• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಉಡುಪಿಯಲ್ಲಿ ಮುಂದುವರೆದ ಮಳೆ ಆರ್ಭಟ: ತೀವ್ರಗೊಂಡ ಕಡಲ್ಕೊರೆತ

Tulunadu News Posted On June 26, 2018
0


0
Shares
  • Share On Facebook
  • Tweet It

ಉಡುಪಿ: ಉಡುಪಿಯಾದ್ಯಂತ ಇಂದೂ ಕೂಡ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದೆರಡು ದಿನಗಳಿಂದ ಉಡುಪಿಯ ಮೂರೂ ತಾಲೂಕುಗಳಲ್ಲಿ ಒಂದೇ ಸಮನೆ ಮಳೆಯಾಗುತ್ತಿದೆ.

ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ,ಜಲಾಶಯಗಳು ಭರ್ತಿಯಾಗಿವೆ. ಮಳೆ ತೀವ್ರಗೊಂಡಿರುವುದರಿಂದ ಉಡುಪಿಯ ಕೆಲವು ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನಿಂತಿದ್ದು ಕೃತಕ ನೆರೆ ಸೃಷ್ಟಿಯಾಗಿದೆ. ಮಳೆಯಿಂದಾಗಿ ಪಾದಚಾರಿಗಳು, ವಾಹನ ಸವಾರರು ಮತ್ತು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಇದೇ ವೇಳೆ ಜಿಲ್ಲೆಯ ಕೆಲವು ಕಡೆಗಳಲ್ಲಿ ಕಡಲ್ಕೊರೆತವೂ ತೀವ್ರಗೊಂಡಿದ್ದು, ಅಲ್ಲಿ ತಡೆಗೋಡೆ ಕಾರ್ಯ ಬಿರುಸುಗೊಂಡಿದೆ. ಈ ಋತುವಿನ ಯಾಂತ್ರೀಕೃತ ಮತ್ತು ಆಳಸಮುದ್ರ ಮೀನುಗಾರಿಕೆ ಕೊನೆಗೊಂಡಿದ್ದು, ಮೀನುಗಾರರು ನಾಡದೋಣಿ ಮೀನುಗಾರಿಕೆ ಪ್ರಾರಂಭಿಸಿದ್ದಾರೆ.

ಕಳೆದೊಂದು ವಾರದಿಂದ ಕಡಲು ಪ್ರಕ್ಷುಬ್ದಗೊಂಡಿದ್ದು, ಕಡಲ್ಕೊರೆತ ತೀವ್ರಗೊಂಡಿದೆ. ಮಲ್ಪೆಯಲ್ಲಿ ಕಡಲು ಪ್ರಕ್ಷುಬ್ಧಗೊಂಡಿದ್ದು, ಕಡಲತೀರದ ಜನರು ಆತಂಕಗೊಂಡಿದ್ದಾರೆ. ಇನ್ನು ತೂಫಾನಿನ ತೀವ್ರತೆ ಹೆಚ್ಚಿದ್ದು ಮೀನುಗಾರರು ಕಡಲಿಗೆ ಇಳಿಯಲು ಹಿಂಜರಿಯುವಂತಾಗಿದೆ. ಕಳೆದ ನಾಲ್ಕಾರು ದಿನಗಳ ಮಳೆಯ ಆರ್ಭಟಕ್ಕೆ ಕಡಲು ಒಂದೇ ಸಮನೆ ಭೋರ್ಗರೆಯತ್ತಿದೆ. ಇದರ ಪರಿಣಾಮವಗಿ ಕೆಲವೆಡೆಗಳಲ್ಲಿ ಕಡಲ್ಕೊರೆತವೂ ತೀವ್ರಗೊಂಡಿದೆ. ಈ ಪ್ರದೇಶಗಳಲ್ಲಿ ಮೀನುಗಾರರ ಅನೇಕ ಮನೆಗಳಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search