• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಉಡುಪಿಯಲ್ಲಿ ಮುಂದುವರೆದ ಮಳೆ ಆರ್ಭಟ: ತೀವ್ರಗೊಂಡ ಕಡಲ್ಕೊರೆತ

Tulunadu News Posted On June 26, 2018
0


0
Shares
  • Share On Facebook
  • Tweet It

ಉಡುಪಿ: ಉಡುಪಿಯಾದ್ಯಂತ ಇಂದೂ ಕೂಡ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದೆರಡು ದಿನಗಳಿಂದ ಉಡುಪಿಯ ಮೂರೂ ತಾಲೂಕುಗಳಲ್ಲಿ ಒಂದೇ ಸಮನೆ ಮಳೆಯಾಗುತ್ತಿದೆ.

ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ,ಜಲಾಶಯಗಳು ಭರ್ತಿಯಾಗಿವೆ. ಮಳೆ ತೀವ್ರಗೊಂಡಿರುವುದರಿಂದ ಉಡುಪಿಯ ಕೆಲವು ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನಿಂತಿದ್ದು ಕೃತಕ ನೆರೆ ಸೃಷ್ಟಿಯಾಗಿದೆ. ಮಳೆಯಿಂದಾಗಿ ಪಾದಚಾರಿಗಳು, ವಾಹನ ಸವಾರರು ಮತ್ತು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಇದೇ ವೇಳೆ ಜಿಲ್ಲೆಯ ಕೆಲವು ಕಡೆಗಳಲ್ಲಿ ಕಡಲ್ಕೊರೆತವೂ ತೀವ್ರಗೊಂಡಿದ್ದು, ಅಲ್ಲಿ ತಡೆಗೋಡೆ ಕಾರ್ಯ ಬಿರುಸುಗೊಂಡಿದೆ. ಈ ಋತುವಿನ ಯಾಂತ್ರೀಕೃತ ಮತ್ತು ಆಳಸಮುದ್ರ ಮೀನುಗಾರಿಕೆ ಕೊನೆಗೊಂಡಿದ್ದು, ಮೀನುಗಾರರು ನಾಡದೋಣಿ ಮೀನುಗಾರಿಕೆ ಪ್ರಾರಂಭಿಸಿದ್ದಾರೆ.

ಕಳೆದೊಂದು ವಾರದಿಂದ ಕಡಲು ಪ್ರಕ್ಷುಬ್ದಗೊಂಡಿದ್ದು, ಕಡಲ್ಕೊರೆತ ತೀವ್ರಗೊಂಡಿದೆ. ಮಲ್ಪೆಯಲ್ಲಿ ಕಡಲು ಪ್ರಕ್ಷುಬ್ಧಗೊಂಡಿದ್ದು, ಕಡಲತೀರದ ಜನರು ಆತಂಕಗೊಂಡಿದ್ದಾರೆ. ಇನ್ನು ತೂಫಾನಿನ ತೀವ್ರತೆ ಹೆಚ್ಚಿದ್ದು ಮೀನುಗಾರರು ಕಡಲಿಗೆ ಇಳಿಯಲು ಹಿಂಜರಿಯುವಂತಾಗಿದೆ. ಕಳೆದ ನಾಲ್ಕಾರು ದಿನಗಳ ಮಳೆಯ ಆರ್ಭಟಕ್ಕೆ ಕಡಲು ಒಂದೇ ಸಮನೆ ಭೋರ್ಗರೆಯತ್ತಿದೆ. ಇದರ ಪರಿಣಾಮವಗಿ ಕೆಲವೆಡೆಗಳಲ್ಲಿ ಕಡಲ್ಕೊರೆತವೂ ತೀವ್ರಗೊಂಡಿದೆ. ಈ ಪ್ರದೇಶಗಳಲ್ಲಿ ಮೀನುಗಾರರ ಅನೇಕ ಮನೆಗಳಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search