರದಿ. ಹೌದು ಇಂತಹದೊಂದು ಆರೋಪ ಕೆಲವು ದಿನಗಳಿಂದ ಕೇಳಿಬರುತ್ತಿದೆ. ಬಹಳ ದಿನಗಳವರೆಗೆ ಮೀನುಗಳು ಕೆಡದಂತೆ ಕೆಮಿಕಲ್ ಲೇಪಿಸಿ ತಂದು ಮಾರುಕಟ್ಟೆಗಳಲ್ಲಿ ಮಾರಟ ಮಾಡಲಾಗುತ್ತಿದೆ ಎಂಬ ಆರೋಪ ಕರಾವಳಿಯಲ್ಲಿ ಕೇಳಿಬರುತ್ತಿದೆ. ಇದು ಮೀನು ಪ್ರಿಯರಲ್ಲಿ ಆತಂಕ ಮೂಡಿಸಿದೆ. ಈ ಕುರಿತ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಿಂಗಳುಗಟ್ಟಲೆ ಹಾಳಾಗದಂತೆ ಹಣ್ಣುಗಳಿಗೆ ಕೆಮಿಕಲ್ ಹಾಕಿ ಮಾರಾಟ ಮಾಡುವಂತೆ ಈಗ ಮೀನಿಗೂ ವಿಷಕಾರಿ ಅಮೋನಿಯಾ ಬೆರೆಸಿ ವಾರಗಟ್ಟಲೆ ಮಾರಾಟವಾಗುವಂತೆ ನೋಡಿಕೊಳ್ಳುವ ದಂಧೆ ಕರಾವಳಿಯ ಎಲ್ಲೆಡೆ ಆರಂಭವಾಗಿದೆ ಎಂದು ಆರೋಪಿಸಲಾಗಿದೆ. ವಾರಗಟ್ಟಲೆ ಐಸ್ ನಲ್ಲಿಟ್ಟ ಮೀನುಗಳನ್ನು ಗಿರಾಕಿಗಳಿಗೆ ಫ್ರೆಶ್ ಎಂದು ತೋರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ವಿಡಿಯೋದಲ್ಲಿ ತೋರಿಸಲಾಗಿದೆ. ಕೆಮಿಕಲ್ ಲೇಪನದ ಕುರಿತು ಗ್ರಾಹಕ ಹಾಗೂ ಮೀನು ಚಿಲ್ಲರೆ ಮಾರಾಟಗಾರನ ನಡುವೆ ನಡೆದ ವಾಗ್ವಾದ ಈ ವಿಡಿಯೋದಲ್ಲಿದೆ. ಅದರ ಪ್ರಕಾರ “ಈ ಕೆಮಿಕಲ್ ನಾವು ಹಾಕುವುದಿಲ್ಲ ಬೇರೆ ಯಾರೋ ಹಾಕುತ್ತಾರೆ ” ಎಂದು ಮೀನು ಮಾರಾಟಗಾರ ಸಮಜಾಯಿಸಿ ನೀಡುತ್ತಾನೆ. ಆದರೆ ಕೆಮಿಕಲ್ ಹಾಕುವವರು ಯಾರು ಎಂಬುದನ್ನು ಮೀನು ಮಾರಾಟಗಾರ ಹೇಳಲು ಹಿಂದೇಟು ಹಾಕುವ ಪ್ರಸಂಗ ಈ ವಿಡಿಯೋದಲ್ಲಿದೆ.

ಮೀನಿಗೆ ಅಮೋನಿಯ ಹಾಕುವುದರಿಂದ ಅದು ಬೇಗ ಹಾಳಾಗುವುದಿಲ್ಲ. ಮೀನು ಸ್ವಲ್ಪ ಹಳದಿ ಬಣ್ಣ ಅಥವಾ ಬಿಳಿಚಿದಂತೆ ಕಾಣುವುದು. ತಾಜಾ ಮೀನಿನಲ್ಲಿ ಕಣ್ಣು ಹಾಗೂ ಕಿವಿರಿನ ಬಳಿ ಸ್ವಲ್ಪ ರಕ್ತ ಇರುತ್ತದೆ. ಅಮೋನಿಯಾ ಹಾಕಿದ ಮೀನಿನಲ್ಲಿ ಇದು ಕಾಣುವುದಿಲ್ಲ ಹಾಗೂ ಈ ಭಾಗಗಳು ಬಿಳಿಯಾಗಿರುತ್ತವೆ. ಅದರಲ್ಲೂ ಮುಖ್ಯವಾಗಿ ಅಮೋನಿಯ ಹಾಕಿದ ಮೀನಿಗೆ ನೊಣ ಕುಳಿತುಕೊಳ್ಳುವುದಿಲ್ಲ. ಆದರೆ ಇಂತಹ ಅಮೋನಿಯಾ ಬೆರೆಸಿ ಮಾರುವ ಮೀನಿನ ಸೇವನೆಯಿಂದ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ. ಈ ಕುರಿತು ಆರೋಗ್ಯ ಇಲಾಖೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೂಡ ಕೇಳಿಬರುತ್ತಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search