• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮದರಸಾಕ್ಕೆ ಕಳುಹಿಸಿಲ್ಲ ಎಂದಮಾತ್ರಕ್ಕೆ ಮುಸ್ಲಿಂ ಮಹಿಳೆಯರಿಗೆ ಕಿರುಕುಳ, ಇದೆಂಥಾ ಅಸಹಿಷ್ಣುತೆ?

TNN Correspondent Posted On June 27, 2018


  • Share On Facebook
  • Tweet It

ಲಖನೌ: ದೇಶದಲ್ಲಿ ಅಸಹಿಷ್ಣುತೆ ಇದೆ ಎಂದು ಬೊಬ್ಬೆ ಹಾಕುವವರು ಎಲ್ಲಿದ್ದಾರೆ? ನಾವು ಮುಸ್ಲಿಮರ ಕ್ಷೇಮಾಭಿವೃದ್ಧಿ ಪರ ಎನ್ನುವವರು ಎಲ್ಲಿದ್ದಾರೆ? ನಾವು ಜೀವಪರರು, ಪ್ರಗತಿಪರರು, ಬುದ್ಧಿಜೀವಿಗಳು ಎಂದು ಕರೆಸಿಕೊಳ್ಳುವವರೆಲ್ಲ ಯಾವ ಬಿಲದಲ್ಲಿ ಅಡಗಿ ಕುಳಿತಿದ್ದಾರೆ?

ಎಲ್ಲಿದ್ದೀರಿ ಮಹಿಳಾ ಆಯೋಗದ ನಾರಿಮಣಿಗಳೇ? ಈ ಮುಸ್ಲಿಂ ಮಹಿಳೆಯರಿಗೆ ನ್ಯಾಯ ಒದಗಿಸುವವರು ಯಾರು? ಟೌನ್ ಹಾಲ್ ಮುಂದೆ ನಿಂತು ಧಿಕ್ಕಾರ ಕೂಗುವುದು ಬರೀ ನರೇಂದ್ರ ಮೋದಿ ಅವರ ವಿರುದ್ಧ ಮಾತ್ರವೇ? ಇಂತಹ ವಿಷಯಗಳಲ್ಲಿ ಮೂಲಭೂತವಾದಿಗಳ ವಿರುದ್ಧ ಧಿಕ್ಕಾರ ಕೂಗಲು ನಿಮ್ಮ ಬಾಯಿಯ ನರಗಳು ಸತ್ತು ಹೋಗಿವೆಯೇ?

ಹೌದು, ಉತ್ತರ ಪ್ರದೇಶದ ಮೀರತ್ ನಲ್ಲಿ ತಂದೆಯೊಬ್ಬ ತನ್ನ ನಾಲ್ವರು ಮಕ್ಕಳಿಗೆ ಮದರಸಾಕ್ಕೆ ಕಳುಹಿಸುವುದನ್ನು ನಿಲ್ಲಿಸಿದ್ದು, ಇದಕ್ಕೆ ಕುಪಿತರಾಗಿರುವ ಹಲವು ಮುಸ್ಲಿಂ ಮೂಲಭೂತವಾದಿಗಳು ಈಗ ಮಹಿಳೆಯರಿಗೆ ಕಿರುಕುಳ ನೀಡಲು ಆರಂಭಿಸಿದ್ದಾರೆ. ಅತ್ತ ಮಕ್ಕಳಿಗೆ ರಕ್ಷಣೆಗೆ ಹೆಣ್ಣು ಹೆತ್ತ ತಂದ ಪರಿತಪಿಸುವಂತಾಗಿದೆ.

ಇದರಿಂದ ಬೇಸತ್ತ ನಾಲ್ವರು ಹೆಣ್ಣು ಮಕ್ಕಳ ತಂದೆ ಈಗ ನನ್ನ ಮಕ್ಕಳಿಗೆ ನೀವೇ ಭದ್ರತೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗೆ ಪತ್ರ ಬರೆದಿದ್ದಾರೆ. ದಯಮಾಡಿ ನನ್ನ ನಾಲ್ಕು ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮುಸ್ಲಿಂ ಮೂಲಭೂತವಾದಿಗಳ ಈ ಉಪಟಳದ ಕುರಿತು ನಾಲ್ವರು ಹೆಣ್ಣು ಮಕ್ಕಳು ಮಾತನಾಡಿದ್ದು, ನಾವು ಇತ್ತೀಚೆಗೆ ಮದರಸಾಕ್ಕೆ ಹೋಗುವುದನ್ನು ನಿಲ್ಲಿಸಿದ್ದೇವೆ. ಇದರಿಂದ ಕೆಲವರು ನಮ್ಮ ಮೇಲೆ ಕೆಲವರು ಕೋಪಗೊಂಡಿದ್ದು, ಮನೆಗೆ ಬಂದು ಬೆದರಿಕೆ ಹಾಕುತ್ತಿದ್ದಾರೆ. ನಮ್ಮ ಮುಖಕ್ಕೆ ಆ್ಯಸಿಡ್ ಸುರಿಯುವುದಾಗಿ ಹೆದರಿಸುತ್ತಿದ್ದಾರೆ. ಹಾಗಾಗಿ ನಮ್ಮ ತಂದೆ ಪತ್ರ ಬರೆದಿದ್ದು, ನಮಗೆ ಭದ್ರತೆ ನೀಡಬೇಕು ಎಂದು ಅಳಲು ತೋಡಿಕೊಂಡಿದ್ದಾರೆ.

