• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಭಾರತದ ಘರ್ಜನೆ: ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ಪಾಕ್ ನ ಸತ್ವವಿಲ್ಲದ ಹೇಳಿಕೆಗಳು ವಾಸ್ತವ ಬದಲಾಯಿಸುವುದಿಲ್ಲ

TNN Correspondent Posted On June 26, 2018


  • Share On Facebook
  • Tweet It

ವಿಶ್ವಸಂಸ್ಥೆ: ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ಪಾಕಿಸ್ತಾನದ ಸತ್ವವಿಲ್ಲದ ಹೇಳಿಕೆಗಳು, ಖಾಲಿ ವಾಖ್ಚಾತುರ್ಯ ವಾಸ್ತವವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತ ಸ್ಪಷ್ಟನೆಯನ್ನು ನೀಡಿದ್ದು, ಪಾಕಿಸ್ತಾನ ನಾಟಕವನ್ನು ವಿಶ್ವದೆದುರು ಮತ್ತೊಮ್ಮೆ ಬಹಿರಂಗಪಡಿಸಿದೆ.

ದಾಖಲೆ ಸಹಿತ ಜಮ್ಮು ಕಾಶ್ಮೀರ ಭಾರತ ಅವಿಭಾಜ್ಯ ಮತ್ತು ಅನಿವಾರ್ಯವಾದ ಅಂಗ. ಪಾಕಿಸ್ತಾನದ ಬುಟಾಟಿಕೆಯ ಹೇಳಿಕೆಗಳು ಕಾಶ್ಮೀರವನ್ನು ಭಾರತದಿಂದ ದೂರಮಾಡಲು ಸಾಧ್ಯವಿಲ್ಲ ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲೇ ಭಾರತದ ಕಾರ್ಯದರ್ಶಿ ಸಂದೀಪಕುಮಾರ ಬೈಯಪ್ಪು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ.

ಪಾಕಿಸ್ತಾನದ ವಿರುದ್ಧ ಛಾಟಿ ಬೀಸಿರುವ ಬೈಯಪ್ಪು ಅವರು, ಜಮ್ಮು ಕಾಶ್ಮೀರದ ವಿಷಯದಲ್ಲಿ ಪಾಕಿಸ್ತಾನ ಸುಳ್ಳುಗಳನ್ನು ಹರಡುತ್ತಲೆ ದಿನದೂಡುತ್ತಿದೆ. ಭಾರತ ವಿರೋಧಿ ನೀತಿಯನ್ನು ಜಮ್ಮು ಕಾಶ್ಮೀರದ ವಿಷಯದ ಮೂಲಕ ದುರ್ಬಳಕೆ ಮಾಡಿಕೊಳ್ಳುತ್ತಿದ್ದೆ. ಭಾರತ ಜಮ್ಮು ಕಾಶ್ಮೀರದಲ್ಲಿ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುತ್ತಿದೆ ಶಾಂತಿ ನೆಲೆಸುತ್ತಿದೆ. ಆದರೆ ಪಾಕಿಸ್ತಾನ ವಿನಾಕಾರಣ ಸುಳ್ಳುಗಳನ್ನು ಹರಡುತ್ತಾ ಧ್ವೇಷ ಕಾರುತ್ತಿದೆ ಎಂದು ಖಡಕ್ ಸಂದೇಶವನ್ನು ವಿಶ್ವಸಮುದಾಯಕ್ಕೆ ನೀಡಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಪಿಡಿಪಿಯೊಂದಿಗಿನ ಮೈತ್ರಿಯನ್ನು ಬಿಜೆಪಿ ಕಡಿದುಕೊಂಡ ಕೆಲ ದಿನಗಳ ನಂತರ ಕಣಿವೆ ರಾಜ್ಯದಲ್ಲಿ ಮಹತ್ತರ ಬದಲಾವಣೆಗಳಾಗುತ್ತಿದ್ದು, ಇಡೀ ದೇಶ ಪ್ರಸ್ತುತ ನಡೆಸುತ್ತಿರುವ ಕಾರ್ಯಚರಣೆಗಳಿಂದ ಖುಷಿಯಲ್ಲಿದೆ. ಇದೀಗ ವಿಶ್ವಸಂಸ್ಥೆಯಲ್ಲೂ ಪಾಕಿಸ್ತಾನದ ಮಾನವನ್ನು ಹರಾಜಿಗೆ ಹಾಕುವ ಮೂಲಕ ಭಾರತ ತನ್ನ ಅಂತಸತ್ವವನ್ನು ಕಾಪಾಡಿಕೊಂಡು ಮುನ್ನಡಿ ಇಡುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರಿದರೇ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ಕಲ್ಪಿಸಿರುವ 370 ಕಾಯಿದೆ ತೆಗೆದು ಹಾಕುವ ದಿನಗಳು ದೂರವಿಲ್ಲ ಎಂಬ ಆಶಯ ಮೂಡಿದೆ.

1 delegation has yet again misused the platform to made an unwarranted reference to the Indian state of J&K: India during right to reply at UNGA General Debate on responsibility to Protect and the Prevention of Genocide, War Crimes, Ethnic Cleansing and Crimes against Humanity pic.twitter.com/QKQTMRhlD8

— ANI (@ANI) June 26, 2018

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search