• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಧರೆಂದರೆ ನರೇಂದ್ರ ಮೋದಿ ಅವರಿಗೆ ಹೇಗೆ ಮನ ಮಿಡಿಯುತ್ತದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿದೆ ನೋಡಿ!

TNN Correspondent Posted On June 26, 2018
0


0
Shares
  • Share On Facebook
  • Tweet It

ನವದೆಹಲಿ: ನರೇಂದ್ರ ಮೊದಿ ಅವರು ಪ್ರಧಾನಿಯಾದ ಬಳಿಕ ದೇಶದ ಯೋಧರು ಹೆಚ್ಚಿನ ಸ್ವಾತಂತ್ರ್ಯ, ಭದ್ರತೆ ಸೇರಿ ಹಲವು ಸೌಲಭ್ಯ ಹೊಂದಿದ್ದಾರೆ. ಅದರಲ್ಲೂ ನರೇಂದ್ರ ಮೋದಿ ಅವರಂತೂ ಯೋಧರೆಂದರೆ ಸಾಕು ವಿಶೇಷ ಕಾಳಜಿ ಪ್ರದರ್ಶಿಸುತ್ತಾರೆ. ಅದೇ ಕಾರಣಕ್ಕೆ ನರೇಂದ್ರ ಮೋದಿ ಅವರು ಪ್ರತಿ ದೀಪಾವಳಿಯನ್ನು ಗಡಿಗೆ ತೆರಳಿ ಯೋಧರೊಂದಿಗೆ ಆಚರಿಸುತ್ತಾರೆ.

ಇಂತಹ ನರೇಂದ್ರ ಮೋದಿ ಅವರು ಈಗ ತಾವು ಯೋಧರ ಬಗ್ಗೆ ಎಂಥಹ ಕಾಳಜಿ ಎಂಬುದನ್ನು ಸ್ವಾಭಾವಿಕವಾಗಿ ವ್ಯಕ್ತಪಡಿಸಿದ ರೀತಿ ಎಲ್ಲರ ಮನಸ್ಸನ್ನೂ ಸೆಳೆಯುವಂತಿದೆ. ಆ ಮೂಲಕ ಮೋದಿ ಅವರು ಸೈನಿಕರ ಬಗ್ಗೆ ಎಂತಹ ಕಾಳಜಿ ಹೊಂದಿದ್ದಾರೆ ಎಂಬುದು ಸಾಬೀತಾಗಿದೆ.

ಹೌದು, ಸೋಮವಾರ ಹೊಸದಿಲ್ಲಿಗೆ ಸೆಶೆಲ್ಲೆಸ್ ಅಧ್ಯಕ್ಷ ಡ್ಯಾನಿ ಫೌರ್ ಆಗಮಿಸಿದ್ದು, ರಾಷ್ಟ್ರಪತಿ ಭವನದಲ್ಲಿ ಅವರಿಗೊಂದು ಗೌರವ ಸಲ್ಲಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸಹ ಉಪಸ್ಥಿತಿಯಿದ್ದರು. ಹೀಗೆ ದ್ವೀಪರಾಷ್ಟ್ರ ಅಧ್ಯಕ್ಷರಿಗೆ ಗೌರವ ಸಲ್ಲಿಸುವ ವೇಳೆ ವಾಯುಪಡೆಯ ಸಿಬ್ಬಂದಿಯೊಬ್ಬರು ಬಿಸಿಲಿನ ತಾಪ ತಾಳಲಾರದೆ ಕುಸಿದು ಬಿದ್ದಿದ್ದಾರೆ. ಬಳಿಕ ವಾಯುಪಡೆಯ ಸಿಬ್ಬಂದಿಯೇ ಅವರನ್ನು ಮೇಲೆ ಎಬ್ಬಿಸಿ, ವಿರಾಮ ನೀಡಿದ್ದಾರೆ.

ಹೀಗೆ ಸಮಾರಂಭ ಮುಗಿದ ಬಳಿಕ ಹಲವು ಗಣ್ಯರು ಕಾರ್ಯಕ್ರಮ ನಡೆದ ಸ್ಥಳದಿಂದ ನಿರ್ಗಮಿಸಿದ್ದಾರೆ. ಆದರೆ ನರೇಂದ್ರ ಮೋದಿ ಅವರು ಮಾತ್ರ ವಾಯುಪಡೆ ಸಿಬ್ಬಂದಿ ಬಳಿ ತೆರಳಿ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ. ಅಲ್ಲದೆ ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಬೇಕು ಎಂದು ಸಲಹೆ ಸಹ ನೀಡಿದ್ದಾರೆ.

ಹೇಳಿ ಒಂದು ದೇಶದ ಪ್ರಧಾನಿಯಾದವರು, ಸೇನಾ ಸಿಬ್ಬಂದಿಯೊಬ್ಬರು ಕುಸಿದು ಬಿದ್ದಿದ್ದನ್ನು ಮರೆತು ಗಣ್ಯರೊಂದಿಗೆ ತೆರಳಬಹುದಿತ್ತು. ಆದರೆ ಮೋದಿ ಅವರು ಹಾಗಲ್ಲ, ಅವರಿಗೆ ಯೋಧರ ಮೇಲೆ ಇನ್ನಿಲ್ಲದ ಪ್ರೀತಿ, ಕಾಳಜಿ. ಅದು ಆಗಾಗ ಹೀಗೆ ಸ್ವಾಭಾವಿಕವಾಗಿ ವ್ಯಕ್ತವಾಗುತ್ತದೆ.

0
Shares
  • Share On Facebook
  • Tweet It




Trending Now
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
  • Popular Posts

    • 1
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 2
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search