• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಉಡುಪಿಯಲ್ಲಿ ಮುಂದುವರೆದ ಮಳೆ ಆರ್ಭಟ: ತೀವ್ರಗೊಂಡ ಕಡಲ್ಕೊರೆತ

Tulunadu News Posted On June 26, 2018
0


0
Shares
  • Share On Facebook
  • Tweet It

ಉಡುಪಿ: ಉಡುಪಿಯಾದ್ಯಂತ ಇಂದೂ ಕೂಡ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದೆರಡು ದಿನಗಳಿಂದ ಉಡುಪಿಯ ಮೂರೂ ತಾಲೂಕುಗಳಲ್ಲಿ ಒಂದೇ ಸಮನೆ ಮಳೆಯಾಗುತ್ತಿದೆ.

ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ,ಜಲಾಶಯಗಳು ಭರ್ತಿಯಾಗಿವೆ. ಮಳೆ ತೀವ್ರಗೊಂಡಿರುವುದರಿಂದ ಉಡುಪಿಯ ಕೆಲವು ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನಿಂತಿದ್ದು ಕೃತಕ ನೆರೆ ಸೃಷ್ಟಿಯಾಗಿದೆ. ಮಳೆಯಿಂದಾಗಿ ಪಾದಚಾರಿಗಳು, ವಾಹನ ಸವಾರರು ಮತ್ತು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಇದೇ ವೇಳೆ ಜಿಲ್ಲೆಯ ಕೆಲವು ಕಡೆಗಳಲ್ಲಿ ಕಡಲ್ಕೊರೆತವೂ ತೀವ್ರಗೊಂಡಿದ್ದು, ಅಲ್ಲಿ ತಡೆಗೋಡೆ ಕಾರ್ಯ ಬಿರುಸುಗೊಂಡಿದೆ. ಈ ಋತುವಿನ ಯಾಂತ್ರೀಕೃತ ಮತ್ತು ಆಳಸಮುದ್ರ ಮೀನುಗಾರಿಕೆ ಕೊನೆಗೊಂಡಿದ್ದು, ಮೀನುಗಾರರು ನಾಡದೋಣಿ ಮೀನುಗಾರಿಕೆ ಪ್ರಾರಂಭಿಸಿದ್ದಾರೆ.

ಕಳೆದೊಂದು ವಾರದಿಂದ ಕಡಲು ಪ್ರಕ್ಷುಬ್ದಗೊಂಡಿದ್ದು, ಕಡಲ್ಕೊರೆತ ತೀವ್ರಗೊಂಡಿದೆ. ಮಲ್ಪೆಯಲ್ಲಿ ಕಡಲು ಪ್ರಕ್ಷುಬ್ಧಗೊಂಡಿದ್ದು, ಕಡಲತೀರದ ಜನರು ಆತಂಕಗೊಂಡಿದ್ದಾರೆ. ಇನ್ನು ತೂಫಾನಿನ ತೀವ್ರತೆ ಹೆಚ್ಚಿದ್ದು ಮೀನುಗಾರರು ಕಡಲಿಗೆ ಇಳಿಯಲು ಹಿಂಜರಿಯುವಂತಾಗಿದೆ. ಕಳೆದ ನಾಲ್ಕಾರು ದಿನಗಳ ಮಳೆಯ ಆರ್ಭಟಕ್ಕೆ ಕಡಲು ಒಂದೇ ಸಮನೆ ಭೋರ್ಗರೆಯತ್ತಿದೆ. ಇದರ ಪರಿಣಾಮವಗಿ ಕೆಲವೆಡೆಗಳಲ್ಲಿ ಕಡಲ್ಕೊರೆತವೂ ತೀವ್ರಗೊಂಡಿದೆ. ಈ ಪ್ರದೇಶಗಳಲ್ಲಿ ಮೀನುಗಾರರ ಅನೇಕ ಮನೆಗಳಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search