• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸರ್ದಾರ್ ಪಟೇಲ್ ರಿಗೆ ನೆಹರು ಸ್ವಾತಂತ್ರ್ಯ ನೀಡಿದ್ದರೇ, ಜಮ್ಮು ಕಾಶ್ಮೀರದ ಸ್ಥಿತಿ ಬೇರೆಯೇ ಇರುತ್ತಿತ್ತು: ಕೇಂದ್ರ ಸಚಿವ ಜೀತೇಂದ್ರ ಸಿಂಗ್

TNN Correspondent Posted On June 27, 2018
0


0
Shares
  • Share On Facebook
  • Tweet It

ಜಮ್ಮು: ಜಮ್ಮು ಕಾಶ್ಮೀರದಲ್ಲಿ ಪ್ರಸ್ತುತ ಪರಿಸ್ಥಿತಿ ನಿರ್ಮಾಣಕ್ಕೆ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಅವರೇ ಕಾರಣ. ಅಂದು ಅವರು ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರಿಗೆ ಸ್ವಾತಂತ್ರ್ಯ ನೀಡಿದ್ದರೇ ಪ್ರಸ್ತುತ ಜಮ್ಮು ಕಾಶ್ಮೀರದ ಸ್ಥಿತಿಯೇ ಬೇರೆಯಾಗಿರುತ್ತಿತ್ತು ಎಂದು ಕೇಂದ್ರ ಸಚಿವ ಜೀತೇಂದ್ರ ಸಿಂಗ್  ಕಾಂಗ್ರೆಸ್ ಮೂಲವನ್ನು ಪ್ರಶ್ನಿಸಿದ್ದಾರೆ.

ಕಣಿವೆ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳು ಮತ್ತು ಕಾಶ್ಮೀರದ ಕುರಿತು ಕಾಂಗ್ರೆಸ್ ನಾಯಕರ ದೇಶವಿರೋಧಿ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಜೀತೇಂದ್ರ ಸಿಂಗ್, ನೆಹರು ಅವರು ದೇಶದ ಇತರ ರಾಜ್ಯಗಳ ಕುರಿತು ಸರ್ದಾರ್ ಪಟೇಲ್ ರಿಗೆ ನೀಡಿದ್ದ ಸ್ವಾತಂತ್ರ್ಯ ಜಮ್ಮು ಕಾಶ್ಮೀರದ ವಿಷಯದಲ್ಲಿ ನೀಡಿದ್ದರೇ, ದೇಶದ ಇತಿಹಾಸವೇ ಬೇರೆಯಾಗುತ್ತಿತ್ತು ಅಲ್ಲದೇ ದೇಶವನ್ನು ಬಹುದಿನಗಳಿಂದ ಆಳಿದ ಕಾಂಗ್ರೆಸ್ ನ ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ಕಾಶ್ಮೀರ ಸಮಸ್ಯೆ ಬಗ್ಗೆ ಸರಿಯಾಗಿ ಸ್ಪಂದಿಸಲೇ ಇಲ್ಲ. ಆದ್ದರಿಂದಲೇ ಇಷ್ಟು ವರ್ಷವಾದರೂ ಕಣಿವೆಯಲ್ಲಿ ಅದೇ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತದ ಅವಿಭಾಜ್ಯ ಅಂಗವಾದ ಜಮ್ಮು ಕಾಶ್ಮೀರದ ಪ್ರದೇಶವನ್ನು ಅಕ್ರಮವಾಗಿ ವಶ ಪಡಿಸಿಕೊಳ್ಳಲು ಪಾಕಿಸ್ತಾನ ಹವಣಿಸುತ್ತಿದೆ. ಈ ಸಮಸ್ಯೆ ಜೀವಂತವಾಗಿರಲು ಅಂದು ನೆಹರು ಅಂದಿನ ಗೃಹ ಸಚಿವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಹಸ್ತಕ್ಷೇಪ ಮಾಡಲು ಬಿಟ್ಟಿರಲಿಲ್ಲ. ಇದೀಗ ಆ ಸಮಸ್ಯೆ ದೈತ್ಯಾಕಾರವಾಗಿ ಬೆಳೆದು ನಿಂತಿದೆ. ನೆಹರು ಜಮ್ಮು ಕಾಶ್ಮೀರದ ಮುಖಂಡ ಶೇಖ್ ಅಬ್ದುಲ್ಲಾ ಜೊತೆ ವಿಶೇಷ ಸಂಬಂಧ ಹೊಂದಿದ್ದರು. ಅದಕ್ಕಾಗಿಯೇ ಅವರು ಜಮ್ಮು ಕಾಶ್ಮೀರದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದರು, ಆದರೆ ಅದು ದೇಶವಿರೋಧಿಯಾಗಿ ಪರಿಣಮಿಸಿತು ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search