• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಯಲಾಯ್ತು ಕ್ರೈಸ್ತ ಪಾದ್ರಿಗಳ ಲೈಂಗಿಕ ಹಗರಣ, ಕೇರಳ ಚರ್ಚ್ ನಿಂದ ಐವರ ಅಮಾನತು!

TNN Correspondent Posted On June 26, 2018
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳ ಎಂದ ತಕ್ಷಣ ನೆನಪಾಗುವುದು ಶಿಕ್ಷಣದ ಪ್ರಮಾಣ, ನಿಸರ್ಗ ಇತ್ಯಾದಿ. ಆದರೆ ಈಗ ಕೇರಳ ಎಂದ ತಕ್ಷಣ ನೆನಪಾಗುತ್ತಿರುವುದು ಹಿಂದೂ ಧರ್ಮೀಯರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವುದು ಹಾಗೂ ಕಮ್ಯೂನಿಸ್ಟರ ಹಿಂಸೆ! ಇಂತಹ ಮೂಲಭೂತವಾದಿಗಳು ತುಂಬಿರುವ ಕೇರಳದಲ್ಲಿ ಮತ್ತೊಂದು ಉದ್ಧಟತನ ತಲೆಯೆತ್ತುತ್ತಿದೆ.

ಹೌದು, ಕೇರಳದಲ್ಲಿ ಕ್ರಿಶ್ಚಿಯನ್ ಮಿಷನರಿಗಳ ಒಂದೊಂದೇ ಮುಖವಾಡಗಳು ಬಯಲಾಗುತ್ತಿವೆ. ಅದರಲ್ಲೂ ಚರ್ಚ್ ಗಳಲ್ಲಿ ಅವರು ಮಾಡುತ್ತಿರುವ ಲೈಂಗಿಕ ಹಗರಣಗಳು, ಕಿರುಕುಳಗಳು ಕ್ರೈಸ್ತ ಪಾದ್ರಿಗಳ ಮೇಲೆ ನಂಬಿಕೆಯೇ ಇಲ್ಲದಂತಾಗಿದೆ. ಕ್ರಿಸ್ತನ ಸಂದೇಶ ಮರೆತಿರುವ ಇವರು ಅನಾಚಾರಕ್ಕೆ ಮುಂದಾಗಿದ್ದಾರೆ ಎಂಬುದು ಈ ಪ್ರಕರಣದಿಂದ ಸಾಬೀತಾಗಿದೆ.

ಹೌದು, ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ಮಲಂಕಾರ ಆರ್ಥಾಡಾಕ್ಸ್ ಚರ್ಚ್ ನ ಐವರು ಪಾದ್ರಿಗಳನ್ನು ಅಮಾನತು ಮಾಡಿ ಚರ್ಚ್ ಆದೇಶ ಹೊರಡಿಸಿದೆ. ತಿರುವಳ್ಳದ ಮಹಿಳೆಗೆ ಐವರು ಪಾದ್ರಿಗಳು ಸೇರಿ ಲೈಂಗಿಕ ಕಿರುಕುಳ ನೀಡಿದ್ದು, ಇದರಲ್ಲಿ ತನ್ನದೇ ತಪ್ಪಿದೆ ಎಂದು ಒಪ್ಪಿಕೊಳ್ಳಬೇಕು ಎಂಬುದಾಗಿ ಕಿರುಕುಳ ನೀಡಿದ್ದರು ಎಂದು ತಿಳಿದುಬಂದಿದೆ.

ಈ ಕುರಿತು ಮಹಿಳೆಯ ಗಂಡ ಚರ್ಚ್ ಗೆ ದೂರು ನೀಡಿದ್ದು, ಪ್ರಾಥಮಿಕ ತನಿಖೆಯಿಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚರ್ಚ್ ವಕ್ತಾರ ಪಿ.ಸಿ.ಇಲಿಯಾಸ್ ಅವರು ಐವರು ಪಾದ್ರಿಗಳನ್ನು ಅಮಾನತು ಮಾಡಿದ್ದಾರೆ.

ಲೈಂಗಿಕ ಕಿರುಕುಳ ನೀಡಿರುವ ಕುರಿತು ಮಹಿಳೆಯ ಗಂಡಿನಿಂದ ದೂರು ಬಂದಿತ್ತು. ಇದರ ಅನ್ವಯ ಆರೋಪಿಗಳ ಕುರಿತು ಪ್ರಾಥಮಿಕ ತನಿಖೆ ಕೈಗೊಂಡಿದ್ದು, ಇದಕ್ಕೂ ಮೊದಲು ಐವರನ್ನೂ ಅಮಾನತು ಮಾಡಲಾಗಿದೆ. ಕೂಲಂಕಷ ತನಿಖೆಯಿಂದ ಸತ್ಯ ಬಹಿರಂಗವಾಗಲಿದ್ದು, ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಇಲಿಯಾಸ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search