• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಅಕ್ರಮ ಮರಳುಗಾರಿಕೆಗೆ ಮೂಲರಪಟ್ನದ ಸೇತುವೆ ಕುಸಿತ ಆರೋಪ : ಮಾಜಿ ಸಚಿವ ರಮಾನಾಥ ರೈ ಸಹಿತ ಗಣಿ ಅಧಿಕಾರಿಗಳ ವಿರುದ್ಧ ಸಿಡಿದೆದ್ದ ಪರಿಸರ ಪ್ರೇಮಿಗಳು!

Tulunadu News Posted On June 26, 2018
0


0
Shares
  • Share On Facebook
  • Tweet It

ಮಂಗಳೂರು: ಕರಾವಳಿ ಜಿಲ್ಲೆಯಾದ್ಯಂತ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಬಲಿಯಾಗಿದ್ದ ಮೂಲರಪಟ್ನದ ಸೇತುವೆ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆಯಲ್ಲಿ ಕುಸಿದು ಬಿದ್ದಿದೆ. ಈ ಅಕ್ರಮ ಮರಳುಗಾರಿಕೆಯ ಕುರಿತು ಅನೇಕ ಸಮಯದಿಂದ ಹೋರಾಟ ಮಾಡಿಕೊಂಡು ಬಂದಿರುವ ಪರಿಸರ ಪ್ರೇಮಿಗಳು ಇದೀಗ ಮಾಜಿ ಅರಣ್ಯ ಸಚಿವ ರಮಾನಾಥ ರೈ ಹಾಗೂ ಗಣಿ ಅಧಿಕಾರಿಗಳ ವಿರುದ್ಧ ಸಿಡಿದೆದ್ದಿದ್ದಾರೆ. ಮಾತ್ರವಲ್ಲದೇ ಈ ಸೇತುವೆ ಕುಸಿತಕ್ಕೆ ಅಧಿಕಾರಿಗಳು ಮತ್ತು ಮಾಜಿ ಸಚಿವರೇ ನೇರ ಕಾರಣ ಎಂದು ಆರೋಪಿಸಿದ್ದಾರೆ. ಪರಿಸರ ಪ್ರೇಮಿಗಳ ಆರೋಪ ಮಾಡಿರುವ ವಿಡಿಯೋ ವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಘಟನೆಯ ವಿವರ: ಬಂಟ್ವಾಳ-ಕುಪ್ಪೆಪದವು ಸಂಪರ್ಕಿಸುವ ರಾಜ್ಯ ಹೆದ್ದಾರಿಯ ಮೂಲರಪಟ್ನ ಎಂಬಲ್ಲಿ ಫಲ್ಗುಣಿ ನದಿಗೆ ಕಟ್ಟಲಾಗಿದ್ದ ಸೇತುವೆ ಏಕಾಏಕಿ ಕುಸಿದು ಬಿದ್ದಿದೆ.ಸುಮಾರು 35 ವರ್ಷಗಳ ಹಿಂದೆ ನಿರ್ಮಿಸಲಾಗಿರುವ ಈ ಸೇತುವೆ ಕುಸಿಯುವ ಭೀತಿಯನ್ನು ಸ್ಥಳಿಯ ನಿವಾಸಿಗಳು ವ್ಯಕ್ತಪಡಿಸಿದ್ದರು . ಈ ವಿಚಾರವನ್ನು ಸ್ಥಳೀಯರು ಜಿಲ್ಲಾಡಳಿತದ ಗಮನಕ್ಕೂ ತಂದಿದ್ದರು. ಫಲ್ಗುಣಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯಿಂದ ಸೇತುವೆ ಶಿಥಿಲಗೊಂಡಿದೆ ಎಂದು ಆರೋಪಿಸಲಾಗಿತ್ತು.

ಫಲ್ಲುಣಿ ನದಿಯಲ್ಲಿ ಇಂದು ನೀರಿನ ಹರಿವು ಹೆಚ್ಚಾಗುತ್ತಿದ್ದಂತೆ ಇಂದು ಏಕಾಏಕಿ ಸೇತುವೆ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ಯಾವುದೇ ವಾಹನಗಳ ಸೇತುವೆಯಲ್ಲಿ ಸಂಚರಿಸದೇ ಇದ್ದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಈ ಸೇತುವೆ ಕೆಳ ಭಾಗದಲ್ಲಿ ಅಕ್ರಮವಾಗಿ ಮರಳುಗಾರಿಕೆಯೂ ನಡೆಯುತ್ತಿದ್ದು, ಹಲವು ಬಾರಿ ಈ ಅಕ್ರಮಕ್ಕೆ ಕಡಿವಾಣ ಹಾಕಲಾಗಿದ್ದರೂ ರಾಜಕೀಯ ಪ್ರಭಾವ ಬಳಸಿ ಅಕ್ರಮ ಮರಲುಗಾರಿಕೆಯನ್ನು‌ ನಡೆಸಲಾಗುತ್ತಿತ್ತು ಎಂದು ದೂರಲಾಗಿದೆ . ಸೇತುವೆ ಕುಸಿದು ಬೀಳಲು ಇದು ಪ್ರಮುಖ ಕಾರಣ ಎನ್ನಲಾಗುತ್ತಿದೆ.
ಸೇತುವೆ ಕುಸಿದಿರುವ ಸ್ಥಳಕ್ಕೆ ಜಿಲ್ಲಾಡಳಿತ ಅಧಿಕಾರಿಗಳು ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ. ಸೇತುವೆ ಯ ಎರಡೂ ತುದಿಗಳಲ್ಲಿ ಪೊಲೀಸ್ ಭಧ್ರತೆ ನಿಯೋಜಿಸಲಾಗಿದ್ದು, ಸಾರ್ವಜನಿಕರು ಮುರಿದ ಸೇತುವೆ ಸನಿಹ ಬರದಂತೆ ತಡೆಹಿಡಿಯಲಾಗುತ್ತಿದೆ

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search