ಈಗ ಹೇಳಿ ಇಸ್ಲಾಂನ ಯಾವ ನಿಯಮದಲ್ಲಿ ಮುಸ್ಲಿಂ ಮಹಿಳೆಯರು ಕಡ್ಡಾಯವಾಗಿ ಮದರಸಾಗಳಿಗೆ ಹೋಗಲೇಬೇಕು ಎಂದು ಹೇಳಿದೆ? ಯಾವ ಅಲ್ಲಾ ಇದನ್ನು ಕಡ್ಡಾಯಗೊಳಿಸಿದ್ದಾನೆ? ಕುರ್ರಾನ್ ನ ಯಾವ ಅಧ್ಯಾಯದಲ್ಲಿ ಹೀಗೆ ಹೇಳಲಾಗಿದೆ? ಮದರಸಾಗಳಿಗೆ ಬರದಿದ್ದರೆ ಮುಖಕ್ಕೆ ಆ್ಯಸಿಡ್ ಎರಚುತ್ತೇನೆ ಎನ್ನುವುದು ಯಾವ ಸೀಮೆ ಮನುಷ್ಯತ್ವ ಸ್ವಾಮಿ? ಯಾರು ಉತ್ತರಿಸಬೇಕು ಇದಕ್ಕೆ? ಇಸ್ಲಾಂ ಧರ್ಮಗುರುಗಳೂ ಇವರ ಕುರಿತು ಯೋಚಿಸಬಾರದೆ? ಥೂ.

  • Share On Facebook
  • Tweet It


- Advertisement -


Trending Now
ಚೀನಾ ಪರ ಪ್ರಚಾರ ಆರೋಪ; ನ್ಯೂಸ್ ಕ್ಲಿಕ್ ಕಚೇರಿ ರೇಡ್!
Tulunadu News October 3, 2023
ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ. ಅದರ ಮುಂದುವರಿದ ಭಾಗವೇ ಈ ದಾಳಿಗಳು:ಶಾಸಕ ಕಾಮತ್
Tulunadu News October 2, 2023
Leave A Reply

  • Recent Posts

    • ಚೀನಾ ಪರ ಪ್ರಚಾರ ಆರೋಪ; ನ್ಯೂಸ್ ಕ್ಲಿಕ್ ಕಚೇರಿ ರೇಡ್!
    • ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ. ಅದರ ಮುಂದುವರಿದ ಭಾಗವೇ ಈ ದಾಳಿಗಳು:ಶಾಸಕ ಕಾಮತ್
    • ದಾವೂದ್ ಹತ್ಯೆಗೆ ಅಜಿತ್ ದೋವಲ್ ಮಾಡಿದ ಪ್ಲಾನ್ ವಿಫಲಗೊಳಿಸಿದ್ದು ಯಾರು?
    • ಶಿವಮೊಗ್ಗದಲ್ಲಿ ಬಹಿರಂಗ ತಲ್ವಾರ್ ಪ್ರದರ್ಶನ, ಭಯ ಉತ್ಪಾದಕ ಕೃತ್ಯ!
    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
  • Popular Posts

    • 1
      ಚೀನಾ ಪರ ಪ್ರಚಾರ ಆರೋಪ; ನ್ಯೂಸ್ ಕ್ಲಿಕ್ ಕಚೇರಿ ರೇಡ್!
    • 2
      ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ. ಅದರ ಮುಂದುವರಿದ ಭಾಗವೇ ಈ ದಾಳಿಗಳು:ಶಾಸಕ ಕಾಮತ್
    • 3
      ದಾವೂದ್ ಹತ್ಯೆಗೆ ಅಜಿತ್ ದೋವಲ್ ಮಾಡಿದ ಪ್ಲಾನ್ ವಿಫಲಗೊಳಿಸಿದ್ದು ಯಾರು?
    • 4
      ಶಿವಮೊಗ್ಗದಲ್ಲಿ ಬಹಿರಂಗ ತಲ್ವಾರ್ ಪ್ರದರ್ಶನ, ಭಯ ಉತ್ಪಾದಕ ಕೃತ್ಯ!
    • 5
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search