• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಭಾರತದ ಘರ್ಜನೆ: ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ಪಾಕ್ ನ ಸತ್ವವಿಲ್ಲದ ಹೇಳಿಕೆಗಳು ವಾಸ್ತವ ಬದಲಾಯಿಸುವುದಿಲ್ಲ

TNN Correspondent Posted On June 26, 2018


  • Share On Facebook
  • Tweet It

ವಿಶ್ವಸಂಸ್ಥೆ: ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ಪಾಕಿಸ್ತಾನದ ಸತ್ವವಿಲ್ಲದ ಹೇಳಿಕೆಗಳು, ಖಾಲಿ ವಾಖ್ಚಾತುರ್ಯ ವಾಸ್ತವವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತ ಸ್ಪಷ್ಟನೆಯನ್ನು ನೀಡಿದ್ದು, ಪಾಕಿಸ್ತಾನ ನಾಟಕವನ್ನು ವಿಶ್ವದೆದುರು ಮತ್ತೊಮ್ಮೆ ಬಹಿರಂಗಪಡಿಸಿದೆ.

ದಾಖಲೆ ಸಹಿತ ಜಮ್ಮು ಕಾಶ್ಮೀರ ಭಾರತ ಅವಿಭಾಜ್ಯ ಮತ್ತು ಅನಿವಾರ್ಯವಾದ ಅಂಗ. ಪಾಕಿಸ್ತಾನದ ಬುಟಾಟಿಕೆಯ ಹೇಳಿಕೆಗಳು ಕಾಶ್ಮೀರವನ್ನು ಭಾರತದಿಂದ ದೂರಮಾಡಲು ಸಾಧ್ಯವಿಲ್ಲ ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲೇ ಭಾರತದ ಕಾರ್ಯದರ್ಶಿ ಸಂದೀಪಕುಮಾರ ಬೈಯಪ್ಪು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ.

ಪಾಕಿಸ್ತಾನದ ವಿರುದ್ಧ ಛಾಟಿ ಬೀಸಿರುವ ಬೈಯಪ್ಪು ಅವರು, ಜಮ್ಮು ಕಾಶ್ಮೀರದ ವಿಷಯದಲ್ಲಿ ಪಾಕಿಸ್ತಾನ ಸುಳ್ಳುಗಳನ್ನು ಹರಡುತ್ತಲೆ ದಿನದೂಡುತ್ತಿದೆ. ಭಾರತ ವಿರೋಧಿ ನೀತಿಯನ್ನು ಜಮ್ಮು ಕಾಶ್ಮೀರದ ವಿಷಯದ ಮೂಲಕ ದುರ್ಬಳಕೆ ಮಾಡಿಕೊಳ್ಳುತ್ತಿದ್ದೆ. ಭಾರತ ಜಮ್ಮು ಕಾಶ್ಮೀರದಲ್ಲಿ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುತ್ತಿದೆ ಶಾಂತಿ ನೆಲೆಸುತ್ತಿದೆ. ಆದರೆ ಪಾಕಿಸ್ತಾನ ವಿನಾಕಾರಣ ಸುಳ್ಳುಗಳನ್ನು ಹರಡುತ್ತಾ ಧ್ವೇಷ ಕಾರುತ್ತಿದೆ ಎಂದು ಖಡಕ್ ಸಂದೇಶವನ್ನು ವಿಶ್ವಸಮುದಾಯಕ್ಕೆ ನೀಡಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಪಿಡಿಪಿಯೊಂದಿಗಿನ ಮೈತ್ರಿಯನ್ನು ಬಿಜೆಪಿ ಕಡಿದುಕೊಂಡ ಕೆಲ ದಿನಗಳ ನಂತರ ಕಣಿವೆ ರಾಜ್ಯದಲ್ಲಿ ಮಹತ್ತರ ಬದಲಾವಣೆಗಳಾಗುತ್ತಿದ್ದು, ಇಡೀ ದೇಶ ಪ್ರಸ್ತುತ ನಡೆಸುತ್ತಿರುವ ಕಾರ್ಯಚರಣೆಗಳಿಂದ ಖುಷಿಯಲ್ಲಿದೆ. ಇದೀಗ ವಿಶ್ವಸಂಸ್ಥೆಯಲ್ಲೂ ಪಾಕಿಸ್ತಾನದ ಮಾನವನ್ನು ಹರಾಜಿಗೆ ಹಾಕುವ ಮೂಲಕ ಭಾರತ ತನ್ನ ಅಂತಸತ್ವವನ್ನು ಕಾಪಾಡಿಕೊಂಡು ಮುನ್ನಡಿ ಇಡುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರಿದರೇ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ಕಲ್ಪಿಸಿರುವ 370 ಕಾಯಿದೆ ತೆಗೆದು ಹಾಕುವ ದಿನಗಳು ದೂರವಿಲ್ಲ ಎಂಬ ಆಶಯ ಮೂಡಿದೆ.

1 delegation has yet again misused the platform to made an unwarranted reference to the Indian state of J&K: India during right to reply at UNGA General Debate on responsibility to Protect and the Prevention of Genocide, War Crimes, Ethnic Cleansing and Crimes against Humanity pic.twitter.com/QKQTMRhlD8

— ANI (@ANI) June 26, 2018

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search