• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಯಲಾಯ್ತು ಕ್ರೈಸ್ತ ಪಾದ್ರಿಗಳ ಲೈಂಗಿಕ ಹಗರಣ, ಕೇರಳ ಚರ್ಚ್ ನಿಂದ ಐವರ ಅಮಾನತು!

TNN Correspondent Posted On June 26, 2018
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳ ಎಂದ ತಕ್ಷಣ ನೆನಪಾಗುವುದು ಶಿಕ್ಷಣದ ಪ್ರಮಾಣ, ನಿಸರ್ಗ ಇತ್ಯಾದಿ. ಆದರೆ ಈಗ ಕೇರಳ ಎಂದ ತಕ್ಷಣ ನೆನಪಾಗುತ್ತಿರುವುದು ಹಿಂದೂ ಧರ್ಮೀಯರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವುದು ಹಾಗೂ ಕಮ್ಯೂನಿಸ್ಟರ ಹಿಂಸೆ! ಇಂತಹ ಮೂಲಭೂತವಾದಿಗಳು ತುಂಬಿರುವ ಕೇರಳದಲ್ಲಿ ಮತ್ತೊಂದು ಉದ್ಧಟತನ ತಲೆಯೆತ್ತುತ್ತಿದೆ.

ಹೌದು, ಕೇರಳದಲ್ಲಿ ಕ್ರಿಶ್ಚಿಯನ್ ಮಿಷನರಿಗಳ ಒಂದೊಂದೇ ಮುಖವಾಡಗಳು ಬಯಲಾಗುತ್ತಿವೆ. ಅದರಲ್ಲೂ ಚರ್ಚ್ ಗಳಲ್ಲಿ ಅವರು ಮಾಡುತ್ತಿರುವ ಲೈಂಗಿಕ ಹಗರಣಗಳು, ಕಿರುಕುಳಗಳು ಕ್ರೈಸ್ತ ಪಾದ್ರಿಗಳ ಮೇಲೆ ನಂಬಿಕೆಯೇ ಇಲ್ಲದಂತಾಗಿದೆ. ಕ್ರಿಸ್ತನ ಸಂದೇಶ ಮರೆತಿರುವ ಇವರು ಅನಾಚಾರಕ್ಕೆ ಮುಂದಾಗಿದ್ದಾರೆ ಎಂಬುದು ಈ ಪ್ರಕರಣದಿಂದ ಸಾಬೀತಾಗಿದೆ.

ಹೌದು, ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ಮಲಂಕಾರ ಆರ್ಥಾಡಾಕ್ಸ್ ಚರ್ಚ್ ನ ಐವರು ಪಾದ್ರಿಗಳನ್ನು ಅಮಾನತು ಮಾಡಿ ಚರ್ಚ್ ಆದೇಶ ಹೊರಡಿಸಿದೆ. ತಿರುವಳ್ಳದ ಮಹಿಳೆಗೆ ಐವರು ಪಾದ್ರಿಗಳು ಸೇರಿ ಲೈಂಗಿಕ ಕಿರುಕುಳ ನೀಡಿದ್ದು, ಇದರಲ್ಲಿ ತನ್ನದೇ ತಪ್ಪಿದೆ ಎಂದು ಒಪ್ಪಿಕೊಳ್ಳಬೇಕು ಎಂಬುದಾಗಿ ಕಿರುಕುಳ ನೀಡಿದ್ದರು ಎಂದು ತಿಳಿದುಬಂದಿದೆ.

ಈ ಕುರಿತು ಮಹಿಳೆಯ ಗಂಡ ಚರ್ಚ್ ಗೆ ದೂರು ನೀಡಿದ್ದು, ಪ್ರಾಥಮಿಕ ತನಿಖೆಯಿಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚರ್ಚ್ ವಕ್ತಾರ ಪಿ.ಸಿ.ಇಲಿಯಾಸ್ ಅವರು ಐವರು ಪಾದ್ರಿಗಳನ್ನು ಅಮಾನತು ಮಾಡಿದ್ದಾರೆ.

ಲೈಂಗಿಕ ಕಿರುಕುಳ ನೀಡಿರುವ ಕುರಿತು ಮಹಿಳೆಯ ಗಂಡಿನಿಂದ ದೂರು ಬಂದಿತ್ತು. ಇದರ ಅನ್ವಯ ಆರೋಪಿಗಳ ಕುರಿತು ಪ್ರಾಥಮಿಕ ತನಿಖೆ ಕೈಗೊಂಡಿದ್ದು, ಇದಕ್ಕೂ ಮೊದಲು ಐವರನ್ನೂ ಅಮಾನತು ಮಾಡಲಾಗಿದೆ. ಕೂಲಂಕಷ ತನಿಖೆಯಿಂದ ಸತ್ಯ ಬಹಿರಂಗವಾಗಲಿದ್ದು, ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಇಲಿಯಾಸ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search