• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋವುಗಳ ಬಗ್ಗೆ ಕಾಳಜಿ ತೋರಿಸಿದ್ದಕ್ಕೆ ಕುಟುಂಬದವರೇ ಹೀಗೆ ಬಹಿಷ್ಕಾರ ಹಾಕುವುದು ಸರೀನಾ?

TNN Correspondent Posted On June 27, 2018
0


0
Shares
  • Share On Facebook
  • Tweet It

ಭೋಪಾಲ್: ಒಂದು ಗೋವಿನಲ್ಲಿ ಮುಕ್ಕೋಟಿ ದೇವತೆಗಳು ನೆಲೆಸಿರುತ್ತಾರೆ ಎಂಬ ಪ್ರತೀತಿ ಇದೆ. ಒಂದು ಗೋವು ಹಾಲು ಕೊಡುತ್ತೆ, ಆ ಹಾಲು ಮೊಸರಾಗುತ್ತದೆ, ಮೊಸರು ಮಜ್ಜಿಗೆ, ಮಜ್ಜಿಗೆ ಬೆಣ್ಣೆ, ಬೆಣ್ಣೆ ತುಪ್ಪವಾಗಿ ಮನುಷ್ಯನಿಗೆ ಬೇಕಾದ ವಿಟಮಿನ್ ನೀಡುತ್ತದೆ. ಕೃಷಿಕರಿಗೆ ಗೊಬ್ಬರ ನೀಡುತ್ತದೆ. ವಿಭೂತಿಯಾಗಲು ಗೋವಿನ ಸಗಣಿಯೇ ಬೇಕು. ಅಷ್ಟರಮಟ್ಟಿಗೆ ಗೋವು ಬಹುಪಯೋಗಿ.

ಆದರೆ ಮಧ್ಯಪ್ರದೇಶದ ನೀಮೂಚ್ ನಲ್ಲಿ ಮಾತ್ರ ಮಹಿಳೆಯೊಬ್ಬರು ಗೋವುಗಳ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದಕ್ಕೇ ಕುಟುಂಬದಿಂದಲೇ ಬಹಿಷ್ಕಾರ ಎದುರಿಸುವ ಅನಿವಾರ್ಯ ಬಂದೊದಗಿದೆ. ಇದು ಸಮಾಜವೇ ತಲೆ ತಗ್ಗಿಸುವ ಕೃತ್ಯವಾದರೂ ಯಾರೊಬ್ಬರೂ ಮಹಿಳೆ ಬೆಂಬಲಕ್ಕೆ ನಿಲ್ಲದಿರುವುದು ಅಮಾನವೀಯ ಎನಿಸುತ್ತಿದೆ.

ಹೌದು, ನೀಮೂಚ್ ನಲ್ಲಿ ಮೆಹರುನಿಸಾ ಖಾನ್ ಗೋಶಾಲೆ ನಡೆಸುತ್ತಿದ್ದಾರೆ. ರಾಷ್ಟ್ರೀಯ ಗೋಸೇವಾ ಸಂಸ್ಥೆಯ ಅಧ್ಯಕ್ಷೆಯೂ ಆಗಿರುವ ಇವರು ಗೋವುಗಳನ್ನು ರಕ್ಷಣೆ ಮಾಡುತ್ತಿದ್ದಾರೆ. ಆದರೆ ಇದನ್ನೇ ಮಹಾಪರಾಧ ಎಂಬಂತೆ ಭಾವಿಸಿರುವ ಮಹಿಳೆಯ ಗಂಡ ಹಾಗೂ ಆತನ ಕುಟುಂಬಸ್ಥರು ಮಹಿಳೆಯನ್ನು ಮನೆಯಿಂದಲೇ ಹೊರಹಾಕಿದ್ದಲ್ಲದೆ, ಬಹಿಷ್ಕಾರ ಹೇರಿದ್ದಾರೆ.

ಮತ್ತೊಂದು ವಿಪರ್ಯಾಸದ ಸಂಗತಿಯೆಂದರೆ ಮಹಿಳೆಯ ಈ ಅಂತಃಕರಣಕ್ಕೆ ಆಕೆಯ ಸಹೋದರಿ ಹಾಗೂ ಪೋಷಕರು ಸಹ ವಿರೋಧ ವ್ಯಕ್ತಪಡಿಸಿದ್ದು, ಗೋವುಗಳ ರಕ್ಷಣೆ ಮಾಡುವುದು ಬೇಡ ಎಂದು ಒತ್ತಾಯ ಮಾಡುತ್ತಿದ್ದಾರಂತೆ. ಅಲ್ಲದೆ ಗೋಶಾಲೆ ತೆರೆದಾಗಿನಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ಮೆಹರುನಿಸಾ ಖಾನ್ ಮಾಹಿತಿ ನೀಡಿದ್ದಾರೆ.

ಗೋರಕ್ಷಣೆ ಮಾಡುವುದರಿಂದ ತಮ್ಮ ಕುಟುಂಬಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಮನೆಯಿಂದ ಹೊರಹಾಕಿದ್ದಾರೆ. ತವರು ಮನೆಯವರೂ ನನ್ನ ಕೆಲಸಕ್ಕೆ ವಿರೋಧಿಸುತ್ತಾರೆ. ಆದರೆ ನಾನು ಮಾತ್ರ ಗೋವುಗಳ ರಕ್ಷಣೆ ಮಾಡುವುದನ್ನು ನಿಲ್ಲಿಸುವುದಿಲ್ಲ. ಒಂಟಿಯಾಗಿಯೇ ಜೀವನ ಸಾಗಿಸುತ್ತೇನೆ ಎನ್ನುತ್ತಾರೆ ದಿಟ್ಟೆ ಮೆಹರುನಿಸಾ.

ಹೀಗೆ ಮಹಿಳೆಯೊಬ್ಬಳಿಗೆ ಗೋವು ರಕ್ಷಣೆ ಮಾಡುವುದೇ ದೊಡ್ಡ ಅಪರಾಧ ಎಂಬಂತೆ ಭಾವಿಸಿ, ಆಕೆಯನ್ನು ಕುಟುಂಬದಿಂದಲೇ ಬಹಿಷ್ಕಾರ ಹಾಕಿದರೂ, ಇದುವರೆಗೂ ಯಾವುದೇ ಮಹಿಳಾ ಹಕ್ಕುಗಳ ಆಯೋಗ, ಬುದ್ಧಿಜೀವಿಗಳು, ಪ್ರಗತಿಪರರು, ಜೀವಪರರು, ಅಲ್ಪಸಂಖ್ಯಾತರ ಪರರು ಮಹಿಳೆ ನೆರವಿಗೆ ಬಾರದಿರುವುದು ಸಹ ಘೋರ ದುರಂತವಾಗಿದೆ. ಮೆಹರುನಿಸಾಗೆ ಗೋಮಾತೆ ಒಳ್ಳೆಯದನ್ನೇ ಮಾಡಲಿ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search