• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸರ್ದಾರ್ ಪಟೇಲ್ ರಿಗೆ ನೆಹರು ಸ್ವಾತಂತ್ರ್ಯ ನೀಡಿದ್ದರೇ, ಜಮ್ಮು ಕಾಶ್ಮೀರದ ಸ್ಥಿತಿ ಬೇರೆಯೇ ಇರುತ್ತಿತ್ತು: ಕೇಂದ್ರ ಸಚಿವ ಜೀತೇಂದ್ರ ಸಿಂಗ್

TNN Correspondent Posted On June 27, 2018
0


0
Shares
  • Share On Facebook
  • Tweet It

ಜಮ್ಮು: ಜಮ್ಮು ಕಾಶ್ಮೀರದಲ್ಲಿ ಪ್ರಸ್ತುತ ಪರಿಸ್ಥಿತಿ ನಿರ್ಮಾಣಕ್ಕೆ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಅವರೇ ಕಾರಣ. ಅಂದು ಅವರು ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರಿಗೆ ಸ್ವಾತಂತ್ರ್ಯ ನೀಡಿದ್ದರೇ ಪ್ರಸ್ತುತ ಜಮ್ಮು ಕಾಶ್ಮೀರದ ಸ್ಥಿತಿಯೇ ಬೇರೆಯಾಗಿರುತ್ತಿತ್ತು ಎಂದು ಕೇಂದ್ರ ಸಚಿವ ಜೀತೇಂದ್ರ ಸಿಂಗ್  ಕಾಂಗ್ರೆಸ್ ಮೂಲವನ್ನು ಪ್ರಶ್ನಿಸಿದ್ದಾರೆ.

ಕಣಿವೆ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳು ಮತ್ತು ಕಾಶ್ಮೀರದ ಕುರಿತು ಕಾಂಗ್ರೆಸ್ ನಾಯಕರ ದೇಶವಿರೋಧಿ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಜೀತೇಂದ್ರ ಸಿಂಗ್, ನೆಹರು ಅವರು ದೇಶದ ಇತರ ರಾಜ್ಯಗಳ ಕುರಿತು ಸರ್ದಾರ್ ಪಟೇಲ್ ರಿಗೆ ನೀಡಿದ್ದ ಸ್ವಾತಂತ್ರ್ಯ ಜಮ್ಮು ಕಾಶ್ಮೀರದ ವಿಷಯದಲ್ಲಿ ನೀಡಿದ್ದರೇ, ದೇಶದ ಇತಿಹಾಸವೇ ಬೇರೆಯಾಗುತ್ತಿತ್ತು ಅಲ್ಲದೇ ದೇಶವನ್ನು ಬಹುದಿನಗಳಿಂದ ಆಳಿದ ಕಾಂಗ್ರೆಸ್ ನ ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ಕಾಶ್ಮೀರ ಸಮಸ್ಯೆ ಬಗ್ಗೆ ಸರಿಯಾಗಿ ಸ್ಪಂದಿಸಲೇ ಇಲ್ಲ. ಆದ್ದರಿಂದಲೇ ಇಷ್ಟು ವರ್ಷವಾದರೂ ಕಣಿವೆಯಲ್ಲಿ ಅದೇ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತದ ಅವಿಭಾಜ್ಯ ಅಂಗವಾದ ಜಮ್ಮು ಕಾಶ್ಮೀರದ ಪ್ರದೇಶವನ್ನು ಅಕ್ರಮವಾಗಿ ವಶ ಪಡಿಸಿಕೊಳ್ಳಲು ಪಾಕಿಸ್ತಾನ ಹವಣಿಸುತ್ತಿದೆ. ಈ ಸಮಸ್ಯೆ ಜೀವಂತವಾಗಿರಲು ಅಂದು ನೆಹರು ಅಂದಿನ ಗೃಹ ಸಚಿವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಹಸ್ತಕ್ಷೇಪ ಮಾಡಲು ಬಿಟ್ಟಿರಲಿಲ್ಲ. ಇದೀಗ ಆ ಸಮಸ್ಯೆ ದೈತ್ಯಾಕಾರವಾಗಿ ಬೆಳೆದು ನಿಂತಿದೆ. ನೆಹರು ಜಮ್ಮು ಕಾಶ್ಮೀರದ ಮುಖಂಡ ಶೇಖ್ ಅಬ್ದುಲ್ಲಾ ಜೊತೆ ವಿಶೇಷ ಸಂಬಂಧ ಹೊಂದಿದ್ದರು. ಅದಕ್ಕಾಗಿಯೇ ಅವರು ಜಮ್ಮು ಕಾಶ್ಮೀರದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದರು, ಆದರೆ ಅದು ದೇಶವಿರೋಧಿಯಾಗಿ ಪರಿಣಮಿಸಿತು ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search