• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಆರ್ ಎಸ್ ಎಸ್ ಸಭೆಯಲ್ಲಿ ಪ್ರಣಬ್ ಜೀ ಭಾಷಣ ಎಫೆಕ್ಟ್: ಸಂಘ ಸೇರ್ಪಡೆಗೆ ಹೆಚ್ಚುತ್ತಿರುವ ಜನರ ಒಲವು

TNN Correspondent Posted On June 26, 2018


  • Share On Facebook
  • Tweet It

ಕೊಲ್ಕತ್ತಾ: ತನ್ನ ಜನಸೇವಾ ಕಾರ್ಯಕ್ರಮಗಳು, ಜನರ ನೆರವಿಗೆ ಧಾವಿಸುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ಅರಿವು ಇರುವ ಯಾರೇ ಆದರೂ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಲು ಸದಾ ಮುಂದಾಗುತ್ತಾರೆ. ಇದೀಗ ಸಂಘದ ಸೇವಾ ತತ್ವದೊಂದಿಗೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರ್ ಎಸ್ ಎಸ್ ಸಭೆಯಲ್ಲಿ ಭಾಗಿಯಾಗಿ, ಮಾಡಿರುವ ಭಾಷಣದ ಎಫೆಕ್ಟ್ ಸಹ ಜೋರಾಗಿದೆ. ಪ್ರಣಬ್ ಜೀ ಮಾತನಾಡಿದ ನಂತರ ಸಂಘದತ್ತ ಹೆಚ್ಚಿನ ಜನರು ಒಲವು ತೋರಿಸುತ್ತಿದ್ದಾರೆ. ವಿಶೇಷವಾಗಿ ಪ್ರಣಬ್ ಮುಖರ್ಜಿ ಅವರ ತವರು ಪಶ್ಚಿಮ ಬಂಗಾಳದಲ್ಲಿ ನಿತ್ಯ ನೂರಾರು ಯುವಕರು ಸಂಘ ಸೇರ್ಪಡೆಗೆ ಮುಂದಾಗುತ್ತಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಶ್ಚಿಮ ಬಂಗಾಳದ ಹಿರಿಯ ಮುಖಂಡ ಬಿಪ್ಲಬ್ ರಾಯ್ ಹೇಳಿದ್ದಾರೆ.

ಪ್ರಣಬ್ ಮುಖರ್ಜಿ ಅವರು ಜೂನ್ 7ರಂದು ನಾಗಪುರದಲ್ಲಿ ನಡೆದ ಸಂಘ ಶಿಕ್ಷಾ ವರ್ಗದ ಸಭೆಯಲ್ಲಿ ಮಾತನಾಡಿದ ನಂತರ ಆರ್ ಎಸ್ ಎಸ್ ಸೇರ್ಪಡೆಗೆ ಅರ್ಜಿ ಸಲ್ಲಿಸುವವರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಜೂನ್ 1 ರಿಂದ 6 ರವರೆಗೆ ನಿತ್ಯ 378 ಅರ್ಜಿ ಸಲ್ಲಿಕೆಯಾಗುತ್ತಿದ್ದವು. ಆದರೆ ಜೂನ್ 7ರ ನಂತರ ನಿತ್ಯ ಒಂದು ಸಾವಿರಕ್ಕಿಂತ ಹೆಚ್ಚಿನ ಆಕಾಂಕ್ಷಿಗಳು ಸಂಘ ಸೇರ್ಪಡೆಗೆ ಒಲವು ತೋರಿಸಿದ್ದಾರೆ. ಇದರಲ್ಲಿ ವಿಶೇಷವಾಗಿ ಶೇ.40 ರಷ್ಟು ಜನರು ಪಶ್ಚಿಮ ಬಂಗಾಳದಿಂದಲೇ ಅರ್ಜಿ ಸಲ್ಲಿಸಿದ್ದಾರೆ ಎಂದು ರಾಯ್ ತಿಳಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಿಂದಿನಿಂದಲೂ ತನ್ನ ಕಾರ್ಯ ಚಟುವಟಿಕೆ, ಸೇವಾ ಕಾರ್ಯಗಳು ಸೇರಿ ನಾನಾ ಕಾರಣಗಳಿಂದ ಜನರನ್ನು ಆಕರ್ಷಿಸುತ್ತದೆ. ಆದರೂ ಪ್ರಣಬ್ ಮುಖರ್ಜಿ ಭೇಟಿ ನಂತರ ಸಂಘ ಸೇರ್ಪಡೆಯಾಗುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಕುತೂಹಲ ತೀವ್ರವಾಗಿದೆ ಎಂದು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search