ಮಂಗಳೂರು, ಪೊಲೀಸ್ ಅಧಿಕಾರಿಯ ಪುತ್ರ ಆತ್ಮಹತ್ಯೆ
Posted On June 25, 2018

ಮಂಗಳೂರು: ಪೊಲೀಸ್ ಅಧಿಕಾರಿಯೊಬ್ಬರ ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬಲ್ಮಠದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಅಂಕಿತ್ ರಾಣೆ (28) ಎಂದು ಗುರುತಿಸಲಾಗಿದೆ. ಈತ ದ.ಕ ಜಿಲ್ಲಾ ಪೊಲೀಸ್ ನಿಯಂತ್ರಣ ಕೊಠಡಿಯ ಎಸೈ ಪದ್ಮಯ್ಯ ರಾಣೆ ಅವರ ಪುತ್ರ. ಈತ ಬಲ್ಮಠದಲ್ಲಿ ಸಿ ಎ ಆಫೀಸ್ ನಲ್ಲಿ ಕೆಲಸ ಮಾಡುತ್ತಿದ್ದು, ಇಂದು ಕಚೇರಿಯ ಸ್ಟೋರ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ನಗರದ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -
Leave A Reply