• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋವುಗಳ ಬಗ್ಗೆ ಕಾಳಜಿ ತೋರಿಸಿದ್ದಕ್ಕೆ ಕುಟುಂಬದವರೇ ಹೀಗೆ ಬಹಿಷ್ಕಾರ ಹಾಕುವುದು ಸರೀನಾ?

TNN Correspondent Posted On June 27, 2018
0


0
Shares
  • Share On Facebook
  • Tweet It

ಭೋಪಾಲ್: ಒಂದು ಗೋವಿನಲ್ಲಿ ಮುಕ್ಕೋಟಿ ದೇವತೆಗಳು ನೆಲೆಸಿರುತ್ತಾರೆ ಎಂಬ ಪ್ರತೀತಿ ಇದೆ. ಒಂದು ಗೋವು ಹಾಲು ಕೊಡುತ್ತೆ, ಆ ಹಾಲು ಮೊಸರಾಗುತ್ತದೆ, ಮೊಸರು ಮಜ್ಜಿಗೆ, ಮಜ್ಜಿಗೆ ಬೆಣ್ಣೆ, ಬೆಣ್ಣೆ ತುಪ್ಪವಾಗಿ ಮನುಷ್ಯನಿಗೆ ಬೇಕಾದ ವಿಟಮಿನ್ ನೀಡುತ್ತದೆ. ಕೃಷಿಕರಿಗೆ ಗೊಬ್ಬರ ನೀಡುತ್ತದೆ. ವಿಭೂತಿಯಾಗಲು ಗೋವಿನ ಸಗಣಿಯೇ ಬೇಕು. ಅಷ್ಟರಮಟ್ಟಿಗೆ ಗೋವು ಬಹುಪಯೋಗಿ.

ಆದರೆ ಮಧ್ಯಪ್ರದೇಶದ ನೀಮೂಚ್ ನಲ್ಲಿ ಮಾತ್ರ ಮಹಿಳೆಯೊಬ್ಬರು ಗೋವುಗಳ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದಕ್ಕೇ ಕುಟುಂಬದಿಂದಲೇ ಬಹಿಷ್ಕಾರ ಎದುರಿಸುವ ಅನಿವಾರ್ಯ ಬಂದೊದಗಿದೆ. ಇದು ಸಮಾಜವೇ ತಲೆ ತಗ್ಗಿಸುವ ಕೃತ್ಯವಾದರೂ ಯಾರೊಬ್ಬರೂ ಮಹಿಳೆ ಬೆಂಬಲಕ್ಕೆ ನಿಲ್ಲದಿರುವುದು ಅಮಾನವೀಯ ಎನಿಸುತ್ತಿದೆ.

ಹೌದು, ನೀಮೂಚ್ ನಲ್ಲಿ ಮೆಹರುನಿಸಾ ಖಾನ್ ಗೋಶಾಲೆ ನಡೆಸುತ್ತಿದ್ದಾರೆ. ರಾಷ್ಟ್ರೀಯ ಗೋಸೇವಾ ಸಂಸ್ಥೆಯ ಅಧ್ಯಕ್ಷೆಯೂ ಆಗಿರುವ ಇವರು ಗೋವುಗಳನ್ನು ರಕ್ಷಣೆ ಮಾಡುತ್ತಿದ್ದಾರೆ. ಆದರೆ ಇದನ್ನೇ ಮಹಾಪರಾಧ ಎಂಬಂತೆ ಭಾವಿಸಿರುವ ಮಹಿಳೆಯ ಗಂಡ ಹಾಗೂ ಆತನ ಕುಟುಂಬಸ್ಥರು ಮಹಿಳೆಯನ್ನು ಮನೆಯಿಂದಲೇ ಹೊರಹಾಕಿದ್ದಲ್ಲದೆ, ಬಹಿಷ್ಕಾರ ಹೇರಿದ್ದಾರೆ.

ಮತ್ತೊಂದು ವಿಪರ್ಯಾಸದ ಸಂಗತಿಯೆಂದರೆ ಮಹಿಳೆಯ ಈ ಅಂತಃಕರಣಕ್ಕೆ ಆಕೆಯ ಸಹೋದರಿ ಹಾಗೂ ಪೋಷಕರು ಸಹ ವಿರೋಧ ವ್ಯಕ್ತಪಡಿಸಿದ್ದು, ಗೋವುಗಳ ರಕ್ಷಣೆ ಮಾಡುವುದು ಬೇಡ ಎಂದು ಒತ್ತಾಯ ಮಾಡುತ್ತಿದ್ದಾರಂತೆ. ಅಲ್ಲದೆ ಗೋಶಾಲೆ ತೆರೆದಾಗಿನಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ಮೆಹರುನಿಸಾ ಖಾನ್ ಮಾಹಿತಿ ನೀಡಿದ್ದಾರೆ.

ಗೋರಕ್ಷಣೆ ಮಾಡುವುದರಿಂದ ತಮ್ಮ ಕುಟುಂಬಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಮನೆಯಿಂದ ಹೊರಹಾಕಿದ್ದಾರೆ. ತವರು ಮನೆಯವರೂ ನನ್ನ ಕೆಲಸಕ್ಕೆ ವಿರೋಧಿಸುತ್ತಾರೆ. ಆದರೆ ನಾನು ಮಾತ್ರ ಗೋವುಗಳ ರಕ್ಷಣೆ ಮಾಡುವುದನ್ನು ನಿಲ್ಲಿಸುವುದಿಲ್ಲ. ಒಂಟಿಯಾಗಿಯೇ ಜೀವನ ಸಾಗಿಸುತ್ತೇನೆ ಎನ್ನುತ್ತಾರೆ ದಿಟ್ಟೆ ಮೆಹರುನಿಸಾ.

ಹೀಗೆ ಮಹಿಳೆಯೊಬ್ಬಳಿಗೆ ಗೋವು ರಕ್ಷಣೆ ಮಾಡುವುದೇ ದೊಡ್ಡ ಅಪರಾಧ ಎಂಬಂತೆ ಭಾವಿಸಿ, ಆಕೆಯನ್ನು ಕುಟುಂಬದಿಂದಲೇ ಬಹಿಷ್ಕಾರ ಹಾಕಿದರೂ, ಇದುವರೆಗೂ ಯಾವುದೇ ಮಹಿಳಾ ಹಕ್ಕುಗಳ ಆಯೋಗ, ಬುದ್ಧಿಜೀವಿಗಳು, ಪ್ರಗತಿಪರರು, ಜೀವಪರರು, ಅಲ್ಪಸಂಖ್ಯಾತರ ಪರರು ಮಹಿಳೆ ನೆರವಿಗೆ ಬಾರದಿರುವುದು ಸಹ ಘೋರ ದುರಂತವಾಗಿದೆ. ಮೆಹರುನಿಸಾಗೆ ಗೋಮಾತೆ ಒಳ್ಳೆಯದನ್ನೇ ಮಾಡಲಿ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search