• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಧರೆಂದರೆ ನರೇಂದ್ರ ಮೋದಿ ಅವರಿಗೆ ಹೇಗೆ ಮನ ಮಿಡಿಯುತ್ತದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿದೆ ನೋಡಿ!

TNN Correspondent Posted On June 26, 2018
0


0
Shares
  • Share On Facebook
  • Tweet It

ನವದೆಹಲಿ: ನರೇಂದ್ರ ಮೊದಿ ಅವರು ಪ್ರಧಾನಿಯಾದ ಬಳಿಕ ದೇಶದ ಯೋಧರು ಹೆಚ್ಚಿನ ಸ್ವಾತಂತ್ರ್ಯ, ಭದ್ರತೆ ಸೇರಿ ಹಲವು ಸೌಲಭ್ಯ ಹೊಂದಿದ್ದಾರೆ. ಅದರಲ್ಲೂ ನರೇಂದ್ರ ಮೋದಿ ಅವರಂತೂ ಯೋಧರೆಂದರೆ ಸಾಕು ವಿಶೇಷ ಕಾಳಜಿ ಪ್ರದರ್ಶಿಸುತ್ತಾರೆ. ಅದೇ ಕಾರಣಕ್ಕೆ ನರೇಂದ್ರ ಮೋದಿ ಅವರು ಪ್ರತಿ ದೀಪಾವಳಿಯನ್ನು ಗಡಿಗೆ ತೆರಳಿ ಯೋಧರೊಂದಿಗೆ ಆಚರಿಸುತ್ತಾರೆ.

ಇಂತಹ ನರೇಂದ್ರ ಮೋದಿ ಅವರು ಈಗ ತಾವು ಯೋಧರ ಬಗ್ಗೆ ಎಂಥಹ ಕಾಳಜಿ ಎಂಬುದನ್ನು ಸ್ವಾಭಾವಿಕವಾಗಿ ವ್ಯಕ್ತಪಡಿಸಿದ ರೀತಿ ಎಲ್ಲರ ಮನಸ್ಸನ್ನೂ ಸೆಳೆಯುವಂತಿದೆ. ಆ ಮೂಲಕ ಮೋದಿ ಅವರು ಸೈನಿಕರ ಬಗ್ಗೆ ಎಂತಹ ಕಾಳಜಿ ಹೊಂದಿದ್ದಾರೆ ಎಂಬುದು ಸಾಬೀತಾಗಿದೆ.

ಹೌದು, ಸೋಮವಾರ ಹೊಸದಿಲ್ಲಿಗೆ ಸೆಶೆಲ್ಲೆಸ್ ಅಧ್ಯಕ್ಷ ಡ್ಯಾನಿ ಫೌರ್ ಆಗಮಿಸಿದ್ದು, ರಾಷ್ಟ್ರಪತಿ ಭವನದಲ್ಲಿ ಅವರಿಗೊಂದು ಗೌರವ ಸಲ್ಲಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸಹ ಉಪಸ್ಥಿತಿಯಿದ್ದರು. ಹೀಗೆ ದ್ವೀಪರಾಷ್ಟ್ರ ಅಧ್ಯಕ್ಷರಿಗೆ ಗೌರವ ಸಲ್ಲಿಸುವ ವೇಳೆ ವಾಯುಪಡೆಯ ಸಿಬ್ಬಂದಿಯೊಬ್ಬರು ಬಿಸಿಲಿನ ತಾಪ ತಾಳಲಾರದೆ ಕುಸಿದು ಬಿದ್ದಿದ್ದಾರೆ. ಬಳಿಕ ವಾಯುಪಡೆಯ ಸಿಬ್ಬಂದಿಯೇ ಅವರನ್ನು ಮೇಲೆ ಎಬ್ಬಿಸಿ, ವಿರಾಮ ನೀಡಿದ್ದಾರೆ.

ಹೀಗೆ ಸಮಾರಂಭ ಮುಗಿದ ಬಳಿಕ ಹಲವು ಗಣ್ಯರು ಕಾರ್ಯಕ್ರಮ ನಡೆದ ಸ್ಥಳದಿಂದ ನಿರ್ಗಮಿಸಿದ್ದಾರೆ. ಆದರೆ ನರೇಂದ್ರ ಮೋದಿ ಅವರು ಮಾತ್ರ ವಾಯುಪಡೆ ಸಿಬ್ಬಂದಿ ಬಳಿ ತೆರಳಿ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ. ಅಲ್ಲದೆ ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಬೇಕು ಎಂದು ಸಲಹೆ ಸಹ ನೀಡಿದ್ದಾರೆ.

ಹೇಳಿ ಒಂದು ದೇಶದ ಪ್ರಧಾನಿಯಾದವರು, ಸೇನಾ ಸಿಬ್ಬಂದಿಯೊಬ್ಬರು ಕುಸಿದು ಬಿದ್ದಿದ್ದನ್ನು ಮರೆತು ಗಣ್ಯರೊಂದಿಗೆ ತೆರಳಬಹುದಿತ್ತು. ಆದರೆ ಮೋದಿ ಅವರು ಹಾಗಲ್ಲ, ಅವರಿಗೆ ಯೋಧರ ಮೇಲೆ ಇನ್ನಿಲ್ಲದ ಪ್ರೀತಿ, ಕಾಳಜಿ. ಅದು ಆಗಾಗ ಹೀಗೆ ಸ್ವಾಭಾವಿಕವಾಗಿ ವ್ಯಕ್ತವಾಗುತ್ತದೆ.

0
Shares
  • Share On Facebook
  • Tweet It




Trending Now
ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
Tulunadu News July 12, 2025
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
  • Popular Posts

    • 1
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 2
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 3
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 4
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 5
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search