• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮದರಸಾಕ್ಕೆ ಕಳುಹಿಸಿಲ್ಲ ಎಂದಮಾತ್ರಕ್ಕೆ ಮುಸ್ಲಿಂ ಮಹಿಳೆಯರಿಗೆ ಕಿರುಕುಳ, ಇದೆಂಥಾ ಅಸಹಿಷ್ಣುತೆ?

TNN Correspondent Posted On June 27, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಅಸಹಿಷ್ಣುತೆ ಇದೆ ಎಂದು ಬೊಬ್ಬೆ ಹಾಕುವವರು ಎಲ್ಲಿದ್ದಾರೆ? ನಾವು ಮುಸ್ಲಿಮರ ಕ್ಷೇಮಾಭಿವೃದ್ಧಿ ಪರ ಎನ್ನುವವರು ಎಲ್ಲಿದ್ದಾರೆ? ನಾವು ಜೀವಪರರು, ಪ್ರಗತಿಪರರು, ಬುದ್ಧಿಜೀವಿಗಳು ಎಂದು ಕರೆಸಿಕೊಳ್ಳುವವರೆಲ್ಲ ಯಾವ ಬಿಲದಲ್ಲಿ ಅಡಗಿ ಕುಳಿತಿದ್ದಾರೆ?

ಎಲ್ಲಿದ್ದೀರಿ ಮಹಿಳಾ ಆಯೋಗದ ನಾರಿಮಣಿಗಳೇ? ಈ ಮುಸ್ಲಿಂ ಮಹಿಳೆಯರಿಗೆ ನ್ಯಾಯ ಒದಗಿಸುವವರು ಯಾರು? ಟೌನ್ ಹಾಲ್ ಮುಂದೆ ನಿಂತು ಧಿಕ್ಕಾರ ಕೂಗುವುದು ಬರೀ ನರೇಂದ್ರ ಮೋದಿ ಅವರ ವಿರುದ್ಧ ಮಾತ್ರವೇ? ಇಂತಹ ವಿಷಯಗಳಲ್ಲಿ ಮೂಲಭೂತವಾದಿಗಳ ವಿರುದ್ಧ ಧಿಕ್ಕಾರ ಕೂಗಲು ನಿಮ್ಮ ಬಾಯಿಯ ನರಗಳು ಸತ್ತು ಹೋಗಿವೆಯೇ?

ಹೌದು, ಉತ್ತರ ಪ್ರದೇಶದ ಮೀರತ್ ನಲ್ಲಿ ತಂದೆಯೊಬ್ಬ ತನ್ನ ನಾಲ್ವರು ಮಕ್ಕಳಿಗೆ ಮದರಸಾಕ್ಕೆ ಕಳುಹಿಸುವುದನ್ನು ನಿಲ್ಲಿಸಿದ್ದು, ಇದಕ್ಕೆ ಕುಪಿತರಾಗಿರುವ ಹಲವು ಮುಸ್ಲಿಂ ಮೂಲಭೂತವಾದಿಗಳು ಈಗ ಮಹಿಳೆಯರಿಗೆ ಕಿರುಕುಳ ನೀಡಲು ಆರಂಭಿಸಿದ್ದಾರೆ. ಅತ್ತ ಮಕ್ಕಳಿಗೆ ರಕ್ಷಣೆಗೆ ಹೆಣ್ಣು ಹೆತ್ತ ತಂದ ಪರಿತಪಿಸುವಂತಾಗಿದೆ.

ಇದರಿಂದ ಬೇಸತ್ತ ನಾಲ್ವರು ಹೆಣ್ಣು ಮಕ್ಕಳ ತಂದೆ ಈಗ ನನ್ನ ಮಕ್ಕಳಿಗೆ ನೀವೇ ಭದ್ರತೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗೆ ಪತ್ರ ಬರೆದಿದ್ದಾರೆ. ದಯಮಾಡಿ ನನ್ನ ನಾಲ್ಕು ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮುಸ್ಲಿಂ ಮೂಲಭೂತವಾದಿಗಳ ಈ ಉಪಟಳದ ಕುರಿತು ನಾಲ್ವರು ಹೆಣ್ಣು ಮಕ್ಕಳು ಮಾತನಾಡಿದ್ದು, ನಾವು ಇತ್ತೀಚೆಗೆ ಮದರಸಾಕ್ಕೆ ಹೋಗುವುದನ್ನು ನಿಲ್ಲಿಸಿದ್ದೇವೆ. ಇದರಿಂದ ಕೆಲವರು ನಮ್ಮ ಮೇಲೆ ಕೆಲವರು ಕೋಪಗೊಂಡಿದ್ದು, ಮನೆಗೆ ಬಂದು ಬೆದರಿಕೆ ಹಾಕುತ್ತಿದ್ದಾರೆ. ನಮ್ಮ ಮುಖಕ್ಕೆ ಆ್ಯಸಿಡ್ ಸುರಿಯುವುದಾಗಿ ಹೆದರಿಸುತ್ತಿದ್ದಾರೆ. ಹಾಗಾಗಿ ನಮ್ಮ ತಂದೆ ಪತ್ರ ಬರೆದಿದ್ದು, ನಮಗೆ ಭದ್ರತೆ ನೀಡಬೇಕು ಎಂದು ಅಳಲು ತೋಡಿಕೊಂಡಿದ್ದಾರೆ.

ಈಗ ಹೇಳಿ ಇಸ್ಲಾಂನ ಯಾವ ನಿಯಮದಲ್ಲಿ ಮುಸ್ಲಿಂ ಮಹಿಳೆಯರು ಕಡ್ಡಾಯವಾಗಿ ಮದರಸಾಗಳಿಗೆ ಹೋಗಲೇಬೇಕು ಎಂದು ಹೇಳಿದೆ? ಯಾವ ಅಲ್ಲಾ ಇದನ್ನು ಕಡ್ಡಾಯಗೊಳಿಸಿದ್ದಾನೆ? ಕುರ್ರಾನ್ ನ ಯಾವ ಅಧ್ಯಾಯದಲ್ಲಿ ಹೀಗೆ ಹೇಳಲಾಗಿದೆ? ಮದರಸಾಗಳಿಗೆ ಬರದಿದ್ದರೆ ಮುಖಕ್ಕೆ ಆ್ಯಸಿಡ್ ಎರಚುತ್ತೇನೆ ಎನ್ನುವುದು ಯಾವ ಸೀಮೆ ಮನುಷ್ಯತ್ವ ಸ್ವಾಮಿ? ಯಾರು ಉತ್ತರಿಸಬೇಕು ಇದಕ್ಕೆ? ಇಸ್ಲಾಂ ಧರ್ಮಗುರುಗಳೂ ಇವರ ಕುರಿತು ಯೋಚಿಸಬಾರದೆ? ಥೂ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search